Breaking News

ಆಗಷ್ಟ್ .23ರಂದು ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಶಂಕುಸ್ಥಾಪನೆ

IMG 20230821 WA0017 300x135


ಗಂಗಾವತಿ: ಗಂಗಾವತಿ ನಗರದ ಕನಕಗಿರಿ ರಸ್ತೆಯಲ್ಲಿರುವ ಕಂಪ್ಲಿ ತಡಸಾಲೆಪ್ಪನವರ ದಾನ ನೀಡಿರುವ ಭೂಮಿಯಲ್ಲಿ ಶ್ರೀ ಬೀರಲಿಂಗೇಶ್ವರ ದೇವಸ್ಥಾನ ನಿರ್ಮಾಣದ ಭೂಮಿಪೂಜಾ ಕಾರ್ಯಕ್ರಮ ಆಗಸ್ಟ್ 23ರಂದು ಬುಧವಾರ ಬೆಳಗ್ಗೆ 9 ಗಂಟೆಗೆ ನೆರವೇರಲಿದ್ದು ಕಾರ್ಯಕ್ರಮಕ್ಕೆ ಹಾಲುಮತ ಸಮಾಜದ ಗುರುಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ತಂಗಡಗಿ ಸೇರಿದಂತೆ ಅನೇಕ ಗಣ್ಯರು ಆಗಮಿಸಲಿದ್ದು ಹಾಲುಮತ ಕುರುಬ ಸಮಾಜದ ಹಾಗೂ ಸರ್ವ ಸಮಾಜದವರು ಆಗಮಿಸುವಂತೆ ಶ್ರೀ ಬೀರಲಿಂಗೇಶ್ವರ ಕುರುಬರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಕೆ .ನಾಗೇಶಪ್ಪ ಮತ್ತು ನಗರಸಭೆಯ ಮಾಜಿ ಅಧ್ಯಕ್ಷ ಕೆ .ವೆಂಕಟೇಶ್ ಇವರು ಕೋರಿದ್ದಾರೆ
ಅವರು ಬೀರಲಿಂಗೇಶ್ವರ ಸಮುದಾಯ ಭವನದ ಹತ್ತಿರ ಸುದ್ದಿಗಾರರೊಂದಿಗೆ ಮಾತನಾಡಿ ಹಲವು ದಶಕಗಳ ಹಾಲುಮತ ಕುರುಬ ಸಮಾಜದ ಕನಸಾಗಿರುವ ಶ್ರೀ ಬೀರಲಿಂಗೇಶ್ವರ ದೇವಸ್ಥಾನ ನಿರ್ಮಾಣದ ಭೂಮಿ ಪೂಜೆ ಕಾರ್ಯಕ್ರಮ ಆಗಸ್ಟ್ 23 ಬುಧವಾರ ಬೆಳಗ್ಗೆ 9 ಗಂಟೆಗೆ ನೆರವೇರಿಸಲಾಗುತ್ತಿದ್ದು ಸಮಾಜದ ಗುರುಗಳಾದ ಸಿದ್ದಯ್ಯ ,ಸಿದ್ದರಾಮಯ್ಯ ಗುರುವಿನ ನೇತೃತ್ವದಲ್ಲಿ
ನೆರವೇರಲಿದ್ದು ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಶಾಸಕರಾದ ಗಾಲಿ ಜನಾರ್ದನ್ ರೆಡ್ಡಿ, ಕೆ .ರಾಘವೇಂದ್ರ ಹಿಟ್ನಾಳ್ ,ದೊಡ್ಡನಗೌಡ ಪಾಟೀಲ್, ಮಾಜಿ ಸಂಸದರಾದ ಕೆ ವಿರುಪಾಕ್ಷಪ್ಪ ,ಎಚ್.ಜಿ. ರಾಮುಲು ವಿಧಾನ ಪರಿಷತ್ ಮಾಜಿ ಸದಸ್ಯರಾದ ಎಚ್ಆರ್ ಶ್ರೀನಾಥ್, ಮಾಜಿ ಸಚಿವರಾದ ಇಕ್ಬಾಲ್ ಅನ್ಸಾರಿ, ಎಂ ಮಲ್ಲಿಕಾರ್ಜುನ್ ನಾಗಪ್ಪ ,ಸಾಲೋಣಿ ನಾಗಪ್ಪ ,ಆನೆಗುಂದಿ ರಾಜವಂಶಸ್ಥರಾದ ಲಲಿತಾರಾಣಿ ಶ್ರೀರಂಗದೇವರಾಯಲು, ಮಾಜಿ ಶಾಸಕರಾದ ಪರಣ್ಣ ಮುನವಳ್ಳಿ , ಜಿ.ವೀರಪ್ಪ ,ಕನಕದಾಸ ತಾಲೂಕು ಕುರುಬರ ಸಂಘದ ಅಧ್ಯಕ್ಷ ವಿಠಲಾಪುರ ಯಮನಪ್ಪ ಸೇರಿ ಅನೇಕ ಸಮಾಜಗಳ ಮುಖಂಡರು ಪಾಲ್ಗೊಳ್ಳಲಿದ್ದಾರೆ.
ಕಾರಣ ಗಂಗಾವತಿ ತಾಲೂಕು ಹಾಲುಮತ ಕುರುಬ ಸಮಾಜದ ಸರ್ವ ಸಮಾಜ ಬಾಂಧವರು ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ನಿರ್ಮಾಣ ಭೂಮಿ ಪೂಜಾ ಕಾರ್ಯಕ್ರಮದಲ್ಲಿ ತಪ್ಪದೇ ಪಾಲ್ಗೊಳ್ಳುವ ಮೂಲಕ ಕೈಜೋಡಿಸುವಂತೆ ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ಎನ್. ಯಮನೂರಪ್ಪ ,ಎನ್. ಶರಣಪ್ಪ ,ಶಿವಬಸವನಗೌಡ ,ಚಂದ್ರಶೇಖರ್ ನಂದಿಹಳ್ಳಿ, ನಿಂಗಪ್ಪ ತಡಸಾಲೆಪ್ಪ ಸೇರಿದಂತೆ ಅನೇಕರಿದ್ದರು

About Mallikarjun

Check Also

ಹಳಿಯಾಳ ಆರ್‌ಸೆಟಿ ಸಂಸ್ಥೆಯಿಂದ ವಿವಿಧ ತರಬೇತಿ: ಅರ್ಜಿ ಆಹ್ವಾನ

ಹಳಿಯಾಳ ಆರ್‌ಸೆಟಿ ಸಂಸ್ಥೆಯಿಂದ ವಿವಿಧ ತರಬೇತಿ: ಅರ್ಜಿ ಆಹ್ವಾನ Various training from Haliyala RSETI Institute: Applications invited …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.