ಕಲ್ಯಾಣಸಿರಿ ವಿಶೇಷ

ಭೀಮನ ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತ‌ಸಾಗರ

The sea of ​​devotees flowed to the hill Mahadeshwar on the occasion of Bhima's new moon

ಹನೂರು:ತಾಲ್ಲೊಕಿನ ಪ್ರಸಿದ್ದ ಯಾತ್ರ ಸ್ಥಳವಾದ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಭೀಮನ ಅಮಾವಾಸ್ಯೆ ಪ್ರಯುಕ್ತ ಶ್ರೀ ಸಾಲೂರು ಬೃಹನ್ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿಗಳವರ ಸಹಯೋಗದಲ್ಲಿ ಶ್ರೀ ಮಲೈ ಮಹದೇಶ್ವರ ಸ್ವಾಮಿಗೆ ವಿಶೇಷ ಪೂಜೆ ಉತ್ಸವಗಳು ನೆರವೆರಿದವು.
ಅಮಾವಾಸ್ಯೆ ಪ್ರಯುಕ್ತ ಶ್ರೀ ಮಲೆ ಮಹದೇಶ್ವರ ಸ್ವಾಮಿಗೆ ಶೃಂಗಾರ ಮಾಡಲಾಗಿತ್ತು , ನಂತರ ಸಹಸ್ರಾರು ಭಕ್ತಾದಿಗಳ ದರ್ಶನಕ್ಕೆ ಸ್ವಾಮಿಯನ್ನು ಅನುವು ಮಾಡಿಕೊಡಲಾಯಿತು.

ಮಾದಪ್ಪನ ಸನ್ನಿಧಿಯ ಮಂಟಪದ ಸುತ್ತಲೂ ವಿವಿಧ ಹೂಗಳು ಹಣ್ಣು ತರಕಾರಿಗಳಿಂದ ಅಲಂಕಾರ ಮಾಡಲಾಗಿತ್ತು. ಮಾದಪ್ಪನ ದರ್ಶನಕ್ಕೆ ಬಂದ ಭಕ್ತರು ಸನ್ನಿಧಿ ಮಂಟಪದ ಸುತ್ತಲೂ ಮಾಡಲಾಗಿದ್ದ ಅಲಂಕಾರವನ್ನು ನೋಡಿ ಕಣ್ತುಂಬಿಕೊಂಡರು.
ಶ್ರೀ ಕ್ಷೇತ್ರದಲ್ಲಿ ಅಮಾವಾಸ್ಯೆ ಹಿನ್ನೆಲೆ ತಾಲೂಕು ಜಿಲ್ಲೆ ಸೇರಿದಂತೆ ಬೆಂಗಳೂರು ಹಲಗೂರು, ಕನಕಪುರ, ಕೆಂಗೇರಿ ರಾಮನಗರ, ಮಂಡ್ಯ, ಮಳವಳ್ಳಿ, ಮೈಸೂರು, ಕೊಡಗು, ಶಿವಮೊಗ್ಗ, ತಮಿಳುನಾಡು ಭಾಗದಿಂದಲೂ ಲಕ್ಷಾಂತರ ಭಕ್ತಾಸಾಗರ ಹರಿದು ಬರುತ್ತಿದ್ದು ಎಲ್ಲಾರಿಗೂ ಉತ್ತಮ ವ್ಯವಸ್ತೆಯನ್ನು ಮಾಡಲಾಗಿತ್ತು . ಭಕ್ತರಿಗೆ ದಾಸೋಹ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಪ್ರಾಧಿಕಾರ ಆಡಳಿತ ಸುಸಜ್ಜಿತವಾಗಿ ವ್ಯವಸ್ಥೆ ಮಾಡಲಾಗಿದ್ದು ಸ್ಥಳಿಯ ಅರಕ್ಷಕ ಠಾಣ ಸಿಬ್ಬಂದಿಯು ಸಹ ಹೆಚ್ವಿನ ಬಿಗಿ ಬದೊಬಸ್ತೂ ಮಾಡಿದರು .

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

13 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

14 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

14 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

14 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

14 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

14 hours ago