Breaking News

ಲಕ್ಷ್ಮಿ ಕ್ಯಾಂಪ್ ನಲ್ಲಿ ಬೀದಿ ನಾಟಕ

Street drama at Lakshmi Camp

ಗಂಗಾವತಿ.06 ತಾಲೂಕಿನ ಎಬಿ ನಗರ ವಲಯದ ಲಕ್ಷ್ಮಿ ಕ್ಯಾಂಪ್ ಕಾರ್ಯಕ್ಷೇತ್ರದಲ್ಲಿ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಲ್ಲಿ ಬೀದಿ ನಾಟಕ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಡೋಲು ಬಾರಿಸುವ ಮೂಲಕ ಉದ್ಘಾಟಿಸಲಾಯಿತು ನಂತರ ಉದ್ಘಾಟಿಸಿ ಮಾತನಾಡಿದ ನಗರಸಭೆ ಸದಸ್ಯ ನವೀನಕುಮಾರ ಪಾಟೀಲ್ ಪ್ರತಿಯೊಂದು ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಸಂಸ್ಥೆಯಿಂದ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಕಾರ್ಯಕ್ರಮ ನಡೆಸುತ್ತಾ ಬಂದಿದ್ದಾರೆ ಈ ಒಂದು ಬೀದಿನಾಟಕದ ಮೂಲಕ ಶೌಚಾಲಯ ಪ್ರತಿಯೊಂದು ಮನೆಯಲ್ಲಿ ಇರಬೇಕು ಎಂದು ಸಲಹೆಯನ್ನು ನೀಡಿದರು ನಂತರ ಶೌಚಾಲಯ ಸಲುವಾಗಿ ಸರ್ಕಾರದಿಂದ ಅನುದಾನ ಬರುತ್ತೇನೆ ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಸಾರ್ವಜನಿಕರಿಗೆ ಸಲಹೆಯನ್ನು ನೀಡಿದರು ಈ ಸಂದರ್ಭದಲ್ಲಿ ವಕೀಲರಾದ ಶಿವಪ್ಪ. ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯ ನೀಲಕಂಠಪ್ಪ ನಾಗಶೆಟ್ಟಿ, ತಾಲೂಕು ಯೋಜನಾಧಿಕಾರಿ ಬಾಲಕೃಷ್ಣ ಹಿರಿಂಜ, ಕಲಾತಂಡದ ಹಿರಿಯರು ಎಸ್ .ಎಸ್. ಹಿರೇಮಠ್. ಯೋಜನಾಧಿಕಾರಿಗಳಾದ ಬಾಲಕೃಷ್ಣ ಹಿರಿಂಜ, ಮೇಲ್ವಿಚಾರಕರು ನಾಗವೇಣಿ ಜ್ಞಾನವಿಕಾಸ.ಸಮನ್ವಯಾಧಿಕಾರಿ ಶಾರದ .ಸೇವಾ ಪ್ರತಿನಿಧಿಯವರು ಸಂಘದ ಸದಸ್ಯರು ಸೇರಿದಂತೆ ಇತರರು ಇದ್ದರು

ಜಾಹೀರಾತು

About Mallikarjun

Check Also

unnamed

ಕಟ್ಟಡ ಇತರೆ ನರ‍್ಮಾಣ ಕರ‍್ಮಿಕರ ಆನ್ಲೈನ್ ರ‍್ಜಿ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸಿ. ರ‍್ಕಾರ ಘೋಷಿಸಿದ ಎಲ್ಲಾ ಸೌಲಭ್ಯಗಳನ್ನು ಕೂಡಲೇ ಜಾರಿ ಮಾಡಿ

ಕಟ್ಟಡ ಇತರೆ ನರ‍್ಮಾಣ ಕರ‍್ಮಿಕರ ಆನ್ಲೈನ್ ರ‍್ಜಿ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸಿ. ರ‍್ಕಾರ ಘೋಷಿಸಿದ ಎಲ್ಲಾ ಸೌಲಭ್ಯಗಳನ್ನು ಕೂಡಲೇ ಜಾರಿ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.