ಕೊಪ್ಪಳ ಸುದ್ದಿ

ಪಿಯುಸಿ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಫಲಿತಾಂಶಕ್ಕೆ ಆಂತರಿಕ ಅಂಕ ಪರಿಗಣಿಸುವ ಸರ್ಕಾರದ ನಿರ್ಧಾರದ ಬಗ್ಗೆ ಎಐಡಿಎಸ್ಓ ಆಕ್ಷೇಪ-ಎಐಡಿಎಸ್ಓ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್

AIDSO's objection to government's decision to consider internal marks for results of PUC Arts and Commerce students-AIDSO State Secretary Ajay Kamat
 

 

ಇನ್ನು ಮುಂದೆ ಪ್ರಥಮ ಮತ್ತು ದ್ವಿತೀಯ ಪಿಯುಸಿ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಫಲಿತಾಂಶಕ್ಕೆ ಅವರ ಆಂತರಿಕ ಅಂಕ (Student Achievement Tracking System, SATS) ಪರಿಗಣಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ನಿರ್ಧಾರದಿಂದ ವಿದ್ಯಾರ್ಥಿಗಳು ಎದುರಿಸಬಹುದಾದ ಸಮಸ್ಯೆಗಳ ಕಾರಣದಿಂದ ಎಐಡಿಎಸ್ಓ ಈ ನೀತಿಯ ಕುರಿತು ಆಕ್ಷೇಪ ವ್ಯಕ್ತಪಡಿಸುತ್ತದೆ. 

ಮೊದಲನೆಯದಾಗಿ, ಯಾವುದೇ ಹೊಸ ನಿರ್ಧಾರವನ್ನು ಶೈಕ್ಷಣಿಕ ವರ್ಷದ ಆರಂಭದಲ್ಲಿಯೇ ತೆಗೆದುಕೊಳ್ಳಬೇಕು ಮತ್ತು ಪರೀಕ್ಷೆಯ ರೂಪುರೇಷೆಯನ್ನು ಶಿಕ್ಷಣ ತಜ್ಞರನ್ನು ಒಳಗೊಂಡು ಪ್ರಜಾತಾಂತ್ರಿಕ ಪ್ರಕ್ರಿಯೆಯ ಮೂಲಕ ರೂಪಿಸಬೇಕು. ಆದರೆ ಪ್ರಸ್ತುತ ನಿರ್ಧಾರವು ಶೈಕ್ಷಣಿಕ ವರ್ಷ ಆರಂಭಗೊಂಡ ಬಳಿಕ ಬಂದಿದೆ ಹಾಗೂ ಯಾವುದೇ ಚರ್ಚೆಗಳು ಇಲ್ಲದೆ, ಅಪ್ರಜಾತಾಂತ್ರಿಕವಾಗಿ ಅನುಷ್ಠಾನಕ್ಕೆ ತರಲಾಗಿದೆ. ಎರಡನೆಯದಾಗಿ ಸದಾ ಕಾಲ ಪಿಯು ವಿದ್ಯಾರ್ಥಿಗಳು ಪರೀಕ್ಷೆ ಒತ್ತಡದಲ್ಲಿ ಇರುತ್ತಾರೆ, ಈ ಆಂತರಿಕ ಅಂಕ ಎನ್ನುವುದು ಅವರಲ್ಲಿ ಅನಗತ್ಯ ಒತ್ತಡವನ್ನು ಹೇರುತ್ತದೆಯೆ ವಿನಃ ಅವರನ್ನು ಒತ್ತಡ ಮುಕ್ತರನ್ನಾಗಿ ಮಾಡುವುದಿಲ್ಲ. ಶಿಕ್ಷಣದಲ್ಲಿ ಯಾವುದೇ ನೀತಿಗಳನ್ನು ತರುವ ಉದ್ದೇಶವು, ವಿದ್ಯಾರ್ಥಿಗಳಲ್ಲಿ ಜ್ಞಾನ, ವ್ಯಕ್ತಿತ್ವ ಬೆಳೆಸಲು ಅನುವು ಮಾಡಿಕೊಡಬೇಕು. ಆದರೆ ಆಂತರಿಕ ಅಂಕ ಎಂಬ ಪ್ರಕ್ರಿಯೆಯು ಇದಕ್ಕೆ ಒತ್ತು ನೀಡದೆ, ಅಂಕ ಗಳಿಸಿ, ಉತ್ತೀರ್ಣ ಹೊಂದುವುದನ್ನೇ ಶಿಕ್ಷಣದ ಧ್ಯೇಯವನ್ನಾಗಿಸುತ್ತದೆ. ಕಡೆಯದಾಗಿ, ವಿಜ್ಞಾನ ವಿಭಾಗದಲ್ಲಿ ಪ್ರಾಯೋಗಿಕ ವಿಷಯಕ್ಕೆ ಪರೀಕ್ಷೆಯ ಅಗತ್ಯವಿದ್ದು ಅದಕ್ಕೆ 30 ಅಂಕಗಳನ್ನು ನಿಗದಿ ಪಡಿಸಿರುವ ಹಾಗೆ, ಪ್ರಾಯೋಗಿಕ ವಿಷಗಳು ಇಲ್ಲದ ಕಲಾ ಮತ್ತು ವಾಣಿಜ್ಯ ವಿಭಾಗಕ್ಕೆ ಮಾಡುವ ಅಗತ್ಯವಿಲ್ಲ. ಹಾಗೆ ಮಾಡುವುದರಿಂದ ವಿದ್ಯಾರ್ಥಿಗಳ 20 ಅಂಕಗಳು ಶಿಕ್ಷಕರ ಹಿಡಿತಕ್ಕೆ ಬರುತ್ತದೆ ಮತ್ತು ಅದು ಒಳ್ಳೆಯ ಸಂಕೇತವಲ್ಲ. ಶಿಕ್ಷಣದ ವ್ಯಾಪಾರೀಕರಣ ಉದ್ದೇಶ ಹೊಂದಿರುವ ಖಾಸಗಿ ಕಾಲೇಜುಗಳು ಇದನ್ನು ದುರುಪಯೋಗ ಪಡಿಸಿಕೊಂಡು ವಿದ್ಯಾರ್ಥಿಗಳನ್ನು ಕಿರುಕುಳಕ್ಕೆ ಒಳಪಡಿಸುವುದು ಖಚಿತ. 

ಈ ಮೇಲಿನ ಕಾರಣಗಳಿಗಾಗಿ, ತನ್ನ ಆಕ್ಷೇಪವನ್ನು ವ್ಯಕ್ತಪಡಿಸುತ್ತದೆ. ಈ ಕೂಡಲೇ ರಾಜ್ಯ ಸರ್ಕಾರ ಪ್ರಥಮ ಮತ್ತು ದ್ವಿತೀಯ ಪಿಯುಸಿ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಫಲಿತಾಂಶಕ್ಕೆ ಆಂತರಿಕ ಅಂಕ ಪರಿಗಣಿಸುವ ನಿರ್ಧಾರವನ್ನು ಕೈ ಬಿಡಬೇಕು ಎಂದು ಎಐಡಿಎಸ್ಓ ಕರ್ನಾಟಕ ರಾಜ್ಯ ಸಮಿತಿ ಆಗ್ರಹಿಸುತ್ತದೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

9 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

9 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

9 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

9 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

9 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

9 hours ago