Breaking News

ಕೊಟ್ಟೂರೇಶ್ವರ ಆಂಗ್ಲ ಮಾದ್ಯಮ ವಿದ್ಯಾರ್ಥಿನಿ ಕೆ. ಸೃಜನಾ ಇವರು ರಾಜ್ಯ ಮಟ್ಟದ ಚದುರಂಗ ಸ್ಪರ್ಧೆಗೆ ಆಯ್ಕೆ.

Kottureswar English medium student K. Srijana is selected for the state level chess competition.

ಗಂಗಾವತಿ: ಗಂಗಾವತಿ ಪ್ರತಿಷ್ಠಿತ ಶ್ರೀ ಕೊಟ್ಟೂರೇಶ್ವರ ವಿದ್ಯಾವರ್ಧಕ ಸಂಘದ ಅಡಿಯಲ್ಲಿ ಶ್ರೀ ಕೊಟ್ಟೂರೇಶ್ವರ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ೭ನೇ ತರಗತಿ ವಿದ್ಯಾರ್ಥಿನಿಯಾದ ಕೆ. ಸೃಜನಾ ತಂದೆ ಕೆ. ಮಂಜುನಾಥ ಇವರು ದಿನಾಂಕ: ೦೭.೦೯.೨೦೨೩ ರಂದು ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ ಎಂದು ಮುಖ್ಯೋಪಾಧ್ಯಾಯರಾದ ಶ್ರೀಮತಿ ಅನಿತಾ ಇವರು ಪ್ರಕಟಣೆಯಲ್ಲಿ ತಿಳಿಸಿದರು. ಶಾಲೆಯ ಈ ವಿದ್ಯಾರ್ಥಿನಿಯ ಸಾಧನಗೆ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಮ.ನಿ.ಪ್ರ. ಡಾ|| ಕೊಟ್ಟೂರು ಮಹಾಸ್ವಾಮಿಗಳು, ಕಾರ್ಯದರ್ಶಿಗಳಾದ ಶ್ರೀ ಶರಣೆಗೌಡ ಮಾಲಿಪಾಟೀಲ್, ಕೋಶಾಧ್ಯಕ್ಷರಾದ ಶ್ರೀ ಸುರೇಶ ಸಿಂಗನಾಳ ಹಾಗೂ ಆಡಳಿತ ಮಂಡಳಿಯ ಎಲ್ಲಾ ನಿರ್ದೇಶಕರುಗಳು ಮತ್ತು ಮಾರ್ಗದರ್ಶಕರಾದ ದೈಹಿಕ ಶಿಕ್ಷಕರು ಹಾಗೂ ಎಲ್ಲಾ ಶಿಕ್ಷಕರು ಅಭಿನಂದನೆಗಳನ್ನು ತಿಳಿಸಿ ರಾಜ್ಯಮಟ್ಟದಲ್ಲಿ ಉನ್ನತ ಸಾಧನೆಮಾಡಿ ರಾಷ್ಟçಮಟ್ಟಕ್ಕೆ ಆಯ್ಕೆ ಆಗಲೆಂದು ಶುಭಕೋರಿದ್ದಾರೆ.

About Mallikarjun

Check Also

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ. ಅಪಾರ ಪ್ರಮಾಣದಲ್ಲಿ ನಷ್ಟ.

ತಿಪಟೂರು ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿ ಕುಪ್ಪಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಟ್ಟಿಗೆಹಳ್ಳಿ ಗ್ರಾಮದ ದಲಿತ ಸಮುದಾಯದ ಕೆಂಪರಾಮಯ್ಯ ಸನ್ ಆಫ್ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.