ಕಲ್ಯಾಣಸಿರಿ ವಿಶೇಷ

ಫಕ್ರುಸಾಬ ನದಾಫ್ ಕರ್ನಾಟಕ ಮುಸ್ಲಿಂ ಯೂನಿಟಿ ಕೊಪ್ಪಳ ತಾಲೂಕಾ ಅಧ್ಯಕ್ಷರಾಗಿ ನೇಮಕ

Fakhrusaba Nadaf appointed as President of Karnataka Muslim Unity Koppal Taluka


ಕೊಪ್ಪಳ : ಕರ್ನಾಟಕ ಮುಸ್ಲಿಂ ಯೂನಿಟಿ ಕೊಪ್ಪಳ ತಾಲೂಕಾ ಅಧ್ಯಕ್ಷರನ್ನಾಗಿ ಫಕ್ರುಸಾಬ ತಂದೆ ಖಾಸೀಮ್‌ಸಾಬ ನದಾಫ್, ಸಾ: ಕೊಪ್ಪಳ ಇವರನ್ನು ನೇಮಕ ಎಂದು ಕರ್ನಾಟಕ ಮುಸ್ಲಿಂ ಯೂನಿಟಿ ಜಿಲ್ಲಾಧ್ಯಕ್ಷ ಮಹ್ಮದ್ ಜಿಲಾನ್ ಕಿಲ್ಲೇದಾರ (ಮೈಲೈಕ್) ತಿಳಿಸಿದ್ದಾರೆ.
ಕರ್ನಾಟಕ ಮುಸ್ಲಿಂ ಯೂನಿಟಿ ಸಂಘವು ಕರ್ನಾಟಕ ರಾಜ್ಯಾದ್ಯಂತ ಮುಸ್ಲಿಂ ಸಮಾಜವನ್ನು ಸಂಘಟಿಸಿ, ಸಮಾಜದ ಹಕ್ಕುಗಳಿಗಾಗಿ ಹೋರಾಟ ಮಾಡುವ ಒಂದು ಸಂಘವಾಗಿದ್ದು, ಸಂಘದ ಧ್ಯೆಯೋದ್ದೇಶಗಳಿಗಾಗಿ ಕಾನೂನಿನ ಚೌಕಟ್ಟಿನಲ್ಲಿ ಸಂಘಟನೆಯನ್ನು ಕೈಗೊಂಡು, ಸಂಘದ ನೀತಿ ನಿಯಮಗಳಿಗನುಸಾರವಾಗಿ ಸಮಾಜದ ಹಿರಿಯ-ಕಿರಿಯರನ್ನು, ಯುವಕರನ್ನು ಸಂಘಟಿಸಿ, ಸಂಘವನ್ನು ಬಲಪಡಿಸುವ ಹೊಣೆಗಾರಿಕೆಯನ್ನು ತಮಗೆ ನೀಡಲಾಗಿದೆ.
ಕೊಪ್ಪಳ ತಾಲೂಕಿನಾದ್ಯಂತ “ಕರ್ನಾಟಕ ಮುಸ್ಲಿಂ ಯೂನಿಟಿ” ಸಂಘಟನೆ ಮಾಡಲು ಜಿಲ್ಲಾ ಹಾಗೂ ರಾಜ್ಯ ಸಮಿತಿಗಳಿಗೆ ತಾವು ಅಗತ್ಯ ಸಹಕಾರ ನೀಡಲು ಕೋರುತ್ತೇವೆ. ಕೊಪ್ಪಳ ತಾಲೂಕಿನಾದ್ಯಂತ ಮುಸ್ಲಿಂ ಸಮಾಜವನ್ನು ಸಂಘಟಿಸಿ, ತಾಲೂಕಿನ ಮುಸ್ಲಿಂ ಸಮಾಜದ ಹಿರಿಯರನ್ನು ಮತ್ತು ಯುವಕರನ್ನು ಹಾಗೂ ಮುಸ್ಲಿಂ ಮೌಲ್ವಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಘಟನೆ ಚುರುಕುಗೊಳಿಸಬೇಕೆಂದು ತಿಳಿಸಲಾಗಿದೆ.
ಹರ್ಷ : ಕರ್ನಾಟಕ ಮುಸ್ಲಿಂ ಯೂನಿಟಿ ಕೊಪ್ಪಳ ತಾಲೂಕಾ ಅಧ್ಯಕ್ಷರಾಗಿ ಫಕ್ರುಸಾಬ ನದಾಫ್ ನೇಮಕಗೊಂಡಿದ್ದಕ್ಕೆ ಅನೇಕರು ಅಭಿನಂದಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.

Mallikarjun

Share
Published by
Mallikarjun

Recent Posts

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…

3 hours ago

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

22 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

22 hours ago