Breaking News

ಜುಲೈ 17ರ ದಿಶಾ ಸಮಿತಿ ಸಭೆ ಮುಂದೂಡಿಕೆ

Adjournment of the 17th July Disha Committee meeting

ಕೊಪ್ಪಳ ,(ಕರ್ನಾಟಕ ವಾರ್ತೆ): ಕೊಪ್ಪಳ ಸಂಸದರು ಹಾಗೂ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ಅಧ್ಯಕ್ಷರಾದ ಕರಡಿ ಸಂಗಣ್ಣ ಅವರ ಅಧ್ಯಕ್ಷತೆಯಲ್ಲಿ ಜುಲೈ 17ರಂದು ನಿಗದಿಪಡಿಸಲಾಗಿದ್ದ 2022-23ನೇ ಸಾಲಿನ 4ನೇ ತ್ರೈಮಾಸಿಕ ಹಾಗೂ 2023-24ನೇ ಸಾಲಿನ 1ನೇ ತ್ರೈಮಾಸಿಕದ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ (ದಿಶಾ) ಸಭೆಯನ್ನು ವಿಧಾನಸಭಾ ಅಧಿವೇಶನ ಜಾರಿಯಲ್ಲಿರುವ ಹಿನ್ನೆಲೆ ಮುಂದೂಡಲಾಗಿದೆ.
ಸಭೆಯ ಮುಂದಿನ ದಿನಾಂಕವನ್ನು ನಂತರದಲ್ಲಿ ತಿಳಿಸಲಾಗುವುದು ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ದಿಶಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು

About Mallikarjun

Check Also

ಎಲ್ಲಾ ಸಾಹಿತ್ಯ ಪ್ರಕಾರಗಳಿಗಿಂತ ಮೂಲ ಜಾನಪದ ಸಾಹಿತ್ಯಕ್ಕೆ ಶ್ರೇಷ್ಠತೆ ಹೆಚ್ಚು ! ಸಿ.ವಿ.ಜಡಿಯವರ ಅಭಿಪ್ರಾಯ

Original folk literature is superior to all other literary genres! C.V.Jadi's opinion ಕೊಪ್ಪಳ: ಎಲ್ಲಾ ಬಗೆಯ …

Leave a Reply

Your email address will not be published. Required fields are marked *