Breaking News

ನಿಗಮದ ಅಧ್ಯಕ್ಷ ಸ್ಥಾನ ನೀಡದಿದ್ದರೆ  ಕಾಂಗ್ರೆಸ್ ಪಕ್ಷಕ್ಕೆ  ಪೆಟ್ಟು-   ಹಾಲುಮತ ಮಹಾಸಭಾ ಜಿಲ್ಲಾಧ್ಯಕ್ಷ ಹನುಮಂತಪ್ಪ ಕೌದಿ If the post of President of the Corporation is not given, it will be a disaster for the Congress party- Halumatha Mahasabha District President Hanumanthappa Kaudi

  ಕೊಪ್ಪಳ.ಅ 13-  ಗಂಗಾವತಿ ತಾಲೂಕ ಕಾಂಗ್ರೆಸ್ ಮುಖಂಡ ಹನುಮಂತಪ್ಪ ಎಚ್ ಅರಸಿನಕೇರಿ ಅವರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಒದಗಿಸದಿದ್ದರೆ ಕಾಂಗ್ರೆಸ್ ಗೆ  ಗಂಗಾವತಿ ಕ್ಷೇತ್ರದಲ್ಲಿ ಪೆಟ್ಟು ಬೀಳಲಿದೆ, ನಿಗಮ ಅಧ್ಯಕ್ಷ ಸ್ಥಾನ ಕೊಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರವರಿಗೆ ಹಾಲುಮತ ಮಹಾಸಭಾ ಜಿಲ್ಲಾಧ್ಯಕ್ಷ ಅನುಮಂತಪ್ಪ ಕೌದಿ ನಗರದಲ್ಲಿಂದು ಆಗ್ರಹ ಮಾಡಿದರು.

ಹನುಮಂತಪ್ಪ ಅರಸಿನಕೇರಿಯವರು ತಾಲೂಕು ಪಂಚಾಯತ್ ಮಾಜಿ ಸದಸ್ಯರು, ಗಂಗಾವತಿ ಕ್ಷೇತ್ರದಲ್ಲಿ ನಿಷ್ಠಾವಂತ ಪ್ರಮಾಣಿಕ ಕಾರ್ಯಕರ್ತ ಹಲವು ವರ್ಷಗಳಿಂದ ಪಕ್ಷಕ್ಕೆ ಬೆನ್ನೆಲುಬಾಗಿ ನಿಂತು ದುಡಿಯುತ್ತಿದ್ದಾರೆ 2023 ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಶಾಸಕ ಅಭ್ಯರ್ಥಿ ಮನೆಯನ್ನು ಬಿಟ್ಟು ಹೊರಗೆ ಬರದಿದ್ದಾಗ ರಾಜ್ಯ ಕಾಂಗ್ರೆಸ್ ನಾಯಕರ ನಿರ್ದೇಶನದ ಮೇರೆಗೆ ಕ್ಷೇತ್ರದ ಕಾರ್ಯಕರ್ತರನ್ನು ಒಟ್ಟುಗೂಡಿಸಿ ತಾವೇ ಅಭ್ಯರ್ಥಿಯ ತರಹ ಇಡೀ ಕ್ಷೇತ್ರದಲ್ಲಿ ಕಾರ್ಯಕರ್ತರು ಮತದಾರರನ್ನು ಒಟ್ಟುಗೂಡಿಸಿ ಕಾಂಗ್ರೆಸಿಗೆ ಮತ ಹಾಕುವಲ್ಲಿ ಯಶಸ್ವಿಯಾದವರು ಕಾಂಗ್ರೆಸ್ ಅಭ್ಯರ್ಥಿಯ ಸ್ವಯಂಕೃತ ಲೋಪದಿಂದ  ಸಹಿಸಲಾರದ ವರ್ತನೆಯಿಂದ ಕೆಲವು ಅಂತರದ ಮತಗಳಿಂದ ಪರಾಜಿತಗೊಂಡಿತು ಹನುಮಂತಪ್ಪ ಅರಸಿನಕೇರಿ ಅವರ ಬಣದ ನಿರಂತರ ಶ್ರಮವಿರದಿದ್ದರೆ ಕಾಂಗ್ರೆಸ್ ಇಷ್ಟೊಂದು ಮತಗಳು  ಬರುತ್ತಿದ್ದಿಲ್ಲ ಹೀಗಾಗಿ  ಕ್ಷೇತ್ರದ ಕಾರ್ಯಕರ್ತರ ಒತ್ತಾಯದ ದೃಷ್ಟಿಯಿಂದ ಕಾಂಗ್ರೆಸ್ ಪಕ್ಷ  ಅವರ ಬೇಡಿಕೆಯನ್ನು ಪೂರೈಸಬೇಕು  ಇಲ್ಲದಿದ್ದರೆ ಗಂಗಾವತಿ ಕ್ಷೇತ್ರದಲ್ಲಿ ಕಾಂಗ್ರೆಸ್ಸಿಗೆ ಪೆಟ್ಟು ಬೀಳಲಿದೆ  ಎಂದು ಆಗ್ರಹಿಸಿದರು.        ಈ ಸಂದರ್ಭದಲ್ಲಿ, ರಾಜ್ಯ ಸಂಘಟನೆ ಕಾರ್ಯದರ್ಶಿ ದ್ಯಾಮಣ್ಣ ಕರಿಗಾರ್, ಹನುಮಂತಪ್ಪ ಹನುಮಾಪುರ, ತಾಲೂಕಾಧ್ಯಕ್ಷ ಮುದ್ದಪ್ಪ ಗೊಂದಿಹೊಸಳ್ಳಿ, ತಾಲೂಕ ಗೌರವಾಧ್ಯಕ್ಷ ದ್ಯಾಮನಗೌಡ್ರು ಭೀಮನೂರು ಸಂಘಟನಾ ಕಾರ್ಯದರ್ಶಿಗಳಾದ ಮಂಜುನಾಥ್ ಬಂಗಾಳಿ, ಬಸವರಾಜ್ ಗುರಿಕಾರ, ಪರಶುರಾಮ ಅಣ್ಣಿಗೇರಿ, ಅನ್ನದಾನಿಸ್ವಾಮಿ ಬೂತಣ್ಣನವರು, ನಗರ ಘಟಕದ ನಗರಘಟಕದ  ಗೌರವಾಧ್ಯಕ್ಷ  ಹುಚ್ಚನ ಗೌಡರು  ಭಾಗ್ಯನಗರ ,  ಅಧ್ಯಕ್ಷ ಮಲ್ಲೇಶ್ ಹದ್ದಿನ್ ಉಪಾಧ್ಯಕ್ಷ ಮಂಜು ಮ್ಯಾಗಳಮನಿ ಸಂಚಾಲಕರು ನಿಂಗಪ್ಪ ಮೂಗಿನ್ ಇತರರಿದ್ದರು,

About Mallikarjun

Check Also

ಖೊಟ್ಟಿ ದಾಖಲೆ ಸೃಷ್ಟಿಸಿ, ಬಿಪಿಎಲ್ ಪಡಿತರ ಚೀಟಿ ಪಡೆದಿದ್ದ ಬಿಜೆಪಿ ಮುಖಂಡನ ವಿರುದ್ಧ ದೂರು ದಾಖಲು, ದಂಡವಸೂಲಿ.

ಕಾರಟಗಿ: ತಾಲೂಕಿನ ಸಿದ್ಧಾಪುರ ಗ್ರಾಮದ ಬಿಜೆಪಿ ಮುಖಂಡ ಆಗಿರುವ ಮಹಿಬೂಬ್ ಸಾಬ್ ಮುಲ್ಲಾ (ಎಂ.ಡಿ.ಎಸ್) ತಂದೆ ಮೋದಿನ್ ಸಾಬ್ ಈತನು …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.