Breaking News

ಶಾಸಕ ರಾಯರೆಡ್ಡಿ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸಿದವರ ವಿರುದ್ಧ ಪೊಲೀಸರಿಂದ ಸ್ವಯಂ ಪ್ರೇರಿತ ದೂರು ದಾಖಲು.

Spontaneous complaint registered by the police against those who protested against MLA Rayareddy's statement.


ಗಂಗಾವತಿ: ಕಿಷ್ಕಿಂಧಾ ಅಂಜನಾದ್ರಿ ಪ್ರದೇಶದಲ್ಲಿ ಡ್ರಗ್ಸ್ ಮಾರಾಟ ವ್ಯಾಪಕವಾಗಿದ್ದು ಡ್ರಗ್ಸ್ ಹಬ್ ಆಗಿದೆ ಎಂದು ಸದನದ ಅಧಿವೇಶನದಲ್ಲಿ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ ಹೇಳಿಕೆ ನೀಡಿ ಇತಿಹಾಸ ಪ್ರಸಿದ್ಧ ಆನೆಗೊಂದಿ ಪ್ರದೇಶಕ್ಕೆ ಅವಮಾನ ಮಾಡಿದ್ದಾರೆಂದು ಖಂಡಿಸಿ ಆನೆಗೊಂದಿ, ಸಾಣಾಪೂರ ಭಾಗದ ಸ್ಥಳೀಯರು ಮತ್ತು ಹೊಟೇಲ್ ಮಾಲೀಕರು ಪ್ರತಿಭಟನೆಯ ಸಂದರ್ಭದಲ್ಲಿ ಸಾರ್ವಜನಿಕವಾಗಿ ಅವಾಚ್ಯಶಬ್ದ ನಿಂದಿಸಿ ಮತ್ತು ಸಾರ್ವಜನಿಕ ಸಂಚಾರಕ್ಕೆ ತೊಂದರೆಯುಂಟು ಮಾಡಿದ ಆರೋಪದಲ್ಲಿ ನಗರ ಪೊಲೀಸ್ ಇನ್ಸಪೆಕ್ಟರ್ ಅಡಿವೇಶ ಪ್ರತಿಭಟನೆ ನಡೆಸಿದವರ ವಿರುದ್ಧ ಕಲಂ 283,504 ಮತ್ತು 290 ಅಡಿಯಲ್ಲಿ 20 ಜನರ ವಿರುದ್ಧ ಕೇಸ್ ದಾಖಲಿಸಿದ್ದಾರೆ.

ಪ್ರತಿಭಟನೆ ನಿರತರಾದ ಶಿವಸಾಗರ ನಾಯಕ, ಗೋಪಿ,
ರಾಮಾಂಜನೇಯ, ಯರಿಸ್ವಾಮಿ, ವರುಣ್‌, ಸುನೀಲ್‌, ರಾಮಾಂಜನೇಯ, ಸಂತೋಷ,ಶ್ರೀಕಾಂತ ಹಾಗೂ ಇತರೆ, ಸುಮಾರು 15 ರಿಂದ 20 ಜನರ ವಿರುದ್ಧ ನಗರಠಾಣೆಯಲ್ಲಿ ಪೊಲೀಸರು ಸ್ವಯಂಪ್ರೇರಿತ ಕೇಸ್ ದಾಖಲಾಗಿದ್ದು ಇದುವರೆಗೂ ಪೊಲೀಸರು ಐವರನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

About Mallikarjun

Check Also

screenshot 2025 11 25 19 57 14 62 e307a3f9df9f380ebaf106e1dc980bb6.jpg

ವಿದ್ಯಾರ್ಥಿ ಮೇಲೆ ಹಲ್ಲೆ:  ಶಾಲೆಯ ವಿರುದ್ಧ ಪೊಲೀಸ್, ಮಕ್ಕಳ ಆಯೋಗಕ್ಕೆ ದೂರು

ವಿದ್ಯಾರ್ಥಿ ಮೇಲೆ ಹಲ್ಲೆ: ಶಾಲೆಯ ವಿರುದ್ಧ ಪೊಲೀಸ್, ಮಕ್ಕಳ ಆಯೋಗಕ್ಕೆ ದೂರು Student assaulted: Complaint filed against school, …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.