Breaking News

ಆ ವ್ಯವಸ್ಥೆಯ ಆ ಗರ ವಾದ ಗಂಗಾವತಿ ಕೇಂದ್ರ ಬಸ್ ನಿಲ್ದಾಣ, ಸ್ವಚ್ಛತೆಗೆ ಮುಂದಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ

Central Bus Stand, the central bus stand of that system, warning of protest if not cleaned.

ಜಾಹೀರಾತು

ಗಂಗಾವತಿ, ನಗರದ ಕೇಂದ್ರ ಬಸ್ ನಿಲ್ದಾಣ ಕಸ ಕಡ್ಡಿ ನೀರು ಪ್ಲಾಸ್ಟಿಕ್ ಇತ್ಯಾದಿಗಳಿಂದ ತುಂಬಿ ತುಳುಕುತ್ತಿದ್ದು ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಗಳು ಇವೆ, ಇದಕ್ಕೆ ಸಂಬಂಧಪಟ್ಟಂತೆ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಅಧ್ಯಕ್ಷ ಪಂಪಣ್ಣ ನಾಯಕ್ ಪ್ರತಿಕ್ರಿಯೆ ವ್ಯಕ್ತಪಡಿಸಿ ಮೂರು ದಿನದೊಳಗೆ ಸಾರಿಗೆ ಸಂಸ್ಥೆಯ ಘಟ್ಟ ವ್ಯವಸ್ಥಾಪಕರು ಹಾಗೂ ಬಸ್ ನಿಲ್ದಾಣದಲ್ಲಿರುವ ಕಂಟ್ರೋಲರ್ ಸ್ವಚ್ಛತೆಗೆ ಮುಂದಾಗದೆ ಇದ್ದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಶೆಟ್ಟಿ ಬಣದ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದೆಂದು ಎಚ್ಚರಿಕೆ ನೀಡಿದ್ದಾರೆ, ಶಕ್ತಿ ಯೋಜನೆಯ ಅಡಿಯಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದ್ದರು ಸ್ವಚ್ಛತೆ ಮಾತ್ರ ಮರೀಚಿಕೆಯಾಗಿ ಕಂಡು ಬಂದಿದೆ, ಪಕ್ಕದ ನೆರೆ ರಾಜ್ಯದಲ್ಲಿ ಭಯಂಕರ ಸಾಂಕ್ರಾಮಿಕ ರೋಗ ಕಂಡುಬಂದಿದ್ದು ಸಾವು ನೋವುಗಳ ಸಂಖ್ಯೆ ಹಾಗೂ ಸಾಂಕ್ರಾಮಿಕವಾಗಿ ರೋಗ ಉಲ್ಬಳಗೊಳ್ಳುವ ಸಾಧ್ಯತೆಗಳು ಇವೆ, ಈ ಹಿನ್ನೆಲೆಯಲ್ಲಿ ಸಾರಿಗೆ ಸಂಸ್ಥೆ ಸೇರಿದಂತೆ ಸಂಬಂಧಪಟ್ಟಂತಹ ಅಧಿಕಾರಿ ವರ್ಗದವರು ಸಾರ್ವಜನಿಕ ಪ್ರಯಾಣಿಕರ ಹಿತ ದೃಷ್ಟಿಯಿಂದ ಮುಂಜಾಗ್ರತಿ ಕ್ರಮಗಳನ್ನು ತೆಗೆದುಕೊಂಡು ಸ್ವಚ್ಛತೆಗೆ ಮುಂದಾಗಬೇಕೆಂದು ಒತ್ತಾಯಿಸಿದ್ದಾರೆ, ರೋಗಗಳು ಹರಡೋಕುoತ್ತ ಮುಂಚೆ ರೋಗ ಹರಡದಂತೆ ಎಚ್ಚರಿಕೆ ವಹಿಸಬೇಕು, ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

About Mallikarjun

Check Also

ದೇಶದ ಕಾರ್ಮಿಕ ವರ್ಗದ ಸಮಸ್ಯೆಗಳನ್ನು ಪರಿಹರಿಸಲು ಆಗ್ರಹಿಸಿ ಮಾನ್ಯ ಪ್ರಧಾಮಂತ್ರಿಗಳಿಗೆ ಮನವಿ .

Appeal to the honorable Prime Ministers to resolve the problems of the country’s working class. …

Leave a Reply

Your email address will not be published. Required fields are marked *