Breaking News

ಹಾಸ್ಟೆಲ್ ಗೆ ಅರ್ಜಿ ಹಾಕಿದ OBC ಎಲ್ಲಾ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಕೊಡಲು SFI ಆಗ್ರಹ.

SFI demands to provide hostel facility to all OBC students who have applied for hostel

ಕೊಪ್ಪಳ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್ ಗಳಿಗೆ ಅರ್ಜಿ ಹಾಕಿದ ಎಲ್ಲಾ ಒಬಿಸಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಕಲ್ಪಿಸಿಕೊಡಲು ಆಗ್ರಹಿಸಿ ದಿನಾಂಕ 7/8/2023 ರಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಿಯವರನ್ನು ಕಾರಟಗಿಯ ಅವರ ನಿವಾಸದಲ್ಲಿ SFI ರಾಜ್ಯಾಧ್ಯಕ್ಷರು ಮತ್ತು ಮುಂಖಡರು ಬೇಟೆ ಮಾಡಿ ಚರ್ಚೆಸಿ ಮನವಿ ಪತ್ರ ಕೊಡಲಾಯಿತು ಎಂದು ಸಂಘಟನೆಯ ರಾಜ್ಯಾಧ್ಯಕ್ಷ ಅಮರೇಶ ಕಡಗದ ತಿಳಿಸಿದರು.

ಜಾಹೀರಾತು

ಕೊಪ್ಪಳ ಜಿಲ್ಲೆ ಸೇರಿದಂತೆ ರಾಜ್ಯದ ಬಹುತೇಕ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಪಿಯುಸಿ ವಿಭಾಗದಲ್ಲಿ ಓದುತ್ತಿರುವ ಸಾವಿರಾರು ವಿದ್ಯಾರ್ಥಿಗಳು ಹಾಸ್ಟೆಲ್ ಸೌಲಭ್ಯ ಬೇಕು ಎಂದು ಸಂಬಂಧಪಟ್ಟ ಇಲಾಖೆಗೆ ಅರ್ಜಿಯನ್ನು ಹಾಕಿರುತ್ತಾರೆ ಆದರೆ ವಾಸ್ತವದಲ್ಲಿ ಒಂದು ಹಾಸ್ಟೆಲ್ ಗೆ ಕೆವಲ 10 ರಿಂದ 30 ವಿದ್ಯಾರ್ಥಿಗಳು ಮಾತ್ರ ಆಯ್ಕೆ ಆಗಿದ್ದು ಸುಮಾರು ಸಾವಿರಾರು ವಿದ್ಯಾರ್ಥಿಗಳು ಹಾಸ್ಟೆಲ್ ಸೌಲಭ್ಯದಿಂದ ವಂಚಿತರಾಗಿದ್ದಾರೆ ಜಿಲ್ಲೆಯಲ್ಲಿ ಮುಖ್ಯವಾಗಿ ಕೊಪ್ಪಳ ಮತ್ತು ಗಂಗಾವತಿ ನಗರದಲ್ಲಿ ಅತಿ ಹೆಚ್ಚು ಕಾಲೇಜ್ ಗಳು ಇರುವುದರಿಂದ ದೂರದ ಗ್ರಾಮಗಳಿಂದ ಹಾಗೂ ವಿವಿಧ ಜಿಲ್ಲೆಗಳಿಂದ ನೂರಾರು ವಿದ್ಯಾರ್ಥಿಗಳು ಉತ್ತಮ ಗುಣಮಟ್ಟದ ಶಿಕ್ಷಣಕ್ಕಾಗಿ ನಗರಗಳಿಗೆ ಬಂದಿದ್ದಾರೆ ಇನ್ನು ನಮ್ಮ ಜಿಲ್ಲೆಯ ದೂರದ ಹಳ್ಳಿಗಳಿಂದ ನಗರ ಪ್ರದೇಶಕ್ಕೆ ಶಿಕ್ಷಣ ಕಲಿಯಲು ದಾಖಲಾತಿ ಮಾಡಿಸಿದ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಸಮರ್ಪಕವಾಗಿ ಬಸ್ ಸೌಲಭ್ಯ ಇಲ್ಲದ ಕಾರಣ ವಿದ್ಯಾರ್ಥಿಗಳಿಗೆ ದಿನನಿತ್ಯ ಬೆಳಿಗ್ಗೆ ತರಗತಿಯ ಒಂದು ಕ್ಲಾಸ್ ಮೀಸ್ ಆಗುತ್ತದೆ ಈ ರೀತಿಯಲ್ಲಿ ಹಲವಾರು ವಿದ್ಯಾರ್ಥಿಗಳಿಗೆ ತುಂಬಾ ಸಮಸ್ಯೆ ಆಗುತ್ತಿದ್ದು ಆ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಅಗತ್ಯವಾಗಿ ಬೇಕಾಗಿದೆ.

ಸಮಾಜ ಕಲ್ಯಾಣ ಇಲಾಖೆಯು ಅರ್ಜಿ ಹಾಕಿದ ಎಲ್ಲಾ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಕಲ್ಪಿಸಿಕೊಡುತ್ತದೆ ಅದೇ ಮಾದರಿಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಿ ಇಲ್ಲವೇ ಹಾಸ್ಟೆಲ್ ವಂಚಿತ ವಿದ್ಯಾರ್ಥಿಗಳಿಗೆ ಕೊಡುವ ವಿದ್ಯಾ ಶ್ರೀ ಯೋಜನೆಯ ಹಣದಲ್ಲಿ ಹಾಸ್ಟೆಲ್ ಸೌಲಭ್ಯ ಕಲ್ಪಸಿಲು ಸಂಬಂಧಿಸಿದ ಇಲಾಖೆಗೆ ಸೂಚಿಸಿ ಎಂದು ಆಗ್ರಹಿಸಿ SFI ಸಂಘಟನೆಯ ರಾಜ್ಯಾಧ್ಯಕ್ಷ ಅಮರೇಶ ಕಡಗದ ತಾಲ್ಲೂಕು ಅಧ್ಯಕ್ಷ ಗ್ಯಾನೇಶ ಕಡಗದ ಮುಂಖಡರಾದ ಸೋಮನಾಥ, ರಾಜಭಕ್ಷಿ, ಹನುಮಂತ ಇತರರು ಸಚಿವರಲ್ಲಿ ಮನವಿ ಸಲ್ಲಿಸಿ ಆಗ್ರಹ ಮಾಡಿದರು.

About Mallikarjun

Check Also

ಭಟಪನಹಳ್ಳಿಯ ಶ್ರೀ ಭೀಮಾಂಬಿಕಾ ದೇವಿಯ ಲಘು ರಥೋತ್ಸವ

Light chariot festival of Sri Bhimambika Devi in ​​Bhatapanahalli ವರದಿ: ಶರಣಬಸಪ್ಪ ದಾನಕೈ ಯಲಬುರ್ಗಾ : ಕೊಪ್ಪಳ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.