ಕಲ್ಯಾಣಸಿರಿ ವಿಶೇಷ

ವಿಶ್ವ ಆನೆ ದಿನದಂದೇ ಹನೂರು ಭಾಗದಲ್ಲಿ ಅನುಮಾನಸ್ಪದ ರೀತಿಯಲ್ಲಿ ಕಾಡಾನೆ ಸಾವು: ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ .

Suspicious death of a forest animal on World Elephant Day: Forest officials visit the place.


ವರದಿ :ಬಂಗಾರಪ್ಪ ಸಿ ಹನೂರು.
ಹನೂರು :ರೈತರ ಜಮೀನಿನಲ್ಲಿ ಕಾಡಾನೆಯೊಂದು ಅನುಮಾನಸ್ಪದವಾಗಿ‌ ಮೃತಪಟ್ಟಿರುವ ಘಟನೆ ನಡೆದಿದೆ . ಹನೂರು ತಾಲೂಕಿನ ಗೋಪಿನಾಥಂ ಗ್ರಾಮದಲ್ಲಿ ಅನುಮಾನಾಸ್ಪದವಾಗಿ‌ ಕಾಡಾನೆಯೊಂದು ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ. ನಾಗರಾಜು ಮತ್ತು ಸೆಲ್ವಂ ಎಂಬವರ ಜಮೀನಿನಲ್ಲಿ ಅಂದಾಜು 12 ವರ್ಷದ ಗಂಡಾನೆಯೊಂದು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇದೇ ದಿನ ಇನ್ನೊಂದು ಪ್ರತ್ಯೇಕ ಪ್ರಕರಣ ನಡೆದಿದೆ .

ವೃದ್ಧೆಯಿಂದ ಹಣ, ಮೊಬೈಲ್ ದೋಚಿ ದುಷ್ಕರ್ಮಿಗಳು ಪರಾರಿ: ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ವೃದ್ಧೆಗೆ ಪೊಂಗಲ್ ತಿನ್ನಿಸಿ ಹಣ, ಮೊಬೈಲ್ ದೋಚಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು ಮೂಲದ ರತ್ಮಮ್ಮ(70) ವಂಚನೆಗೊಳಗಾದ ವೃದ್ಧೆ.ಮಲೆಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ರತ್ನಮ್ಮ‌ ದೇವರ ದರ್ಶನ ಮುಗಿಸಿ ರಂಗಮಂದಿರದಲ್ಲಿ ಮಲಗಿದ್ದ ವೇಳೆ ಮೂವರು ಪುರುಷರು, ಓರ್ವ ಮಹಿಳೆ ಪರಿಚಯಿಸಿಕೊಂಡು ಜೊತೆಗೆ ಮಲಗಿದ್ದಾರೆ. ಬೆಳಗ್ಗೆ ವೃದ್ಧೆ ಎದ್ದ ಬಳಿಕ ಪೊಂಗಲ್​ನಲ್ಲಿ ಮತ್ತು ಬರುವ ಔಷಧಿ ಬೆರೆಸಿಕೊಟ್ಟು ಪ್ರಜ್ಞೆ ತಪ್ಪಿಸಿ ಬಳಿಕ 10 ಸಾವಿರ ನಗದು, ಮೊಬೈಲ್ ದೋಚಿ ಪರಾರಿಯಾಗಿದ್ದಾರೆ. ಸದ್ಯ ಮಲೆ ಮಹದೇಶ್ವರ ಬೆಟ್ಟದಲ್ಲಿ‌ ಈ ಸಂಬಂಧ ಪ್ರಕರಣ ದಾಖಲಾಗಿದೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

16 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

16 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

16 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

16 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

17 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

17 hours ago