Breaking News

ಶೌಚಾಲಯ ಬಳಕೆ, ನೈರ್ಮಲ್ಯ, ಶುಚಿತ್ವ ಜಾಗೃತಿ: ನೀತಿ ಕಥೆ-ಕವನ ರಚನೆಗೆ ಅವಕಾಶ.

Toilet use, hygiene, cleanliness awareness: an opportunity for policy story-poetry creation

ಕೊಪ್ಪಳ ಜುಲೈ 27 (ಕರ್ನಾಟಕ ವಾರ್ತೆ): ಶೌಚಾಲಯ ಬಳಕೆ, ನೈರ್ಮಲ್ಯ ಹಾಗೂ ಶುಚಿತ್ವ ಕುರಿತು ಜಾಗೃತಿ ಮೂಡಿಸಲು ನೀತಿ ಕಥೆ ಮತ್ತು ಕವನಗಳನ್ನು ರಚಿಸಿ ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ.
ಗ್ರಾಮೀಣ ಪ್ರದೇಶಗಳಲ್ಲಿ ನಿರ್ಮಿಸಿದ ವೈಯಕ್ತಿಕ ಶೌಚಾಲಯ ಬಳಕೆ, ನೈರ್ಮಲ್ಯ ಮತ್ತು ಶುಚಿತ್ವ ಕಾಪಾಡುವ ದೃಷ್ಠಿಯಿಂದ ಶಾಲಾ ಹಾಗೂ ಅಂಗನವಾಡಿ ಮಕ್ಕಳಲ್ಲಿ ಜಾಗೃತಿ ಮೂಡಿಸಲು ನೀತಿ ಕಥೆ ಮತ್ತು ಕವನಗಳನ್ನೊಳಗೊಂಡ ಪುಸ್ತಕವನ್ನು ಸಿದ್ದಪಡಿಸಲಾಗುತ್ತಿದೆ. ಈ ಪ್ರಯುಕ್ತ ಸಾರ್ವಜನಿಕರು ನೀತಿ ಕಥೆ ಮತ್ತು ಕವನಗಳನ್ನು (200 ರಿಂದ 250 ಪದಗಳ ಮಿತಿಯಲ್ಲಿ) ಸಿದ್ದಪಡಿಸಿ, ವಾಟ್ಸ್ಅಪ್ ನಂಬರ್ 9980128210, 9481085235, 8971363678 ಗೆ ಜುಲೈ 31ರ ಸಂಜೆ 5.30ರೊಳಗಾಗಿ ಕಳುಹಿಸಿ ಕೊಡಬೇಕು ಎಂದು ಕೊಪ್ಪಳ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಎಂ.ಎ ರೆಡ್ಡೇರ್ ಅವರು ತಿಳಿಸಿದ್ದಾರೆ.

ಜಾಹೀರಾತು

About Mallikarjun

Check Also

ಸೆ.20 ರಂದು ವಿದ್ಯಾರ್ಥಿಗಳಿಗಾಗಿ ಮ್ಯಾರಥಾನ್ ಸ್ಪರ್ಧೆ

Marathon competition for students on September 20 ಕೊಪ್ಪಳ ಸೆಪ್ಟೆಂಬರ್ 11, (ಕರ್ನಾಟಕ ವಾರ್ತೆ): ನ್ಯಾಕೋ ಅವರ ಮಾರ್ಗಸೂಚಿಯಂತೆ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.