ಕಲ್ಯಾಣಸಿರಿ ವಿಶೇಷ

ಹನುಮಂತಪ್ಪ ಅಂಡಗಿ ಅವರಿಗೆ ಅಂಜನಾದ್ರಿ ಸದ್ಭಾವನಾ ಪ್ರಶಸ್ತಿ

Anjanadri Goodwill Award to Hanumanthappa Andagi

ಕೊಪ್ಪಳ : ಕೊಪ್ಪಳ ತಾಲೂಕಿನ ಹಿರೇಸಿಂದೋಗಿಯ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರಾದ ಹನುಮಂತಪ್ಪ ಅಂಡಗಿ ಚಿಲವಾಡಗಿ ಅವರಿಗೆ ಗಂಗಾವತಿಯ ಸರೋಜಮ್ಮ ಕಲ್ಯಾಣ ಮಂಟಪದಲ್ಲಿ ಅಂಜನಾದ್ರಿ ಸಾಂಸ್ಕೃತಿಕ ಉತ್ಸವ ಸಮಿತಿ ಹಮ್ಮಿಕೊಂಡ ಅಂಜನಾದ್ರಿ ಸಾಂಸ್ಕೃತಿಕ ಉತ್ಸವದಲ್ಲಿ “ಅಂಜನಾದ್ರಿ ಸದ್ಭಾವನ ಪ್ರಶಸ್ತಿ “ನೀಡಿ ಗೌರವಿಸಲಾಯಿತು. ಹನುಮಂತಪ್ಪ ಅಂಡಗಿ ಚಿಲವಾಡಗಿ ಅವರು ಇಲ್ಲಿಯವರೆಗೆ ಗವಿಸಿರಿ, ಗವಿಬೆಳಕು, ವಿಶ್ವಗಿರಿ, ಬಂಡಾಯಗಾರ ಬರಗೂರು, ಕುಂಬಾರರಿಗೆ ಜ್ಞಾನಪೀಠ ಅಭಿನಂದನೆ, ಸೇವಾಸಿರಿ ಸೇರಿದಂತೆ ಒಟ್ಟು 35 ಗ್ರಂಥಗಳನ್ನು ಒಟ್ಟಾರೆ ಅವರ ಸಾಹಿತ್ಯ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಅಂಜನಾದ್ರಿ ಉತ್ಸವ ಸಮಿತಿಯ ಸಂಚಾಲಕರಾದ ಮಹೇಶಬಾಬು ಸರ್ವೆ, ಟ್ರಸ್ಟಿಗಳಾದ ಉಮೇಶ ಪೂಜಾರ, ಶಿವಕುಮಾರ ಹಿರೇಮಠ, ಕೊಪ್ಪಳ ಜಿಲ್ಲಾ ನಾಗರಿಕರ ವೇದಿಕೆಯ ಗೌರವಾಧ್ಯಕ್ಷರಾದ ಎಂ.ಬಿ. ಅಳವಂಡಿ ಪತ್ರಕರ್ತರಾದ ಎಂ.ಸಾಧಿಕಲಿ, ಜಿ.ಎಸ್. ಗೋನಾಳ, ಮಂಜುನಾಥ ಕೋಳೂರು, ಶರಣಪ್ಪ ಹಾದಿ, ರಾಮನಗೌಡ ಮಾನ್ವಿ, ರಥಶಿಲ್ಪಿಗಳಾದ ಯಲ್ಲಪ್ಪ ಬಡಿಗೇರ, ಲಕ್ಷ್ಮೀದೇವಿ ಬಡಿಗೇರ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

17 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

17 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

17 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

17 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

17 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

18 hours ago