ಮಕ್ಕಳ ಸಂರಾಕ್ಷಣಾ ಕಾಯ್ದೆ ಕುರಿತು ಜಾಗೃತಿ ಕಾರ್ಯಕ್ರಮ

Awareness Program on Child Protection Act

ಗಂಗಾವತಿ.27 ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ತಾಲೂಕು ಆಡಳಿತ ತಾಲೂಕು ಪಂಚಾಯತ್ ಜಿಲ್ಲಾ ಪೊಲೀಸ್ ಇಲಾಖೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕೊಪ್ಪಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಮತ್ತು ಭ್ರೈಟ್ ಇಂಡಿಯಾ ಸೋಸೈಟಿ ಇವರ ಸಂಯೋಗದೊಂದಿಗೆ ಇಂದು ಶ್ರೀ ಚನ್ನಮಲ್ಲಿಕಾರ್ಜುನ ಸಭಾಂಗಣದಲ್ಲಿ ಮಕ್ಕಳ ಸಂರಾಕ್ಷಣಾ ಕಾಯ್ದೆ ಕುರಿತು ಜಾಗೃತಿ ಕಾರ್ಯಕ್ರಮ ಉದ್ಘಾಟಿಸಲಾಯಿತು
ನಂತರ ಉದ್ಘಾಟಿಸಿ ಮಾತನಾಡಿದ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ರಾಮತ್ನಾಳ ಅವರು 18 ರ ಒಳಗಿನ ಬಾಲಕಿ 21 ರ ಒಳಗಿನ ಪುರುಷರನ ಮದುವೆಯ ಯೋಚನೆ ಬಿಟ್ಟು ಬಿಡಿ ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ ಬಾಲ್ಯ ವಿವಾಹ ತಡೆಗಟ್ಟಿ ಮಕ್ಕಳ ಬಾಳು ಬೆಳಗಿಸಬೇಕು ಚಿಕ್ಕ ವಯಸ್ಸಿನಲ್ಲ ಮದುವೆ ಮಾಡಿದರೆ ವಯಸ್ಸಿಗೆ ಮೀರಿದ ಜವಾಬ್ದಾರಿ ಹೊರಿಸಿದಂತಾಗುತ್ತದೆ,ಅಪ್ರಾಪ್ತ ವಯಸ್ಸಿನಲ್ಲಿ ಗರ್ಭಿಣಿಯಾಗುವುದರಿಂದ ಗರ್ಭಕೋಶದ ಬೆಳವಣಿಗೆ ಪೂರ್ಣಗೊಳ್ಳದೆ ಗರ್ಭಪಾತದ ಸಾಧ್ಯತೆ ಹೆಚ್ಚು ಹಾಗೂ ತಾಯಂದಿರ ಶಿಶು ಮರಣ ಮತ್ತು ಮಕ್ಕಳ ಮರಣ ಸಾಧ್ಯತೆ ಇರುತ್ತದೆ. ಎಳೆಯ ವಯಸ್ಸಿನಲ್ಲಿಯೇ ವಿಧವೆಯಾಗುವ ಸಾಧ್ಯತೆ ಅಧಿಕವಾಗಿದೆ ಬಾಲಕಿಯು ಮಾನಸಿಕ ಕಳೆದುಕೊಳ್ಳುವ ಬಹುದಾಗಿದೆ ಶಾಲೆ ಬಿಡುವ ಮಕ್ಕಳ ಸಂಖ್ಯೆ ಹೆಚ್ಚಾಗಿ ಶಿಕ್ಷಣದಿಂದ ವಂತಿತರಾಗಿ ಬಡತನ ಅನಕ್ಷರತೆ ನಿರುದ್ಯೋಗ ಹೆಚ್ಚಾಗುತ್ತದೆ ಎಂದು ಸಲಹೆಯನ್ನು ನೀಡಿದರು
ನಂತರ ಮಾತನಾಡಿದ ತಾಲೂಕು ವೈದ್ಯಾಧಿಕಾರಿಗಳಾದ ಶರಣಪ್ಪ ಚಕ್ಕೋತಿ ಅವರು ನಮ್ಮ ಗಂಗಾವತಿ ‌ನಗರದಲ್ಲಿ ಎಲ್ಲಾ ನಮ್ಮ ಆರೋಗ್ಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತರು ಮತ್ತು ಅಂಗನವಾಡಿ ಕಾರ್ಯಕರ್ತರು ಈಗಾಗಲೇ ಬಾಲ್ಯವಿವಾಹ ಮತ್ತು ಬಾಲ‌ ಕಾರ್ಮಿಕ ಪದ್ದತಿ ಬಗ್ಗೆ ಪ್ರತಿಯೊಂದು ವಾರ್ಡ್ ನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಮೂಲಕ ಮನವರಿಕೆಯನ್ನು ಮಾಡಿದ್ದಾರೆ ಮತ್ತು ಹೆಚ್ಚಿನ ಪ್ರಮಾಣದಲ್ಲಿ ಈ ಒಂದು ತರಬೇತಿಯನ್ನು ಸಂಪೂರ್ಣವಾಗಿ ಪಡೆದುಕೊಂಡರು ತಮ್ಮ ತಮ್ಮ ವಾರ್ಡ್ ನಲ್ಲಿ ಸಾರ್ವಜನಿಕರಿಗೆ ಮನ ಹೊಲಸುವ ಕೆಲಸವನ್ನು ಮಾಡುತ್ತಾರೆ ಎಂದು ಹೇಳಿದರು
ಈ ಸಂದರ್ಭದಲ್ಲಿ ಜಿಲ್ಲಾ ‌ಮಕ್ಕಳ ರಕ್ಷಣಾಧಿಕಾರಿಗಳಾದ ರೋಹಿಣಿ ಕೋಟಗಾರ್, ಶಿಕ್ಷಣ ಸಂಯೋಜಕರಾದ ರಾಘವೇಂದ್ರ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ವಿಸ್ತರಣಾಧಿಕಾರಿ ಶ್ರೀನಿವಾಸ ನಾಯಕ್,ಹಿಂದುಳಿದ ವರ್ಗದ ಕಲ್ಯಾಣಧಿಕಾರಿ ಉಷಾ ಮುಜುಂದಾರ್,ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕರಾದ ಶರಣಪ್ಪ,ಹಿರಿಯ ಮೇಲ್ವಿಚಾರಣದಿಕಾರಿ ಶರಣಮ್ಮ,ರವಿ ಬಡಿಗೇರ,ಆರೋಗ್ಯ ಸಿಬ್ಬಂದಿ ಮಂಜುಳಾ ಅಂಗನವಾಡಿ ಕಾರ್ಯಕರ್ತರಾದ ಸಾವಿತ್ರಿ ಜೋಶಿ, ಹುಲಿಗೆಮ್ಮ,ಗಿರೀಜಾ,ಶರಣಮ್ಮ ಕಲ್ಮಾಠ,ಮೈಮುದಾಬೇಗಂ,ಕವಿತಾ,ಶೈಲಜಾ, ಮೇರಿ ಆಶಾ ಕಾರ್ಯಕರ್ತರಾದ ವಿಜಯಲಕ್ಷ್ಮಿ ಆಚಾರ್ಯ, ಶರಣಮ್ಮ,ಸುಮಾ,ಜ್ಯೋತಿ, ಮೀನಾಕ್ಷಿ, ಸರೋಜಬಾಯಿ,ಸರಸ್ವತಿ, ಗೌಸೀಯಾ, ರೇಖಾ,ದೀಪಾ,ಈರಮ್ಮ, ನೇತ್ರಾ,ಆಫ್ರೀನಾ,ಜಯಶ್ರೀ ಸೇರಿದಂತೆ ಇತರರು ಇದ್ದರು

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

12 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

12 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

12 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

12 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

12 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

12 hours ago