Teacher Akkamma Hiremath was awarded the State Award for Education
ಕೊಪ್ಪಳ:ತಾಲೂಕಿನ ಶಿವಪುರ ಗ್ರಾಮದ ಶಿಕ್ಷಕಿ,
ಪ್ರತಿಷ್ಠಿತ ಬೋರುಕಾ ಪ್ರೌಢ ಶಾಲೆಯಲ್ಲಿ ಎರಡು
ದಶಕ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ, ಉಚಿತವಾಗಿ ಬಡ
ಹಿಂದುಳಿದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳ
ಪ್ರವೇಶಕ್ಕೆ ಶಿಬಿರ, ಮನೆ ಪಾಠ,ಅಂಜನಾದ್ರಿ ಕೋಚಿಂಗ್
ಸೆAಟರ್ ನಡೆಸುತ್ತಿರುವ ಅಕ್ಕಮ್ಮ ಸಿದ್ದಲಿಂಗಯ್ಯ
ಹಿರೇಮಠ ಅವರ ಶಿಕ್ಷಣ ಕ್ಷೇತ್ರದ ಸಾಧನೆ ಪರಿಗಣಿಸಿ
ರಾಜ್ಯ ಮಟ್ಟದ ನಿಸರ್ಗ ಶಿಕ್ಷಣ ರತ್ನ ಪ್ರಶಸ್ತಿ ನೀಡಿ
ಗೌರವಿಸಲಾಯಿತು.
ಜಿಲ್ಲೆಯ ಕುಷ್ಟಗಿ ತಾಲೂಕಿನ ಹನಮಸಾಗರದ
ನಿಸರ್ಗ ಸಂಗೀತ ವಿದ್ಯಾಲಯ ಹಾಗೂ ರಂಗ ಕಲಾವಿದರ
ಸಂಘದ ಆಶ್ರಯದಲ್ಲಿ ನಡೆದ ಗುಬ್ಬಿ ವೀರಣ್ಣ
ಪ್ರಶಸ್ತಿ ಪುರಸ್ಕೃತ ದಿ.ಪಿ.ಬಿ.ಧುತ್ತರಗಿ ಹಾಗೂ
ರಾಜ್ಯೋತ್ಸವ ಪ್ರಶಸ್ತಿ ಪರಸ್ಕೃತ ದಿ. ಸರೋಜಮ್ಮ
ಧುತ್ತರಗಿ ಇವರ ಸ್ಮರಣಾರ್ಥ ನಿಸರ್ಗ ಸಂಗೀತ
ವಿದ್ಯಾಲಯದ ೨೫೦ನೇ ನಿರಂತರ ಸಂಗೀತ ಸರಣಿ
ಮತ್ತು ೨೩ನೇ ವಾರ್ಷಿಕೋತ್ಸವದ ಅಂಗವಾಗಿ ವಿವಿಧ
ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಕೊಡ
ಮಾಡುವ ರಾಜ್ಯ ಮಟ್ಟದ ಪ್ರಶಸ್ತಿಯನ್ನು ನೀಡಿ
ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಮಲ್ಲಯ್ಯ
ಕೋಮಾರಿ, ಹಿರಿಯ ಪತ್ರಕರ್ತ ಶರಣಪ್ಪ
ಬಾಚಲಾಪೂರ, ಸಿ, ಮಹಾಲಕ್ಷ್ಮಿ ಗಂಗಾವತಿ ಮತ್ತು
ಮುತ್ತು ವಡ್ಡರ ಸೇರಿದಂತೆ ಹಲವರು
ಉಪಸ್ಥಿತರಿದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…