Chamundeshwari Amman Vardhanti Mahotsav at Mysore Maramma Temple.
ವರದಿ : ಬಂಗಾರಪ್ಪ ಸಿ ಹನೂರು .
ಹನೂರು :ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ ಮಹೋತ್ಸವದ ಅಂಗವಾಗಿ ದೇವಿಗೆ ವಿಶೇಷ ಪೂಜಾ ಕಾರ್ಯಕ್ರಮಗಳು ಧಾರ್ಮಿಕವಾಗಿ ವಿಧಿ ವಿಧಾನಗಳೊಂದಿಗೆ ನಡೆಯಿತು .
ಹನೂರು ಪಟ್ಟಣದ ಆದಿಪರಶಕ್ತಿ ಮೈಸೂರು ಮಾರಮ್ಮ ದೇವಾಲಯದಲ್ಲಿ ಇಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ ಪ್ರಯುಕ್ತ ಹಿರಿಯ ಅರ್ಚಕ ಗೋಪಾಲ್ ರಾವ್ ಪವರ್ ಅರುಣ್ ರಾವ್ ಪವರ್ ಅವರಿಂದ ಸಮಯ ಬೆಳಿಗ್ಗೆ 3:00 ಘಂಟೆ ಯಿಂದ ತಾಯಿಗೆ ಹಾಲು ಮೊಸರು ಜೇನುತುಪ್ಪ ಬೆಣ್ಣೆ ಸೇರಿದಂತೆ ಎಳನೀರು ಅಭಿಷೇಕ ಹಾಗೂ ಅರಿಶಿನ ಕುಂಕುಮದ ಅಭಿಷೇಕ ಆಲಾಭಿಷೇಕ ಪಂಚಾಮೃತ ಅಭಿಷೇಕ ದೂಪದ ಆರತಿ ಹಾಗೂ ವಿವಿಧ ಹೂಗಳಿಂದ ಸಿಂಗರಿಸಿ ಬೆಳ್ಳಿ ಕಿರೀಟ ಧರಿಸಿ ವಿಶೇಷ ಅಲಂಕಾರ ಮಾಡುವ ಮೂಲಕ ಮಹಾ ಮಂಗಳಾರತಿಯೊಂದಿಗೆ ಚಾಮುಂಡೇಶ್ವರಿ ವರ್ದಂತಿ ಪೂಜಾ ಕಾರ್ಯಕ್ರಮಗಳನ್ನು ಧಾರ್ಮಿಕವಾಗಿ ವಿಧಿ ವಿಧಾನಗಳೊಂದಿಗೆ ಜರುಗಿಸಲಾಯಿತು ,ಇದನ್ನು ಪಟ್ಟಣ ಸೇರಿದಂತೆ ವಿವಿಧ ಗ್ರಾಮಗಳಿಂದ ಭಕ್ತರು ಆಗಮಿಸಿ ತಾಯಿಯ ಕೃಪೆಗೆ ಪಾತ್ರರಾದರು .
ಭಕ್ತರಿಗೆ
ಅನ್ನಸಾರ್ಪಣೆ : ಇದೇ ಸಮಯದಲ್ಲಿ ಇಂದು ನೆರವೆರಿಸಿದ ವಿಶೇಷ ಚಾಮುಂಡೇಶ್ವರಿ ದೇವಿಯ ಆರಾಧನೆ ಹಾಗೂ ವರ್ಧಂತಿ ಅಂಗವಾಗಿ ದೇವಾಲಯಕ್ಕೆ ಬರುವ ಭಕ್ತರಿಗೆ ಪೂಜೆ ಸಲ್ಲಿಸಿ ನಂತರ ಪ್ರಸಾದ ವಿನಿಯೋಗ ಮಾಡಲಾಯಿತು .
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…