ಕಲ್ಯಾಣಸಿರಿ ವಿಶೇಷ

ಹಿಂದುಳಿದ ಸಮುದಾಯ ಸಂಘಟನೆಗೆ ಪ್ರತಿಯೊಬ್ಬರು ಶ್ರಮಿಸಬೇಕು

Everyone should strive for backward community organization

ಗಂಗಾವತಿ: ಹಿಂದುಳಿದ ಸಮುದಾಯಗಳ ಸಂಘಟನೆ ಮತ್ತು ಸಮುದಾಯದ ಅಭಿವೃದ್ಧಿಗೆ ಪ್ರತಿಯೊಬ್ಬರು ಸಹ ಒಗ್ಗಟ್ಟಿನಿಂದ ಶ್ರಮವಹಿಸಿಬೇಕು. ಅಂದಾಗ ಮಾತ್ರ ಸಮುದಾಯ ಆರ್ಥಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಮುಂದೆ ಬರಲು ಸಾಧ್ಯವಾಗುತ್ತದೆ ಎಂದು ವಿಧಾನ ಪರಿಷತ್‌ನ ಮಾಜಿ ಸದಸ್ಯರಾದ ಹೆಚ್.ಆರ್. ಶ್ರೀನಾಥ ಹೇಳಿದರು.
ನಗರದ ಕನಕಗಿರಿ ರಸ್ತೆಯಲ್ಲಿರುವ ಕೃಷಿ ವಿಜ್ಞಾನ ಕೇಂದ್ರದ ಎದುರುಗಡೆ ಹಾಲುಮತ ಕುರುಬ ಸಮಾಜದ ವತಿಯಿಂದ ಗುರುವಾರ ಹಮ್ಮಿಕೊಂಡ ಬೀರಲಿಂಗೇಶ್ವರ ದೇವಸ್ಥಾನ ನಿರ್ಮಾಣದ ಭೂಮಿ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಹಾಲುಮತ ಸಮಾಜದವರು ಸಾಕಷ್ಟು ವಿಶಾಲವಾದ ಹೃದಯವನ್ನು ಹೊಂದಿದ್ದಾರೆ. ಅವರು ಇತರ ಎಲ್ಲಾ ಸಮಾಜದವರೊಂದಿಗೆ ಅನ್ಯೂನ್ಯತೆಯಿಂದ ಬದುಕು ಸಾಗಿಸುತ್ತಿದ್ದು, ಸಮಾಜದ ಏಳಿಗೆಗೆ ಶ್ರಮ ವಹಿಸುತ್ತಿದ್ದಾರೆ. ಸಮಾಜವು ಬದಲಾವಣೆಯನ್ನು ಕಂಡುಕೊಳ್ಳಬೇಕಾದರೆ ಪ್ರತಿಯೊಬ್ಬರು ಮಕ್ಕಳಿಗೆ ಶಿಕ್ಷಣವನ್ನು ನೀಡಬೇಕು. ಶಿಕ್ಷಣದಿಂದ ಮಾತ್ರ ಬದಲಾವಣೆಯನ್ನು ಕಂಡುಕೊಳ್ಳಲು ಸಾಧ್ಯವಾಗುತ್ತದೆ. ರಾಜ್ಯಕ್ಕೆ ಮುಖ್ಯಮಂತ್ರಿಗಳನ್ನು ನೀಡಿದ ಕೊಡುಗೆ ಹಾಲುಮತ ಸಮಾಜದ ಮೇಲಿದೆ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಕೂಡ ರಾಜ್ಯದ ಜನರಿಗೆ ಉತ್ತಮ ಯೋಜನೆಗಳ ಮೂಲಕ ಬಡವರ ಬದುಕಿಗೆ ಆಧಾರವಾಗಿದ್ದಾರೆ. ನಮ್ಮ ತಂದೆ ಐದು ಬಾರಿ ಸಂಸದರಾಗಲು ಎಲ್ಲಾ ಹಿಂದುಳಿದ ವರ್ಗಗಳ ಬೆಂಬಲದ ಜೊತೆಗೆ ಹಾಲುಮತ ಕುರುಬ ಸಮಾಜದವರ ಬೆಂಬಲ ಬಹಳಷ್ಟಿತ್ತು. ಸದ್ಯ ಗಂಗಾವತಿಯಲ್ಲಿ ಬೀರಲಿಂಗೇಶ್ವರ ದೇವಸ್ಥಾನ ನಿರ್ಮಾಣ ಮಾಡಲು ಅಡಿಗಲ್ಲು ಪೂಜೆ ಮಾಡಲಾಗಿದ್ದು, ಇದೊಂದು ಒಳ್ಳೆಯ ಕೆಲಸವಾಗಿದೆ. ಆದಷ್ಟು ಬೇಗನೆ ದೇವಸ್ಥಾನ ನಿರ್ಮಾಣಗೊಂಡು ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಜರುಗಲಿ ಎಂದು ಹೇಳಿದರು. ನಂತರ ದೇವಸ್ಥಾನ ನಿರ್ಮಾಣಕ್ಕಾಗಿ ಭೂಮಿ ಪೂಜೆಯನ್ನು ನಡೆಸಲಾಯಿತು.
ಮಾಜಿ ಶಾಸಕ ಜಿ. ವೀರಪ್ಪ, ಮಾಜಿ ಸಚಿವ ಮಲ್ಲಿಕಾರ್ಜುನ ನಾಗಪ್ಪ, ಹಾಲುಮತ ಸಮಾಜದ ಮುಖಂಡರಾದ ವಿಠಲಾಪುರ ಯಮನಪ್ಪ, ಕೆ. ನಾಗೇಶಪ್ಪ, ಶರಣೇಗೌಡ, ಸಣ್ಣಕ್ಕಿ ನೀಲಪ್ಪ, ಡಿ.ಕೆ. ಆಗೋಲಿ, ಅಶೋಕಗೌಡ, ಹೊಸಳ್ಳಿ ಮೊರಿ ದುಗುರಪ್ಪ, ಹನುಮಂತಪ್ಪ, ಕೆ. ವೆಂಕಟೇಶ, ಯಮನೂರಪ್ಪ, ಶಿವಪ್ಪ, ಮಲ್ಲಪ್ಪ ಹಾಗೂ ಇತರರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

12 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

12 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

12 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

12 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

12 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

12 hours ago