ಗಂಗಾವತಿ ಸುದ್ದಿ

ಶಾಸಕ ರಾಯರೆಡ್ಡಿ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸಿದವರ ವಿರುದ್ಧ ಪೊಲೀಸರಿಂದ ಸ್ವಯಂ ಪ್ರೇರಿತ ದೂರು ದಾಖಲು.

Spontaneous complaint registered by the police against those who protested against MLA Rayareddy's statement.


ಗಂಗಾವತಿ: ಕಿಷ್ಕಿಂಧಾ ಅಂಜನಾದ್ರಿ ಪ್ರದೇಶದಲ್ಲಿ ಡ್ರಗ್ಸ್ ಮಾರಾಟ ವ್ಯಾಪಕವಾಗಿದ್ದು ಡ್ರಗ್ಸ್ ಹಬ್ ಆಗಿದೆ ಎಂದು ಸದನದ ಅಧಿವೇಶನದಲ್ಲಿ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ ಹೇಳಿಕೆ ನೀಡಿ ಇತಿಹಾಸ ಪ್ರಸಿದ್ಧ ಆನೆಗೊಂದಿ ಪ್ರದೇಶಕ್ಕೆ ಅವಮಾನ ಮಾಡಿದ್ದಾರೆಂದು ಖಂಡಿಸಿ ಆನೆಗೊಂದಿ, ಸಾಣಾಪೂರ ಭಾಗದ ಸ್ಥಳೀಯರು ಮತ್ತು ಹೊಟೇಲ್ ಮಾಲೀಕರು ಪ್ರತಿಭಟನೆಯ ಸಂದರ್ಭದಲ್ಲಿ ಸಾರ್ವಜನಿಕವಾಗಿ ಅವಾಚ್ಯಶಬ್ದ ನಿಂದಿಸಿ ಮತ್ತು ಸಾರ್ವಜನಿಕ ಸಂಚಾರಕ್ಕೆ ತೊಂದರೆಯುಂಟು ಮಾಡಿದ ಆರೋಪದಲ್ಲಿ ನಗರ ಪೊಲೀಸ್ ಇನ್ಸಪೆಕ್ಟರ್ ಅಡಿವೇಶ ಪ್ರತಿಭಟನೆ ನಡೆಸಿದವರ ವಿರುದ್ಧ ಕಲಂ 283,504 ಮತ್ತು 290 ಅಡಿಯಲ್ಲಿ 20 ಜನರ ವಿರುದ್ಧ ಕೇಸ್ ದಾಖಲಿಸಿದ್ದಾರೆ.

ಪ್ರತಿಭಟನೆ ನಿರತರಾದ ಶಿವಸಾಗರ ನಾಯಕ, ಗೋಪಿ,
ರಾಮಾಂಜನೇಯ, ಯರಿಸ್ವಾಮಿ, ವರುಣ್‌, ಸುನೀಲ್‌, ರಾಮಾಂಜನೇಯ, ಸಂತೋಷ,ಶ್ರೀಕಾಂತ ಹಾಗೂ ಇತರೆ, ಸುಮಾರು 15 ರಿಂದ 20 ಜನರ ವಿರುದ್ಧ ನಗರಠಾಣೆಯಲ್ಲಿ ಪೊಲೀಸರು ಸ್ವಯಂಪ್ರೇರಿತ ಕೇಸ್ ದಾಖಲಾಗಿದ್ದು ಇದುವರೆಗೂ ಪೊಲೀಸರು ಐವರನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

5 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

5 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

5 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

5 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

6 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

6 hours ago