ಕಲ್ಯಾಣಸಿರಿ ವಿಶೇಷ

ಶಿಶು ಪಾಲನಾ ಕೇಂದ್ರದಲ್ಲಿ ಒಳ್ಳೆಯ ವಾತಾವರಣ ನಿರ್ಮಿಸಿ-ತಾಪಂ ಇಓ ಲಕ್ಷ್ಮೀದೇವಿ ಸಲಹೆ

Create a good environment in the child care center-Tampam EO Lakshmidevi advises

ಶಿಶು ಪಾಲನಾ ಕೇಂದ್ರಗಳ ಮಹಿಳಾ ಕೇರ್ ಟೇಕರ್ಸ್ ಅವರ ತರಬೇತಿ ಕಾರ್ಯಾಗಾರಕ್ಕೆ ಚಾಲನೆ

ಗಂಗಾವತಿ : ತಾಲೂಕು ಪಂಚಾಯತ್ ಮಂಥನ ಸಭಾಂಗಣದಲ್ಲಿ ನರೇಗಾ ಯೋಜನೆಯಡಿ ಆರಂಭವಾಗುತ್ತಿರುವ ಶಿಶು ಪಾಲನಾ ಕೇಂದ್ರದ ಗಂಗಾವತಿ, ಕನಕಗಿರಿ ಹಾಗೂ ಕಾರಟಗಿ ಮಹಿಳಾ ಕೇರ್ ಟೇಕರ್ಸ್ ಅವರಿಗೆ ಬುಧವಾರ ಆಯೋಜಿಸಿದ್ದ ನಾಲ್ಕು ದಿನಗಳ ತರಬೇತಿ ಕಾರ್ಯಾಗಾರವನ್ನು ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲಕ್ಷ್ಮೀದೇವಿ ಅವರು ಸಸಿಗೆ ನೀರೆರೆದು ಉದ್ಘಾಟಿಸಿದರು.

ನಂತರ ತಾಪಂ ಇಓ ಲಕ್ಷ್ಮೀದೇವಿ ಅವರು ಮಾತನಾಡಿ, ಆ.15 ರಿಂದ ಗ್ರಾಪಂ ವ್ಯಾಪ್ತಿಯಲ್ಲಿ ಶಿಶು ಪಾಲನಾ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಈ ಕೇಂದ್ರಗಳಿಗೆ 3 ತಿಂಗಳಿಗೆ ಇಬ್ಬರಂತೆ ವರ್ಷಕ್ಕೆ 8 ಜನ ಕೇರ್ ಟೇಕರ್ಸ್ ಇರುತ್ತಾರೆ. ಕೇಂದ್ರಕ್ಕೆ ಬರುವ ಮಕ್ಕಳನ್ನು ಚೆನ್ನಾಗಿ ಆರೈಕೆ ಮಾಡಬೇಕು. ಕೇಂದ್ರದಲ್ಲಿ ಮಗುವಿಗೆ ಒಳ್ಳೆಯ ವಾತಾವರಣ ನಿರ್ಮಾಣ ಮಾಡಬೇಕು. ಕಾರ್ಯಾಗಾರದ ಸದುಪಯೋಗ ಪಡೆಯುವಂತೆ ಸಲಹೆ ನೀಡಿದರು.

ನರೇಗಾ ವಿಷಯ ನಿರ್ವಾಹಕರಾದ ಶಿವಮೂರ್ತಯ್ಯ ಕಂಪಾಪೂರ ಮಠ್, ಮಹಿಳಾ ಮತ್ತು ಕಲ್ಯಾಣ ಇಲಾಖೆಯ ಮೇಲ್ವಿಚಾರಕರು ಹಾಗೂ ಸಂಪನ್ಮೂಲ ವ್ಯಕ್ತಿಗಳಾದ ಸುಕನ್ಯಾ, ವಿದ್ಯಾವತಿ ಹಾಗೂ ತಾಂತ್ರಿಕ ಸಂಯೋಜಕರಾದ ಬಸವರಾಜ ಜಟಗಿ, ಎಂಐಎಸ್ ಸಂಯೋಕರಾದ ನಾಗರಾಜ ಗಂಗನಾಳ, ಗಂಗಾವತಿ ಐಇಸಿ ಸಂಯೋಜಕರಾದ ಬಾಳಪ್ಪ ತಾಳಕೇರಿ, ಕನಕಗಿರಿ ಐಇಸಿ ಸಂಯೋಜಕರಾದ ಶಿವಕುಮಾರ್ ಕೆ,
ಕಾರಟಗಿ ತಾಲೂಕು ಐಇಸಿ ಸಂಯೋಜಕರಾದ ಸೋಮನಾಥ ನಾಯಕ ಸೇರಿ ಇತರೆ ಸಿಬ್ಬಂದಿಗಳು ಇದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

15 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

15 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

16 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

16 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

16 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

16 hours ago