Breaking News

ಜೀವಸಂಕುಲದ ರಕ್ಷಣೆಗೆ ಪರಿಸರ ಸಂರಕ್ಷಣೆ ಅವಶ್ಯ- ನಿವೃತ್ತ ಶಿಕ್ಷಣ ಅಧಿಕಾರಿಚಂದ್ರಶೇಖರ್

Environment protection is necessary to protect the living environment - Chandrasekhar, a retired education officer.

ಗಂಗಾವತಿ: ಸಕಲ ಜೀವರಾಶಿಗಳ ಅಳಿವು ಉಳಿವು ನಮ್ಮ ಸುತ್ತಲಿನ ಪರಿಸರದ ಮೇಲೆ ಅವಲಂಬಿತವಾಗಿದ್ದು ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ಪರಿಸರ ಸಂರಕ್ಷಣೆಗೆ ಮುಂದಾಗಬೇಕೆಂದು ನಿವೃತ್ತ ಶಿಕ್ಷಣ ಇಲಾಖೆ ಅಧಿಕಾರಿ ಚಂದ್ರಶೇಖರ್ ಹೇಳಿದರು ಅವರು ರವಿವಾರದಂದು ತಇಟಾ ಶಿಕ್ಷಣ ಸಂಸ್ಥೆ ಹಾಗೂ ಜನಶಕ್ತಿ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆ ಆಯೋಜಿಸಿದ ಪರಿಸರ ದಿನಾಚರಣೆ ಸಂದರ್ಭದಲ್ಲಿ ಸಸನೆಡುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು, ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಗಿಡಮರಗಳನ್ನು ಕಾಡುಗಳನ್ನು ನಾಶ ಮಾಡುತ್ತಿರುವುದು ಆತಂಕಕಾರಿಯಾಗಿದೆ ಈ ಹಿನ್ನೆಲೆಯಲ್ಲಿ ಮನೆಗೆ ಒಂದು ಮರದಂತೆ ಊರಿಗೆ ಒಂದು ಉದ್ಯಾನವನ ನಿರ್ಮಿಸಲು ಪ್ರತಿಯೊಬ್ಬರು ಮುಂದಾಗಬೇಕೆಂದು ತಿಳಿಸಿದರು ಸಂಸ್ಥೆಯ ಅಧ್ಯಕ್ಷ ಶೇಕ್ ನಬಿ ಸಾಬ್ ಮಾತನಾಡಿ ಮಾತನಾಡಿ, ಸಾಲುಮರದ ತಿಮ್ಮಕ್ಕನಂತೆ ಪ್ರತಿಯೊಬ್ಬರು ಹೇಳಮರಗಳನ್ನು ಬೆಳೆಸುವುದರ ಮೂಲಕ ಹಸಿರು ನಗರ ವನ್ನಗಿಸಲು ಪ್ರತಿಯೊಬ್ಬರು ಕಂಕಣಬದ್ದ ರಾಗಬೇಕು, ಸಸಿಗಳನ್ನು ಹಾಕುವುದು ಅಷ್ಟೇ ಅಲ್ಲ ಅವುಗಳನ್ನು ಮಕ್ಕಳಂತೆ ಜೋಪಾನ ಮಾಡಲು ಅಗತ್ಯ ಕ್ರಮಗಳನ್ನು ಅನುಸರಿಸಬೇಕೆಂದರು, ಸಂಸ್ಥೆ ಮುಖ್ಯೋಪಾಧ್ಯಾಯ ತಾಜುದ್ದೀನ್ ಪರಿಸರ ಕುರಿತಂತೆ ಪ್ರಮಾಣ ವಚನ ಬೋಧಿಸಿದ,ರು,, ಶಿಕ್ಷಕ ಲಿಂಗಾರೆಡ್ಡಿ ಆಲೂರ್ ಪ್ರಾಸ್ತಾವಿಕವಾಗಿ ಮಾತನಾಡಿದರು ಪರಿಸರ ಕುರಿತು ಮಕ್ಕಳು ಘೋಷಣೆಗಳನ್ನು ಕೂಗಿದರು, ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕರ ಕೆ ಮಂಜುನಾಥ್ ಯೂಸುಫ್ ಪಂಪಾಪತಿ ದುರ್ಗಾ ಪ್ರಸಾದ್, ವಿದ್ಯಾರ್ಥಿ ಪಾಲಕರಾದ ಹೇಮಾವತಿ ಶೇಷಗಿರಿ ಇತರರು ಪಾಲ್ಗೊಂಡಿದ್ದರು ಬಳಿಕ ಸಾರ್ವಜನಿಕರಿಗೆ ಸಸಿಗಳನ್ನು. ವಿತರಿಸಲಾಯಿತು,

About Mallikarjun

Check Also

ಜು. 16 ರಂದು ಉಚಿತ ಕೃತಕ ಅಂಗಾಂಗ ಜೋಡಣಾ ಶಿಬಿರ

Ju. Free Prosthesis Camp on 16th ಬೆಂಗಳೂರು; ನಾರಾಯಣ್‌ ಸೇವಾ ಸಂಸ್ಥಾನ್‌ ಸೇವಾ ಸಂಸ್ಥೆ ಯಿಂದ ಜುಲೈ 16 …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.