Dr. Rayalu's new hospital 'Sai Paduka' started.
ಗಂಗಾವತಿ: ಮಾಜಿ ಸಚಿವ ಶ್ರೀರಂಗದೇವರಾಯಲು ಮತ್ತು ಶ್ರೀಮತಿ ಲಲಿತಾ ರಾಣಿಯವರ ಎರಡನೇ ಪುತ್ರ ಡಾ.ವೀರ ಸಿಂಹ ನರಸಿಂಹ ದೇವರಾಯಲು ಅವರು ಆನೆಗುಂದಿ ರಸ್ತೆಯಲ್ಲಿ ಗುರುವಾರ ಹೊಸದಾಗಿ ತಮ್ಮ ಆಸ್ಪತ್ರೆ ಆರಂಭಿಸಿದರು.
ಶಸ್ತ್ರ ಚಿಕಿತ್ಸಕರಾದ ಡಾ.ರಾಯಲು,ಲ್ಯಾಪ್ರೋಸ್ಕೋಪಿಕ್ ತಜ್ಞರಾಗಿದ್ದು ,ಹತ್ತು ವರ್ಷಗಳ ಕಾಲ ವಿದೇಶದಲ್ಲಿ ಸೇವೆ ಸಲ್ಲಿಸಿದ್ದಾರೆ.ಈ ಮೊದಲು ಹೊಸಪೇಟೆ ನಗರದಲ್ಲಿ ತಮ್ಮ ಆಸ್ಪತ್ರೆ ಆರಂಭಿಸಿದ್ದ ಇವರು ಇದೀಗ ಗಂಗಾವತಿ ನಗರದಲ್ಲಿ ನೂತನವಾಗಿ ಆಸ್ಪತ್ರೆ ಆರಂಭಿಸಿದ್ದಾರೆ.
ಇದುವರೆಗೂ ಗಂಗಾವತಿ ಭಾಗದ ಜನತೆ ಲ್ಯಾಪ್ರೊಸ್ಕೋಪಿಕ್ ಚಿಕಿತ್ಸೆಗಾಗಿ ಬೇರೆ ಬೇರೆ ಊರಿನ ವೈಧ್ಯರನ್ನು ಅವಲಂಭಿಸಬೇಕಾಗಿತ್ತು.ಇದೀಗ ಗಂಗಾವತಿ ನಗರದಲ್ಲಿಯೇ ಲ್ಯಾಪ್ರೋಸ್ಕೋಪಿಕ ತಜ್ಞರು ಲಭ್ಯವಾಗಲಿದ್ದಾರೆ.
ನೂತನ ಆಸ್ಪತ್ರೆಗೆ ಭೇಟಿ ನೀಡಿದ ರಾಜ್ಯ ಔಷಧ ತಜ್ಞರ ಸಂಘದ ಅಧ್ಯಕ್ಷ ಮತ್ತು ರಾಜ್ಯ ಔಷಧ ವ್ಯಾಪಾರಿಗಳ ಸಂಘದ ಉಪಾಧ್ಯಕ್ಷ ಅಶೋಕಸ್ವಾಮಿ ಹೇರೂರ, ತುಂಗಭದ್ರಾ ಕಾಡಾ ಮಾಜಿ ಅಧ್ಯಕ್ಷ ಎಚ್.ಗಿರೇಗೌಡ, ನ್ಯಾಯವಾದಿ ಸಂಧ್ಯಾ ಪಾರ್ವತಿ ಮತ್ತು ಸ್ಥಳೀಯ ಔಷಧ ವಿತರಕ ನಾಗರಾಜಸ್ವಾಮಿ ಡಾ.ರಾಯಲು ಅವರಿಗೆ ಶುಭ ಕೋರಿದರು.ಶ್ರೀಮತಿ ಲಲಿತಾ ರಾಣಿ ಮತ್ತಿತರರು ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…