Breaking News

ತುಂಗಭದ್ರಾ ಆಣೆಕಟ್ಟಿನಿಂದ ಕಾಲುವೆಗಳಿಗೆ ನೀರು ಹರಿಸಲು ಸಂಸದರಾದ ಕರಡಿ ಸಂಗಣ್ಣ ಒತ್ತಾಯ

MP Karadi Sanganna insists to release water from Tungabhadra dam to the canals

ಕೊಪ್ಪಳ ಜುಲೈ 31 (ಕರ್ನಾಟಕ ವಾರ್ತೆ): ರೈತರ ಹಿತದೃಷ್ಟಿಯಿಂದಾಗಿ ತುಂಗಭದ್ರಾ ಆಣೆಕಟ್ಟಿನಿಂದ ಕಾಲುವೆಗಳಿಗೆ ನೀರು ಹರಿಸಲು ಅಗತ್ಯ ಕ್ರಮ ವಹಿಸಬೇಕು ಕೊಪ್ಪಳ ಸಂಸದರಾದ ಕರಡಿ ಸಂಗಣ್ಣ ಅವರು ಒತ್ತಾಯಿಸಿದ್ದಾರೆ.
ಪ್ರಸ್ತುತ ತುಂಗಭದ್ರಾ ಆಣೆಕಟ್ಟಿಗೆ 76.19 ಟಿಎಂಸಿ ನೀರು ಸಂಗ್ರಹಣೆಯಾಗಿದೆ. ಅಲ್ಲದೇ ನೀರಿನ ಹರಿವು ಉತ್ತಮವಾಗಿದ್ದು, ಮಳೆ ಕೂಡ ಉತ್ತಮವಾಗಿ ಆಗುತ್ತಿರುವುದರಿಂದ ಜಲಾಶಯ ಅತೀ ಶೀಘ್ರದಲ್ಲಿ ಭರ್ತಿಯಾಗಲಿದೆ. ಕೊಪ್ಪಳ, ಬಳಾರಿ, ವಿಜಯನಗರ ಹಾಗೂ ರಾಯಚೂರು ಜಿಲ್ಲೆಯ ರೈತರಿಗೆ ಇದು ಜೀವ ನದಿಯಾಗಿದ್ದು, ರೈತರು ಈಗಾಗಲೇ ಭತ್ತದ ನಾಟಿಗಾಗಿ ಸಸಿ ಮಡಿಗಳನ್ನು ಸಿದ್ಧಪಡಿಸಿಕೊಂಡು ನೀರಿಗಾಗಿ ಕಾಯುತ್ತಿದ್ದಾರೆ. ಕಾರಣ ತಡ ಮಾಡದೇ ಐಸಿಸಿ ಸಭೆ ಕರೆದು ಇಲ್ಲವೇ ಸರಕಾರದಿಂದ ವಿಶೇಷ ಅನುಮತಿ ಪಡೆದು ನೀರನ್ನು ಕೂಡಲೇ ಕಾಲುವೆಗಳಿಗೆ ಹರಿಸಬೇಕೆಂದು ಅಧಿಕಾರಿಗಳಿಗೆ, ಸಚಿವರಲ್ಲಿ ಮತ್ತು ಸರಕಾರವನ್ನು ಒತ್ತಾಯಿಸಲಾಗಿದೆ ಎಂದು ಸಂಸದರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು

About Mallikarjun

Check Also

ಒಕ್ಕೂಟದ ನೂತನ ನಿರ್ದೇಶಕರಿಂದ ಪ್ರತ್ಯಂಗಿರಾ ದೇವಿಯ ದರ್ಶನ

New director of the union visits Pratyangira Devi ಗಂಗಾವತಿ: ರಾಯಚೂರು ಬಳ್ಳಾರಿ ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಯ …

Leave a Reply

Your email address will not be published. Required fields are marked *