Breaking News

ಪ್ರವಾಸಿ ಮಂದಿರ-ಸರ್ಕೀಟ್ ಹೌಸ್‌ಗಳಲ್ಲಿ ದುಡಿಯುತ್ತಿರುವ ಹೊರಗುತ್ತಿಗೆ ಕಾರ್ಮಿಕರಿಗೆ೧೭ ತಿಂಗಳುಗಳಿAದ ವೇತನ ನೀಡದಿರುವುದು ಖಂಡನೀಯ: ಭಾರಧ್ವಾಜ್

Non-payment of wages for 17 months to outsourced workers working in tourist temples-circuit houses is condemnable: Bhardwaj

.

ಗಂಗಾವತಿ: ಗಂಗಾವತಿ, ಕಾರಟಗಿ, ಕನಕಗಿರಿ ತಾಲ್ಲೂಕುಗಳಲ್ಲಿ ಪ್ರವಾಸಿ ಮಂದಿರ-ಸರ್ಕೀಟ್ ಹೌಸ್‌ಗಳಲ್ಲಿ ಸೇವೆ ಸಲ್ಲಿಸುತ್ತಿರುವ ೧೪ ಜನ ಹೊರಗುತ್ತಿಗೆ ಕಾರ್ಮಿಕರಿಗೆ ಕಳೆದ ೧೭ ತಿಂಗಳುಗಳಿAದ ವೇತನ ಕೊಡದೇ ಇರುವುದು ಖಂಡನೀಯವಾಗಿದೆ ಎಂದು ಕ್ರಾಂತಿಚಕ್ರ ಬಳಗದ ರಾಜ್ಯಾಧ್ಯಕ್ಷರಾದ ಭಾರಧ್ವಾಜ್ ಪ್ರಕಟಣೆಯಲ್ಲಿ ಸರ್ಕಾರದ ನಿಲುವಿಗೆ ಬೇಸರ ವ್ಯಕ್ತಪಡಿಸಿದ್ದಾರೆ.
ಗುತ್ತಿಗೆದಾರರಾದ ಸಂತೋಷ ತಂ. ಈರಣ್ಣ ಕಮಲಾಪುರ ಇವರು ೧೭ ತಿಂಗಳುಗಳಿAದ ಗಂಗಾವತಿ, ಕಾರಟಗಿ, ಕನಕಗಿರಿ ತಾಲ್ಲೂಕುಗಳಲ್ಲಿ ಪ್ರವಾಸಿ ಮಂದಿರ-ಸರ್ಕೀಟ್ ಹೌಸ್‌ಗಳಲ್ಲಿ ಸೇವೆ ಸಲ್ಲಿಸುತ್ತಿರುವ ೧೪ ಜನ ಹೊರಗುತ್ತಿಗೆ ಕಾರ್ಮಿಕರಿಗೆ ಸಂಬಳ ನೀಡದೇ ಇರುವುದರಿಂದ ಕಾರ್ಮಿಕರ ಕುಟುಂಬಗಳು ತೀವ್ರ ಆರ್ಥಿಕ ಸಂಕಷ್ಟದಿAದ ಬೀದಿಪಾಲಾಗಿದ್ದಾರೆ. ಕೂಡಲೇ ಮೂಲ ಮಾಲಿಕರಾದ ಸರ್ಕಾರ ೧೪ ಜನ ಹೊರಗುತ್ತಿಗೆ ಕಾರ್ಮಿಕರಿಗೆ ಕನಿಷ್ಟ ವೇತನ ಕಾಯ್ದೆಯ ಪ್ರಕಾರ ಸಂಬಳ ನೀಡಬೇಕು. ಇವರೆಲ್ಲರಿಗೂ ಪಿ.ಎಫ್., ಇ.ಎಸ್.ಐ. ವಂತಿಕೆಗಳನ್ನು ತುಂಬಿ, ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ, ಕಾರ್ಮಿಕರಿಗೆ ಸರ್ಕಾರದ ಸೌಲಭ್ಯಗಳನ್ನು ನೀಡಬೇಕೆಂದು ಕ್ರಾಂತಿಚಕ್ರ ಬಳಗ ಸರ್ಕಾರವನ್ನು ಒತ್ತಾಯಿಸುತ್ತದೆ. ಸರ್ಕಾರ ಈ ನಿಟ್ಟಿನಲ್ಲಿ ಗಮನ ಹರಿಸದಿದ್ದಲ್ಲಿ ರಾಜ್ಯಾಧ್ಯಂತ ಕಾರ್ಮಿಕರಿಗೆ ನ್ಯಾಯಕ್ಕಾಗಿ ಕ್ರಾಂತಿಚಕ್ರ ಬಳಗ ಹೋರಾಟ ಮಾಡುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

About Mallikarjun

Check Also

ದೇವರಮನಿಗೆ ಒಲಿದ ನಗರ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ ನೇಮಕ

ಗಂಗಾವತಿ, ಏ.11: ಕಳೆದ 10 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತನಾಗಿ ಕಾರ್ಯನಿರ್ವಹಿಸಿ ಅತ್ಯುತ್ತಮ ಪಕ್ಷ ಸಂಘಟನಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.