District Level Gangama Pratibha Puraskar Ceremony on August-27
ಗಂಗಾವತಿ: ಕೊಪ್ಪಳ ಜಿಲ್ಲಾ ಗಂಗಾಮತ ನೌಕರರ ಸಂಘದ ವತಿಯಿಂದ ಜಿಲ್ಲಾ ಗಂಗಾಮತ ಸಮಾಜದ ಆಶ್ರಯದಲ್ಲಿ ದಿನಾಂಕ: ೨೭.೦೮.೨೦೨೩ ರ ಭಾನುವಾರದಂದು ಗಂಗಾವತಿ ನಗರದ ಐ.ಎಂ.ಎ ಭವನದಲ್ಲಿ ಗಂಗಾಮತ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಆಯೋಜಿಸಲಾಗುತ್ತಿದೆಯೆಂದು ಗಂಗಾವತಿ ತಾಲೂಕ ಗಂಗಾವತಿ ಸಮಾಜ, ತಾಲೂಕ ಗಂಗಾಮತ ನೌಕರರ ಸಂಘದ ಪ್ರಮುಖರು ತಿಳಿಸಿದ್ದಾರೆ.
೨೦೨೨-೨೩ನೇ ಶೈಕ್ಷಣಿಕ ವರ್ಷದಲ್ಲಿ ಶೇಕಡಾವಾರು ೮೫ ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿ.ಯು.ಸಿ ಯ ಕೊಪ್ಪಳ ಜಿಲ್ಲಾ ಗಂಗಾಮತ ಸಮುದಾಯದ ವಿದ್ಯಾರ್ಥಿ, ವಿದ್ಯಾರ್ಥಿನಿಯರನ್ನು ಸನ್ಮಾನಿಸಲು ಉದ್ದೇಶಿಸಲಾಗಿದ್ದು, ಇದೇ ಸಮಾರಂಭದಲ್ಲಿ ವಿಶೇಷ ಸಾಧಕರು ಹಾಗೂ ನಿವೃತ್ತ ನೌಕರರಿಗೆ ಸನ್ಮಾನಿಸಲಾಗುವುದು.
ಕರ್ನಾಟಕ ರಾಜ್ಯ ಗಂಗಾವತಿ ನೌಕರರ ಸಂಘದ ಅಧ್ಯಕ್ಷರು, ಕೊಪ್ಪಳ ಜಿಲ್ಲಾ ಗಂಗಾಮತ ಸಮಾಜದ ಅಧ್ಯಕ್ಷರ ನೇತೃತ್ವದಲ್ಲಿ ೨೭ ರಂದು ಬೆಳಿಗ್ಗೆ ೯:೩೦ಕ್ಕೆ ಸರಿಯಾಗಿ ಆರಂಭವಾಗಲಿರುವ ಈ ಸಮಾರಂಭದಲ್ಲಿ ಪಾಲ್ಗೊಳ್ಳಲು ಅರ್ಹ ವಿದ್ಯಾರ್ಥಿಗಳು ದಿನಾಂಕ: ೨೫.೦೮.೨೦೨೩ ರೊಳಗೆ ಈ ಕೆಳಕಂಡ ಮೊಬೈಲ್ಗಳಿಗೆ ಕೆರೆಮಾಡಿ ಸೂಕ್ತ ದಾಖಲೆಗಳೊಂದಿಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕೆAದು ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: ೯೪೮೦೨೪೨೮೩೫, ೯೦೬೦೦೨೨೮೦೨, ೮೬೬೦೫೩೦೭೫೭, ೯೪೮೦೩೦೭೭೯೯ ಗಳಿಗೆ ಸಂಪರ್ಕಿಸಿ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…