Breaking News

ಗಂಗಾವತಿಯ ಕಲ್ಯಾಣ ನಗರದಲ್ಲಿರುವ ಮೆಟ್ರಿಕ್ ಪೂರ್ವ ಬಾಲಕಿಯರ ಹಾಸ್ಟೆಲ್ ಗೆ ಕೂಡಲೇ ಕಾಂಪೌಂಡ್ ನಿರ್ಮಿಸಲು ಆಗ್ರಹಿಸಿ ಮನವಿ

A request to construct a compound immediately for pre-matric girls’ hostel in Kalyana Nagar, Gangavati.

ಗಂಗಾವತಿ:AIDYO ಸಂಘಟನೆಯ ನೇತೃತ್ವದಲ್ಲಿ ಇಂದು, ಗಂಗಾವತಿಯ ತಾಲೂಕಾ ಹಿಂದುಳಿದ ವರ್ಗಗಳ ಕಲ್ಯಾಣಧಿಕಾರಿಗಳನ್ನು ಭೇಟಿಮಾಡಲಾಯಿತು.. ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಶರಣು ಗಡ್ಡಿ ಮಾತನಾಡಿ, ಕಲ್ಯಾಣ ನಗರದಲ್ಲಿರುವ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದ ಸಮಸ್ಯೆಗಳನ್ನು ಅಧಿಕಾರಿಗಳು ಗಮನಕ್ಕೆ ತಂದರು..200 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ವಸತಿ ನಿಲಯಕ್ಕೆ ಕನಿಷ್ಠ ಕಾಂಪೌಂಡ್ ಇಲ್ಲದಿರುವುದು ಶೋಚನಿಯ , ಇದರಿಂದಾಗಿ ವಿದ್ಯಾರ್ಥಿನಿಯರು ನಿತ್ಯವೂ ಆತಂಕದ ಪರಿಸ್ಥಿತಿಯನ್ನು ಅನುಭವಿಸುತ್ತಿದ್ದಾರೆ.ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ವಸತಿ ನಿಲಯದ ಸುತ್ತಲೂ ದುರ್ವಾಸನೆ ಬರುತ್ತದೆ,ಬಟ್ಟೆಗಳನ್ನು ತೊಳೆಯಲುಮತ್ತು ಹಾಕಲು ಸಹ ಸರಿಯಾದ ವ್ಯವಸ್ಥೆ ಇಲ್ಲ, ಶುದ್ಧ ಕುಡಿಯುವ ನೀರು, ಗುಣಮಟ್ಟದ ಆಹಾರ, ಗ್ರಂಥಾಲಯದ ವ್ಯವಸ್ಥೆ ಹಾಗೂ ಇನ್ನಿತರ ಅವಶ್ಯಕತೆಗಳನ್ನು ಈ ಕೊಡಲೇ ಸರಿಪಡಿಸಬೇಕೆಂದು ಮನವಿ ಮಾಡಿದರು..
ಮನವಿ ಸ್ವೀಕರಿಸಿದ ತಾಲೂಕಾ ಕಲ್ಯಾಣಾಧಿಕಾರಿಗಳಾದ ಉಷಾ ಏನ್ ಮುಜಂದಾರರು ಸಕಾರಾತ್ಮಕವಾಗಿ ಸ್ಪಂದಿಸಿ, ಈಗಾಗಲೇ ಈ ಸಮಸ್ಯೆಯನ್ನು ಜಿಲ್ಲಾ ಪಂಚಾಯತ್ ಸಿ. ಈ. ಓ. ಅವರ ಗಮನಕ್ಕೆ ತರಲಾಗಿದೆ ಹಾಗೂ ಗಂಗಾವತಿಯ ಹಾಲಿ ಶಾಸಕರಲ್ಲಿ ಮನವಿ ಮಾಡಿ ಶೀಘ್ರದಲ್ಲಿ ಈ ಸಮಸ್ಯೆಗಳನ್ನು ಸರಿಪಡಿಸುತ್ತೇವೆ ಎಂದರು..
ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಕಾರ್ಯದರ್ಶಿಯಾದ ಶರಣು ಪಾಟೀಲ್ ಸಹ ಇದ್ದರು..

About Mallikarjun

Check Also

ಖೊಟ್ಟಿ ದಾಖಲೆ ಸೃಷ್ಟಿಸಿ, ಬಿಪಿಎಲ್ ಪಡಿತರ ಚೀಟಿ ಪಡೆದಿದ್ದ ಬಿಜೆಪಿ ಮುಖಂಡನ ವಿರುದ್ಧ ದೂರು ದಾಖಲು, ದಂಡವಸೂಲಿ.

ಕಾರಟಗಿ: ತಾಲೂಕಿನ ಸಿದ್ಧಾಪುರ ಗ್ರಾಮದ ಬಿಜೆಪಿ ಮುಖಂಡ ಆಗಿರುವ ಮಹಿಬೂಬ್ ಸಾಬ್ ಮುಲ್ಲಾ (ಎಂ.ಡಿ.ಎಸ್) ತಂದೆ ಮೋದಿನ್ ಸಾಬ್ ಈತನು …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.