ವಸುಧಾ ವಂದನ್ ಕಾರ್ಯಕ್ರಮಕ್ಕೆ ತಾಪಂ ಇಓ ಚಾಲನೆ
ಗಂಗಾವತಿ : ತಾಲೂಕಿನ ಆನೆಗೊಂದಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಸವನದುರ್ಗಾದಲ್ಲಿ ವಸುಧಾ ವಂದನ್ ಕಾರ್ಯಕ್ರಮದಡಿ ಅಮೃತ ವಾಟಿಕಾ ಸಸಿ ನೆಡುವ ಕಾರ್ಯಕ್ರಮಕ್ಕೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲಕ್ಷ್ಮೀದೇವಿ ಅವರು ಶುಕ್ರವಾರ ಚಾಲನೆ ನೀಡಿದರು.
ಬಸವನದುರ್ಗಾದಲ್ಲಿ ನರೇಗಾದಡಿ ನಿರ್ಮಾಣ ಆಗುತ್ತಿರುವ ಅಮೃತ ಸರೋವರ ಬಳಿ ಸಸಿಗಳನ್ನು ನೆಡಲಾಯಿತು.
ಈ ವೇಳೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲಕ್ಷ್ಮೀದೇವಿ ಅವರು ಮಾತನಾಡಿ, ಆ.15ರ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಸುಧಾ ವಂದನ್ ಕಾರ್ಯಕ್ರಮಮದಡಿ ಒಂದೊಂದು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 75 ಸಸಿಗಳನ್ನು ನೆಡಲಾಗುತ್ತಿದೆ. ನೆಟ್ಟ ಸಸಿಗಳ ಪೋಷಣೆ ಮಾಡಬೇಕು. ಪರಿಸರ ಉಳಿವಿಗೆ ಶ್ರಮಿಸಬೇಕು ಎಂದರು.
ನನ್ನ ನೆಲ, ನನ್ನ ದೇಶ ಅಭಿಯಾನ ಶುರುವಾಗಿದ್ದು, ಎಲ್ಲರೂ ಅಭಿಯಾನಕ್ಕೆ ಕೈಜೋಡಿಸಬೇಕು ಎಂದರು.
ಕಾಮಗಾರಿ ವೀಕ್ಷಣೆ : ನರೇಗಾದಡಿ ನಿರ್ಮಾಣ ಆಗುತ್ತಿರುವ ಡುಮ್ಕಿಕೊಳ ( ಅಮೃತ ಸರೋವರ) ಕಾಮಗಾರಿಯ ತಾಪಂ ಇಓ ಲಕ್ಷ್ಮೀದೇವಿ ಪರಿಶೀಲನೆ ನಡೆಸಿದರು.
ಆನೆಗೊಂದಿ ಗ್ರಾಪಂ ಕಾರ್ಯದರ್ಶಿಗಳಾದ ಹನುಮವ್ವ, ನರೇಗಾ ತಾಂತ್ರಿಕ ಸಂಯೋಜಕರಾದ ಬಸವರಾಜ ಜಟಗಿ, ಐಇಸಿ ಸಂಯೋಜಕರಾದ ಬಾಳಪ್ಪ ತಾಳಕೇರಿ, ಗ್ರಾಪಂ ಸದಸ್ಯರಾದ ಡಾ.ವೆಂಕಟೇಶ ಬಾಬು, ರಾಜಶೇಖರ ಹಾಗೂ ಗ್ರಾಮಸ್ಥ ಹೊನ್ನಪ್ಪ ನಾಯಕ ಹಾಗೂ ಗ್ರಾಪಂ ಸಿಬ್ಬಂದಿಗಳು ಇದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…