Railway: Goa-Gangavati Railway demand should not be like this when asked for Gangavati, went to Hospet
ಗಂಗಾವತಿ: ಮುಂಬೈ-ಗದಗ ಮತ್ತು ಸೊಲ್ಲಾಪುರ-ಗದಗ ರೇಲ್ವೆಗಳ ಸಂಚಾರವನ್ನು ಗಂಗಾವತಿ ನಗರದವರೆಗೂ ವಿಸ್ತರಿಸುವಂತೆ ಕೊಪ್ಪಳ ಜಿಲ್ಲಾ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆವತಿಯಿಂದ ಕೇಂದ್ರ ಸರಕಾರಕ್ಕೆ ಮತ್ತು ಸಂಸದರಿಗೆ ವರ್ಷಾನುಗಟ್ಟಲೇ ಪತ್ರ ಬರೆದು,ಬೇಡಿಕೆ ಸಲ್ಲಿಸಲಾಗಿತ್ತು. ಆದರೆ ಅವುಗಳನ್ನು ಹೊಸಪೇಟೆ ನಗರದವರೆಗೂ ವಿಸ್ತರಿಸಲಾಯಿತು ಎಂದು ಸಂಸ್ಥೆಯ ಅಧ್ಯಕ್ಷ ಅಶೋಕಸ್ವಾಮಿ ಹೇರೂರ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದೇ ರೀತಿ ಗೋವಾ-ಗಂಗಾವತಿ ರೇಲ್ವೆ ಬೇಡಿಕೆಯ ಬಗ್ಗೆಯೂ ಮನವಿ ಸಲ್ಲಿಸುತ್ತಾ ಬರಲಾಗುತ್ತಿದೆ.ನಮ್ಮ ಭಾಗದ ಬೇಡಿಕೆಯಾದ ಗೋವಾ-ಗಂಗಾವತಿ ರೇಲ್ವೆ ಕೂಡ ಬೇರೆ ಊರಿನ ಪಾಲಾದರೆ,ಸಹಿಸುವುದಿಲ್ಲ ಎಂದು ಕಿಷ್ಕಿಂದಾ ಹೋರಾಟ ಸಮಿತಿಯ ಸಹ ಸಂಚಾಲಕರೂ ಆಗಿರುವ ಹೇರೂರ ಎಚ್ಚರಿಸಿದ್ದಾರೆ. ದೂರದ ಸಂಚಾರದ ರೇಲ್ವೆಗಳನ್ನು ಶುಚಿಗೊಳಿಸಲು, ಬೋಗಿಗಳಿಗೆ ತುಂಬಿಸಲು ಬೇಕಾದ ನೀರಿನ ವ್ಯವಸ್ಥೆಯನ್ನು ರೇಲ್ವೆ ಇಲಾಖೆ ಮಾಡಿಕೊಳ್ಳಬೇಕು. ಅದು ಬಿಟ್ಟು ವ್ಯವಸ್ಥೆ ಇಲ್ಲ ಎಂದು ನೆಪ ಹೇಳಿ,ಸೌಲಭ್ಯಗಳನ್ನು ನಿರಾಕರಿಸುವುದು ಸರಿಯಲ್ಲ ಎಂದವರು ತಮ್ಮ ಆಕ್ರೊಶ ವ್ಯಕ್ತಪಡಿಸಿದ್ದಾರೆ. ಗಂಗಾವತಿ,ಕಾರಟಗಿಯಿಂದ ಭತ್ತ ಕಳುಹಿಸಿ, ಕೋಟ್ಯಾಂತರ ರೂಪಾಯಿಗಳ ಆದಾಯ ನೀಡಿದಾಗ ಹಿರಿ ಹಿರಿ ಹಿಗ್ಗಿದ್ದ ರೇಲ್ವೆ ಇಲಾಖೆಯ ಅಧಿಕಾರಿಗಳು, ಸೌಲಭ್ಯಗಳನ್ನು ಒದಗಿಸಲು ಹಿಂದೇಟು ಹಾಕುತ್ತಿರುವುದು ವಿಷಾಧಕರ ಎಂದು ಅಶೋಕಸ್ವಾಮಿ ಹೇರೂರ ಹೇಳಿದ್ದಾರೆ. ಗೋವಾ-ಗಂಗಾವತಿ ರೇಲ್ವೆ ಆರಂಭಿಸಲು ಕ್ರಮ ಕೈಗೊಳ್ಳಲು ಸಂಸದ ಸಂಗಣ್ಣ ಕರಡಿಯವರಿಗೆ ಪುನಃ ಪತ್ರ ಬರೆಯಲಾಗಿದೆ.ಅವರ ಸರಕಾರಿ ಕಾರ್ಯದರ್ಶಿಯವರ ಜೊತೆಗೂ ಮಾತನಾಡಲಾಗಿದೆ ಎಂದು ಹೇರೂರ ಮಾಹಿತಿ ನೀಡಿದ್ದಾರೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…