Don't worry about health, advice from Tamam EO Lakshmidevi
ಜಂಗಮರ್ ಕಲ್ಗುಡಿಯಲ್ಲಿ ನರೇಗಾ ಕೂಲಿಕಾರರಿಗೆ ಆರೋಗ್ಯ ಶಿಬಿರ
ಗಂಗಾವತಿ : ತಾಲೂಕಿನ ಜಂಗಮರ್ ಕಲ್ಗುಡಿ ಗ್ರಾಮದಲ್ಲಿ ಆರೋಗ್ಯ ಅಮೃತ ಅಭಿಯಾನದಡಿ ಆರೋಗ್ಯ ಶಿಬಿರ ಶನಿವಾರ ನಡೆಯಿತು.
ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲಕ್ಷ್ಮೀದೇವಿ ಅವರು ಮಾತನಾಡಿ, ನಾವು ಆರೋಗ್ಯವಾಗಿದ್ದರೆ ಮಾತ್ರ ನಮ್ಮ ಕುಟುಂಬ ಆರೋಗ್ಯವಾಗಿರುತ್ತದೆ. ಗ್ರಾಮೀಣ ಭಾಗದಲ್ಲಿ ಆರೋಗ್ಯದ ಬಗ್ಗೆ ನಿಷ್ಕಾಳಜಿ ತೋರುತ್ತಾರೆ. ಹೀಗಾಗಿ ಆರೋಗ್ಯ ಜಾಗೃತಿ ಮೂಡಿಸಲು ಆರೋಗ್ಯ ಶಿಬಿರ ನಡೆಸಲಾಗುತ್ತಿದೆ. ಬಡ ಜನರಿಗೆ ಶಿಬಿರ ತುಂಬಾ ಅನುಕೂಲ ಆಗಲಿದೆ. ಯಾರೂ ಕೂಡ ಹಿಂಜರಿಯದೆ ಶಿಬಿರದ ಲಾಭ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಅಭಿವೃದ್ಧಿ ಅಧಿಕಾರಿಗಳಾದ ರಾಮು ನಾಯಕ್ ಅವರು ಮಾತನಾಡಿ, ಆರೋಗ್ಯವೇ ಮಹಾಭಾಗ್ಯವಾಗಿದ್ದು, ಎಲ್ಲ ಕೂಲಿಕಾರರು ಶಿಬಿರದ ಸೌಲಭ್ಯ ಪಡೆಯಬೇಕು. ತಪಾಸಣೆಗೆ ಯಾರು ಹಿಂದೇಟು ಹಾಕಬಾರದು ಎಂದರು.
ಶಿಬಿರದಲ್ಲಿ 110 ಜನರು ಆರೋಗ್ಯ ತಪಾಸಣೆ ಮಾಡಿಸಿಕೊಂಡರು.
ಗ್ರಾಪಂ ಅಧ್ಯಕ್ಷರಾದ ಶ್ರುತಿ ಧನಂಜಯ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಾದ ರಾಮು ನಾಯ್ಕ್, ಉಪಾಧ್ಯಕ್ಷರಾದ ಹುಲಿಗೆಮ್ಮ, ಸದಸ್ಯರರಾದ ಮೈಲಾಪುರ ದೊಡ್ಡಪ್ಪ, ಕನಕರಾಜ, ಕಾರ್ಯದರ್ಶಿಗಳಾದ ಪ್ರಭುರಾಜ ಪಾಟೀಲ್ , ಕರವಸೂಲಿಗಾರರಾದ ಮಹಾಂತೇಶ, ಕೆಎಚ್ ಪಿಟಿ ತಾಲೂಕು ಸಂಯೋಜಕರಾದ ಶರಣಬಸವ ,ಆರೋಗ್ಯ ಸಹಾಯಕರಾದ ದುರಗೇಶ, ಶ್ರೀದೇವಿ ಸೇರಿ ಗ್ರಾಪಂ ಸಿಬ್ಬಂದಿಗಳು ಇದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…