Breaking News

ಎಡದಂಡೆ ಕಾಲುವೆ ನೀರು ಬಿಡಲು ಆಗ್ರಹ: ಲಂಕೇಶ ಗುಳದಾಳ

Demand to release left bank canal water: Lankesha Guldala

ಗಂಗಾವತಿ: ತುಂಗಭದ್ರಾ ಜಲಾಶಯದಿಂದ ತಕ್ಷಣವೇ ಎಡದಂಡೆ ಕಾಲುವೆ ನೀರು ಬಿಡುವಂತೆ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾದ ಲಂಕೇಶ ಗುಳದಾಳ ಪ್ರಕಟಣೆಯಲ್ಲಿ ತಿಳಿಸಿದರು.
ತುಂಗಭಧ್ರಾ ಜಲಾಶಯದ ಹಿನ್ನೀರಿನ ಮಟ್ಟ ಹೆಚ್ಚಾಗಿ ಜಲಾಶಯ ಭರ್ತಿಯಾಗಿದ್ದು, ರೈತರು ಬಿತ್ತನೆ ಮಾಡಿದ ಬೀಜಗಳಿಂದ ಈಗಾಗಲೇ ಸಸಿಗಳು ಬಂದಿದ್ದು, ರೈತರಿಗೆ ನೀರಿನ ಅವಶ್ಯಕತೆ ತುಂಬಾ ಇರುತ್ತದೆ. ಸರಿಯಾದ ಸಮಯಕ್ಕೆ ನೀರು ಬಿಡದೇ ಇದ್ದರೆ, ಹವಾಮಾನ ವೈಪರೀತ್ಯದಿಂದಾಗಿ ಬೆಳೆಗಳು ಮುಂದೆ ಸರಿಯಾದ ರೀತಿಯಲ್ಲಿ ಇಳುವರಿ ಬರುವುದಿಲ್ಲ. ಬೆಳೆಗಳು ರೋಗ-ರುಜಿನಗಳಿಗೆ ಒಳಗಾಗುವ ಭೀತಿ ಇರುತ್ತದೆ. ಕಾರಣ ಕೂಡಲೇ ಎಡದಂಡೆ ನಾಲೆಗೆ ನೀರು ಬಿಡುವ ಮೂಲಕ ರೈತರ ಕೃಷಿ ಚಟುವಟಿಕೆಗಳಿಗೆ ಅನುಕೂಲ ಮಾಡಿಕೊಡಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಒಂದು ವೇಳೆ ನಿರ್ಲಕ್ಷಿಸಿದಲ್ಲಿ ಜಿಲ್ಲೆಯಾಧ್ಯಂತ ಹೋರಾಟಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

About Mallikarjun

Check Also

screenshot 2025 12 17 18 45 28 37 e307a3f9df9f380ebaf106e1dc980bb6.jpg

ಉದ್ಯೋಗ ಖಾತ್ರಿ ಸೇರಿ ಮಹತ್ವದ ಯೋಜನೆಗಳ ಬದಲಾವಣೆಯಿಂದ ಬಡವರಿಗೆ ಅನ್ಯಾಯ: ಎಐಸಿಸಿ ಎಸ್.ಸಿ ವಿಭಾಗದ ರಾಷ್ಟ್ರೀಯ ಸಂಯೋಜಕ ಡಾ. ಆನಂದ್ ಕುಮಾರ್

ಉದ್ಯೋಗ ಖಾತ್ರಿ ಸೇರಿ ಮಹತ್ವದ ಯೋಜನೆಗಳ ಬದಲಾವಣೆಯಿಂದ ಬಡವರಿಗೆ ಅನ್ಯಾಯ: ಎಐಸಿಸಿ ಎಸ್.ಸಿ ವಿಭಾಗದ ರಾಷ್ಟ್ರೀಯ ಸಂಯೋಜಕ ಡಾ. ಆನಂದ್ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.