ಕಲ್ಯಾಣಸಿರಿ ವಿಶೇಷ

ಸಕ್ರಿಯ ಕ್ಷಯ ರೋಗ ಪತ್ತೆ ಆಂದೋಲನ ಉದ್ಘಾಟನಾಸಮಾರಂಭ ಉಪ ವಿಭಾಗ ಆಸ್ಪತ್ರೆ

Active Tuberculosis Detection Movement Inauguration Ceremony Sub Divisional Hospital
 

ಗಂಗಾವತಿ:ಸೋಮವಾರ ಜುಲೈ 17 ರಿಂದ ಆಗಸ್ಟ್ 3 ರ ವರೆಗೆ ಕೊಪ್ಪಳ ಜಿಲ್ಲೆಯಲ್ಲಿ ಕ್ಷಯರೋಗ ಪತ್ತೆ ಹಚ್ಚುವ ಕಾರ್ಯ ಆರಂಭವಾಗಲಿದೆ ಇದರ ಸದುಪಯೋಗವನ್ನು ಸಮಾಜದ ಎಲ್ಲಾ ನಾಗರಿಕರು ಬಳಸಿಕೊಂಡು ಕ್ಷಯ ಮುಕ್ತ ಸಮಾಜದ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಲಿಂಗರಾಜ್ ಅವರು ಮಾತನಾಡುತ್ತಾ ವಿಶೇಷವಾಗಿ ಗಂಗಾವತಿ ನಗರದ ಗುಂಡಮ್ಮ ಕ್ಯಾಂಪ್, ಲಕ್ಷ್ಮಿ ಕ್ಯಾಂಪ್, ಎಚ್ ಆರ್ ಎಸ್ ಕಾಲೋನಿ, ಗಾಂಧಿನಗರ, ಹಿರೇ ಜಂತಕಲ್, ಹಮಾಲರ ಕಾಲೋನಿ, ಮೆಹಬೂಬ ನಗರ, ಸಂತೆ ಬಯಲು, ಸಂಗಾಪುರ ಆನೆಗುಂದಿ ವೆಂಕಟಗಿರಿ ಶ್ರೀರಾಮನಗರ ಹೊಸಕೇರಿ ವಡ್ಡರಹಟ್ಟಿ, ಪ್ರದೇಶಗಳಲ್ಲಿ ಸಂಶಯಸ್ಪದ ಕ್ಷಯ ರೋಗಿಗಳು ಇದ್ದು ಪರೀಕ್ಷೆಗೆ ಒಳಪಡದ ಕಾರಣ 2022-23ರಲ್ಲಿ ಪತ್ತೆ ಪ್ರಮಾಣ ಕಡಿಮೆಯಾಗಿದೆ ಎಂದು ತಿಳಿಸಿದರು ಕಾರ್ಯಕ್ರಮದಲ್ಲಿ ಮಾತನಾಡಿದ ಉಪ ವಿಭಾಗ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳಾದ ಡಾಕ್ಟರ್ ಈಶ್ವರ ಸವಡಿ ಅವರು ಒಬ್ಬ ಚಿಕಿತ್ಸೆ ಪಡೆಯದ ಕ್ಷಯ ರೋಗಿಯು ಒಂದು ವರ್ಷಕ್ಕೆ ಸುಮಾರು 15 ರಿಂದ 18 ಜನಕ್ಕೆ ಕ್ಷಯ ರೋಗವನ್ನು ಹರಡಿಸಬಲ್ಲ ಆದ್ದರಿಂದ ಸಂಶಯಸ್ಪದ ಕ್ಷಯರೋಗದ ಲಕ್ಷಣಗಳಾದ ಎರಡು ವಾರಕ್ಕೂ ಮೇಲ್ಪಟ್ಟು ಕೆಮ್ಮು ಸಾಯಂಕಾಲದ ವೇಳೆ ಜ್ವರ ಬರುವುದು ಹಸಿವೆ ಆಗದಿರುವುದು ಕಫದಲ್ಲಿ ರಕ್ತ ಬೀಳುವುದು ದೇಹದ ತೂಕ ಕಡಿಮೆಯಾಗಿರುವುದು ಕತ್ತು ಮತ್ತು ಕಂಕಳಲ್ಲಿ ಗಡ್ಡೆಗಳಾಗಿರುವುದು ಲಕ್ಷಣಗಳು ಗೋಚರಿಸಿದಾಗ ಹತ್ತಿರದ ಆಶಾ ಕಾರ್ಯಕರ್ತೆಯರು ಅಥವಾ ಇಂದಿನಿಂದ 15 ದಿನಗಳವರೆಗೆ ಪ್ರತಿ ಮನೆಗೆ ಇಲಾಖೆಯ ಆರೋಗ್ಯ ಕಾರ್ಯಕರ್ತರು ಭೇಟಿ ನೀಡುವಾಗ ಮಾಹಿತಿಯನ್ನು ಹಂಚಿಕೊಳ್ಳಬೇಕೆಂದು ಎಂದು ಸಲಹೆ ನೀಡಿದರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾಕ್ಷಯ ರೋಗ ನಿರ್ಮೂಲ ಕಚೇರಿ ಕೊಪ್ಪಳ ಉಪ ವಿಭಾಗ ಆಸ್ಪತ್ರೆ ಹಾಗೂ ತಾಲೂಕ ಆರೋಗ್ಯ ಅಧಿಕಾರಿಗಳ ಕಚೇರಿ ಗಂಗಾವತಿ ಕ್ಷಯರೋಗ ಘಟಕದಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಎಲ್ಲರೂ ಕೈ ಜೋಡಿಸಿ 2025 ಕ್ಕೆ ಕ್ಷಯ ಮುಕ್ತ ಸಮಾಜ ಮಾಡಲು ಸಹಕರಿಸಬೇಕು ಎಂದು ಮನವಿ ಮಾಡಿದರು, ಕಾರ್ಯಕ್ರಮದಲ್ಲಿ ತಾಲೂಕ ಆರೋಗ್ಯ ಅಧಿಕಾರಿಗಳಾದ ಡಾಕ್ಟರ್ ಶರಣಪ್ಪ ಚಕೋರಿ ವಿಜಯಪ್ರಸಾದ್ ಮಲ್ಲಿಕಾರ್ಜುನ್ ರಾಘವೇಂದ್ರ ಜೋಶಿ ಕಾಶಿಮ್ ಬಿ ಹನುಮಂತಪ್ಪ ಹಾಗೂ ಆರೋಗ್ಯ ಕಾರ್ಯಕರ್ತರು ಭಾಗವಹಿಸಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

12 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

12 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

12 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

12 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

12 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

13 hours ago