ಕಲ್ಯಾಣಸಿರಿ ವಿಶೇಷ

ಕೊಪ್ಪಳ ನಗರದ ಗೇಟ್ ಸಂ.66ರ ಮೇಲ್ಸೇತುವೆಗೆ ಹೆಚ್ಚುವರಿ 13.78 ಕೋಟಿ ಮಂಜೂರು: ಸಂಸದರಾದ ಕರಡಿ ಸಂಗಣ್ಣ ಹರ್ಷ

Additional 13.78 crore sanctioned for the flyover of Gate No. 66 of Koppal Nagar: MP Karadi Sanganna Harsha

ಕೊಪ್ಪಳ ಆಗಸ್ಟ್ 31 (ಕರ್ನಾಟಕ ವಾರ್ತೆ): ಕೊಪ್ಪಳ ನಗರದ ಕುಷ್ಟಗಿ ರಸ್ತೆಯ ರೈಲ್ವೆ ಗೇಟ್ ಸಂಖ್ಯೆ 66ರ ಮೇಲ್ವೇತುವೆಗೆ ಕೇಂದ್ರ ಸರ್ಕಾರದ ಹೆಚ್ಚುವರಿ 13.78 ಕೋಟೆ ರೂ.ಗಳು ಮಂಜೂರಾಗಿರುವುದಕ್ಕೆ ಕೊಪ್ಪಳ ಸಂಸದರಾದ ಕರಡಿ ಸಂಗಣ್ಣ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ಕೊಪ್ಪಳ ನಗರದ ರೈಲ್ವೆ ಗೇಟ್ ಸಂ.66ರ ಮೇಲ್ವೇತುವೆ ಕಾಮಗಾರಿಗೆ ಈ ಹಿಂದೆ 30.50 ರೂ. ಮಂಜೂರಾಗಿ ಕಾಮಗಾರಿ ಪ್ರಾರಂಭವಾಗಿರುತ್ತದೆ. ಆದರೆ ಸಾರ್ವಜನಿಕರ ಬೇಡಿಕೆಯಂತೆ ಈ ನಕ್ಷೆ ಬದಲಾವಣೆ ಮಾಡಿದ ಹಿನ್ನೆಲೆಯಲ್ಲಿ ಅಂದಾಜು ಮೊತ್ತ ಪರಿಷ್ಕೃತಗೊಂಡ ಕಾರಣ ಹೆಚ್ಚುವರಿ ಅನುದಾನ ಬಿಡುಗಡೆಗಾಗಿ ಕಳೆದ ತಿಂಗಳು ಜುಲೈ 23ರಂದು ಕೇಂದ್ರ ರೈಲ್ವೆ ಸಚಿವರಿಗೆ ಮನವಿಯನ್ನು ಸಲ್ಲಿಸಿ, ಅನುದಾನ ಬಿಡುಗಡೆ ಮಾಡಿ ಮೇಲ್ವೇತುವೆ ಕಾಮಗಾರಿ ಪೂರ್ಣಗೊಳ್ಳಲು ಸಹಕರಿಸಬೇಕೆಂದು ವಿನಂತಿಸಿಕೊಳ್ಳಲಾಗಿತ್ತು.
ಇದಕ್ಕೆ ಸಚಿವರು, ಬೋರ್ಡ ಅಧ್ಯಕ್ಷರು ಸ್ಪಂದಿಸಿ 13.78 ಕೋಟಿ ರೂ.ಗಳ ಅನುದಾನವನ್ನು ಆಗಸ್ಟ್ 30ರಂದು ಬಿಡುಗಡೆ ಮಾಡಿರುತ್ತಾರೆ. ಇದರಿಂದಾಗಿ ಕಾಮಗಾರಿ ವೇಗ ಪಡೆದುಕೊಂಡು ಡಿಸೆಂಬರ-2023ರ ಒಳಗಾಗಿ ಕಾಮಗಾರಿ ಪೂರ್ಣಗೊಂಡು ಸಾರ್ವಜನಿಕರ ಉಪಯೋಗಕ್ಕಾಗಿ ನೀಡಲಾಗುವುದು.
ಈ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡಿರುವ ಪ್ರಧಾನ ಮಂತ್ರಿಗಳಿಗೂ, ಕೇಂದ್ರ ರೈಲ್ವೆ ಮಂತ್ರಿಗಳು ಹಾಗೂ ರೈಲ್ವೆ ಮಂಡಳಿ ಮತ್ತು ಹಿರಿಯ ಅಧಿಕಾರಿಗಳಿಗೆ ಈ ಮೂಲಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಸಂಸದರಾದ ಕರಡಿ ಸಂಗಣ್ಣ ಅವರು ತಿಳಿಸಿದ್ದಾರೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

15 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

15 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

15 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

16 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

16 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

16 hours ago