Breaking News

ಅಪ್ರತಿಮ ಕ್ರಾಂತಿಕಾರಿ ಹೋರಾಟಗಾರರಾದ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ 127ನೇಜನ್ಮವರ್ಷಾಚರಣೆ

127th birth anniversary of legendary revolutionary Netaji Subhash Chandra Bose

ಕೊಪ್ಪಳ, ಜಿಲ್ಲಾ ಕ್ರೀಡಾಂಗಣ, ಶಾಲಾ ಕಾಲೇಜುಗಳು ಸೇರಿದಂತೆ ಜಿಲ್ಲೆಯ ವಿವಿಧಡೆ ಎಐಡಿಎಸ್ಓ ವತಿಯಿಂದ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ 127ನೇ ಜನ್ಮ ವರ್ಷಾಚರಣೆ ಕಾರ್ಯಕ್ರಮಗ ಜರುಗಿತು.
ಮಿಲಿಯಾಂತರ ಭಾರತೀಯರ ಪರವಾಗಿ ನಿಂತು, ಸ್ವಾತಂತ್ರ್ಯದ ಧ್ಯೇಯಕ್ಕಾಗಿ, ನನ್ನ ಜೀವನವನ್ನು ನೀಡಲು ಸಿದ್ಧನಿದ್ದೇನೆ. ಸತ್ಯಕ್ಕೆ ಏನಾದರೂ ಮಹತ್ವವಿದ್ದಲ್ಲಿ, ದೇಶದ ಜನ ಮುಂದೊಂದು ದಿನ ನನ್ನ ಮನಸ್ಸಿನ ಭಾವನೆಗಳನ್ನು ಅರ್ಥ ಮಾಡಿಕೊಳ್ಳುತ್ತಾರೆ.” ಎಂಬುದು ಸ್ವಾತಂತ್ರ್ಯ ಸಂಗ್ರಾಮದ ಜ್ವಾಲೆಗೆ ತನ್ನ ರಕ್ತ ತರ್ಪಣ ಮಾಡಿದ ಧೀರನೊಬ್ಬನ ನುಡಿಗಳು! ಆ ಧೀರನೇ, ನೇತಾಜಿ ಸುಭಾಷ್ ಚಂದ್ರ ಬೋಸ್.

ದಿನೇ ದಿನೇ ಸಾಂಸ್ಕೃತಿಕವಾಗಿ, ನೈತಿಕವಾಗಿ ಅಧಃಪತನ ಹೊಂದುತ್ತಿರುವ ಪ್ರಸಕ್ತ ಸಾಮಾಜಿಕ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳ ನಡುವೆ ಸ್ವಾತಂತ್ರ್ಯ ಹೋರಾಟದ ಮಹಾನ್ ಕ್ರಾಂತಿಕಾರಿಗಳಾದ ನೇತಾಜಿ, ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ಖುದಿರಾಮ್ ಬೋಸ್, ಅಶ್ವಾಖುಲ್ಲಾ ಖಾನ್ ಹಾಗೂ ಇನ್ನಿತರ ಉನ್ನತ ವಿಚಾರ, ಆದರ್ಶ ಹಾಗೂ ಮೌಲ್ಯಗಳನ್ನು ವಿದ್ಯಾರ್ಥಿಗಳ ನಡುವೆ ಕೊಂಡ್ಯೊಯ್ಯುವುದು ಅತ್ಯವಶ್ಯಕವಾಗಿದೆ.

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ಪ್ರತಿಯೊಬ್ಬರಿಗೂ ಶಿಕ್ಷಣ, ಉದ್ಯೋಗ, ಹೆಣ್ಣು ಮಕ್ಕಳು ಘನತೆ ಗೌರವದಿಂದ ಬದುಕುವ ಸಮ ಸಮಾಜ ನಿರ್ಮಾಣದ ಕನಸನ್ನು ಕಂಡಿದ್ದರು. ಆದರೆ ಅದಕ್ಕೆ ತದ್ವಿರುದ್ಧವಾಗಿ ಪ್ರಸ್ತುತ, ಶಿಕ್ಷಣದ ವ್ಯಾಪಾರೀಕರಣ, ನಿರುದ್ಯೋಗ, ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಹೆಚ್ಚಾಗುತ್ತಲೇ ಇವೆ. ಇಂತಹ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳು ನೇತಾಜಿಯವರ ವಿಚಾರಗಳನ್ನು ಅರಿತು, ಮೈಗೂಡಿಸಿಕೊಂಡು ಅನ್ಯಾಯ ಹಾಗೂ ಅಸತ್ಯದೊಂದಿಗೆ ಹೋರಾಡುತ್ತಾ ನೇತಾಜಿ ಅವರ ಕನಸಿನ ಭಾರತವನ್ನು ನಿರ್ಮಿಸುವ ಸಂಕಲ್ಪ ಮಾಡಬೇಕಿದೆ.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಲ್ಲಿ ಉನ್ನತ ಸಂಸ್ಕೃತಿ, ನೀತಿ-ನೈತಿಕತೆಗಳನ್ನು ಮೇಲೆತ್ತುವ ಉದ್ದೇಶದೊಂದಿಗೆ ಜನವರಿ 23ರ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ 127ನೇ ಜನ್ಮ ವಾರ್ಷಿಕದ ಸಂದರ್ಭದಲ್ಲಿ ಜಿಲ್ಲಾಯಾದ್ಯಂತ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ನಡುವೆ ಆಯೋಜಿಸಲಾಗಿದ್ದ.. ಪ್ರಬಂಧ, ರಸಪ್ರಶ್ನೆ ಹಾಗೂ ಚಿತ್ರಕಲೆ ಸ್ಪರ್ಧೆಗಳ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಸುದ್ದಿ ಇವರಿಂದ
ಗಂಗರಾಜ ಅಳ್ಳಳ್ಳಿ
ಜಿಲ್ಲಾ ಸಂಚಾಲಕರು
ಎಐಡಿಎಸ್ಓ ಕೊಪ್ಪಳ

About Mallikarjun

Check Also

ನವಲಿ ಮೌನೇಶ್ವರ ದೇವಸ್ಥಾನಜಿರ್ಣೋದ್ದಾರಕ್ಕೆ 50 ಸಾವಿರ ದೇಣಿಗೆ

ನವಲಿ: ಗ್ರಾಮದ ಶತವರ್ಷಗಳ ಹಳೆಯದಾದ ಮೌನೇಶ್ವರ ದೇವಸ್ಥಾನ ಜಿರ್ಣೋದ್ದಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿಗಳಾದ ಕಾಂತಪ್ಪ ಕೆ, …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.