ಆರೋಗ್ಯ

ನೇಕಾರರ ಗಣತಿ, ಘಟಕಗಳ ಸಮೀಕ್ಷೆಗೆ ದಾಖಲೆ ಸಲ್ಲಿಸಲು ಸೂಚನೆ

Notice to submit records for census of weavers, survey of units

ಕೊಪ್ಪಳ ಜುಲೈ 10 (ಕರ್ನಾಟಕ ವಾರ್ತೆ): ವಿದ್ಯುತ್ ಮಗ್ಗ ನೇಕಾರರ ಮತ್ತು ಮಗ್ಗ ಪೂರ್ವ ಚಟುವಟಿಕೆಯಲ್ಲಿ ತೊಡಗಿರುವ ಕೆಲಸಗಾರರ ಗಣತಿ ಹಾಗೂ ಘಟಕಗಳ ಸಮೀಕ್ಷೆಗೆ ದಾಖಲಾತಿ ಸಲ್ಲಿಸುವಂತೆ ಕೊಪ್ಪಳ ಕೈಮಗ್ಗ ಮತ್ತು ಜವಳಿ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ವಿದ್ಯುತ್ ಮಗ್ಗ ನೇಕಾರರ ಹಾಗೂ ಮಗ್ಗ ಪೂರ್ವ ಚಟುವಟಿಕೆಯಲ್ಲಿ ತೊಡಗಿರುವ ಕೆಲಸಗಾರರ ಗಣತಿ ಮತ್ತು ಘಟಕಗಳ ಸಮೀಕ್ಷೆ ಈಗಾಗಲೇ ಮಾಡಲಾಗಿದೆ. ಈ ಸಮೀಕ್ಷೆ ಕಾರ್ಯ ಅಂತಿಮ ಹಂತದಲ್ಲಿದ್ದು, ಗಣತಿಯನ್ನು ಮಾಡಿಸದೇ ಇರುವ ಅಥವಾ ಬಿಟ್ಟು ಹೋದ ವಿದ್ಯುತ್ ಮಗ್ಗ ನೇಕಾರರು ಹಾಗೂ ಮಗ್ಗ ಪೂರ್ವ ಚಟುವಟಿಕೆಯಲ್ಲಿ ತೊಡಗಿರುವ ನೇಕಾರರು ಈ ಗಣತಿಯಲ್ಲಿ ನೋಂದಣಿ ಮಾಡಿಸಲು ವಿದ್ಯುತ್ ಮಗ್ಗ ಘಟಕದ ಮಾಲೀಕರು ತಮ್ಮ ಘಟಕದ ಆರ್.ಆರ್ ಸಂಖ್ಯೆ, ಉದ್ಯೋಗ ಆಧಾರ, ಇತ್ತೀಚಿನ ವಿದ್ಯುತ್ ಬಿಲ್, ಮೊಬೈಲ್ ಸಂಖ್ಯೆ ವಿವರಗಳುಳ್ಳ ದಾಖಲಾತಿಗಳನ್ನು ಘಟಕದ ಮೊಹರು ಹಾಗೂ ದೃಢೀಕರಣದೊಂದಿಗೆ ಜುಲೈ 25 ರೊಳಗಾಗಿ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಡಿ.ಐ.ಸಿ.ಕಂಪೌಂಡ್ ಅಶೋಕ್ ಸರ್ಕಲ್, ಕೊಪ್ಪಳ ಕಚೇರಿಗೆ ಸಲ್ಲಿಸಬಹುದಾಗಿದೆ.
ಗಣತಿ ಕಾರ್ಯ ಅಂತ್ಯಗೊಂಡ ನಂತರ ಯಾವುದೇ ಕಾರಣಕ್ಕೂ ಸೇರ್ಪಡೆ ಮಾಡಲು ಅವಕಾಶವಿರುವುದಿಲ್ಲ. ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಕೊಪ್ಪಳ ದೂರವಾಣಿ ಸಂಖ್ಯೆ: 08539-295469ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

8 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

8 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

8 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

8 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

8 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

8 hours ago