Breaking News

ತುಂಗಭದ್ರಾ ಆಣೆಕಟ್ಟಿನಿಂದ ಕಾಲುವೆಗಳಿಗೆ ನೀರು ಹರಿಸಲು ಸಂಸದರಾದ ಕರಡಿ ಸಂಗಣ್ಣ ಒತ್ತಾಯ

MP Karadi Sanganna insists to release water from Tungabhadra dam to the canals

ಕೊಪ್ಪಳ ಜುಲೈ 31 (ಕರ್ನಾಟಕ ವಾರ್ತೆ): ರೈತರ ಹಿತದೃಷ್ಟಿಯಿಂದಾಗಿ ತುಂಗಭದ್ರಾ ಆಣೆಕಟ್ಟಿನಿಂದ ಕಾಲುವೆಗಳಿಗೆ ನೀರು ಹರಿಸಲು ಅಗತ್ಯ ಕ್ರಮ ವಹಿಸಬೇಕು ಕೊಪ್ಪಳ ಸಂಸದರಾದ ಕರಡಿ ಸಂಗಣ್ಣ ಅವರು ಒತ್ತಾಯಿಸಿದ್ದಾರೆ.
ಪ್ರಸ್ತುತ ತುಂಗಭದ್ರಾ ಆಣೆಕಟ್ಟಿಗೆ 76.19 ಟಿಎಂಸಿ ನೀರು ಸಂಗ್ರಹಣೆಯಾಗಿದೆ. ಅಲ್ಲದೇ ನೀರಿನ ಹರಿವು ಉತ್ತಮವಾಗಿದ್ದು, ಮಳೆ ಕೂಡ ಉತ್ತಮವಾಗಿ ಆಗುತ್ತಿರುವುದರಿಂದ ಜಲಾಶಯ ಅತೀ ಶೀಘ್ರದಲ್ಲಿ ಭರ್ತಿಯಾಗಲಿದೆ. ಕೊಪ್ಪಳ, ಬಳಾರಿ, ವಿಜಯನಗರ ಹಾಗೂ ರಾಯಚೂರು ಜಿಲ್ಲೆಯ ರೈತರಿಗೆ ಇದು ಜೀವ ನದಿಯಾಗಿದ್ದು, ರೈತರು ಈಗಾಗಲೇ ಭತ್ತದ ನಾಟಿಗಾಗಿ ಸಸಿ ಮಡಿಗಳನ್ನು ಸಿದ್ಧಪಡಿಸಿಕೊಂಡು ನೀರಿಗಾಗಿ ಕಾಯುತ್ತಿದ್ದಾರೆ. ಕಾರಣ ತಡ ಮಾಡದೇ ಐಸಿಸಿ ಸಭೆ ಕರೆದು ಇಲ್ಲವೇ ಸರಕಾರದಿಂದ ವಿಶೇಷ ಅನುಮತಿ ಪಡೆದು ನೀರನ್ನು ಕೂಡಲೇ ಕಾಲುವೆಗಳಿಗೆ ಹರಿಸಬೇಕೆಂದು ಅಧಿಕಾರಿಗಳಿಗೆ, ಸಚಿವರಲ್ಲಿ ಮತ್ತು ಸರಕಾರವನ್ನು ಒತ್ತಾಯಿಸಲಾಗಿದೆ ಎಂದು ಸಂಸದರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು

About Mallikarjun

Check Also

screenshot 2025 10 23 18 09 37 81 6012fa4d4ddec268fc5c7112cbb265e7.jpg

ಹನೂರು ಪಟ್ಟಣದಲ್ಲಿ ಪ್ರಚಾರದ ಪ್ಲೆಕ್ಸ್ ಗಳಿಗಿಲ್ಲ ತಡೆ ಸರ್ಕಾರದ ಅಪಾರ ಪ್ರಮಾಣದ ಹಣ ಬೊಕ್ಕಸಕ್ಕೆ ನಷ್ಟ

The lack of a ban on campaign plexes in Hanur town is a huge loss …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.