Breaking News

ಸಫಾಯಿಕರ್ಮಚಾರಿಗಳ ಜಾಗೃತಿ ಸಮಿತಿಗೆ ನಾಮನಿರ್ದೇಶನ: ಅರ್ಜಿ ಆಹ್ವಾನ

Nomination for Safai Karmachari Awareness Committee: Application Invitation

ಜಾಹೀರಾತು

55ಕೊಪ್ಪಳ ಸೆಪ್ಟೆಂಬರ್ 16 (ಕರ್ನಾಟಕ ವಾರ್ತೆ): ಸಫಾಯಿ ಕರ್ಮಚಾರಿಗಳ ಉಪವಿಭಾಗ ಮಟ್ಟದ ಜಾಗೃತ ಸಮಿತಿಗೆ ನಾಮನಿರ್ದೇಶಿತ ಸದಸ್ಯರ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಮ್ಯಾನ್ಯುವಲ್ ಸ್ಕ್ಯಾವೆಂಜರ್‌ಗಳ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಕಾಯ್ದೆ-2013ರ ಸೆಕ್ಷನ್-24ರ ಪ್ರಕಾರ ಜಿಲ್ಲೆಯಲ್ಲಿ ಮ್ಯಾನ್ಯುವಲ್ ಸ್ಕ್ಯಾವೆಂಜರ್‌ಗಳ ಕೆಲಸವನ್ನು ನಿಷೇಧಿಸುವುದಕ್ಕಾಗಿ ಮತ್ತು ಮ್ಯಾನ್ಯುಯಲ್ ಸ್ಕ್ಯಾವೆಂಜರ್‌ಗಳ ಪುನರ್ವಸತಿಗಾಗಿ ಕೆಲಸ ಮಾಡುತ್ತಿರುವವರನ್ನು ಒಳಗೊಂಡು ಸಫಾಯಿ ಕರ್ಮಚಾರಿಗಳ ಉಪವಿಭಾಗ ಮಟ್ಟದ ಜಾಗೃತ ಸಮಿತಿಗೆ (ವಿಜಿಲೆನ್ಸ್ ಕಮಿಟಿ) 04 ಜನ ನಾಮನಿರ್ದೇಶಿತ ಸದಸ್ಯರನ್ನು (2-ಪುರುಷ ಹಾಗೂ 2-ಮಹಿಳಾ) ನೇಮಕ ಮಾಡಬೇಕಾಗಿದೆ.
ಅರ್ಜಿಯನ್ನು ಸೆಪ್ಟೆಂಬರ್ 25 ರೊಳಗಾಗಿ ನಿಗದಿತ‌ ನಮೂನೆಯಲ್ಲಿ ಸಂಬಂಧಿಸಿದ ತಾಲೂಕಾ ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ರವರಿಂದ ಪಡೆದು ಆಯಾ ತಾಲೂಕಾ ಸಮಾಜ ಕಲ್ಯಾಣ ಇಲಾಖಾ ಕಚೇರಿಗೆ ಸಲ್ಲಿಸಬೇಕು ಎಂದು ಉಪವಿಭಾಗ ಮಟ್ಟದ ಸಫಾಯಿ ಕರ್ಮಚಾರಿಗಳ ಜಾಗೃತಿ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ಗ್ರೇಡ್-1 ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About Mallikarjun

Check Also

ಕಮಲ್ ಹಾಸನ್ ಕ್ಷಮೆ ಕೇಳುವವರೆಗೂಅವರ ಚಿತ್ರಗಳನ್ನು ರಾಜ್ಯದಲ್ಲಿ ಬ್ಯಾನ್ ಮಾಡಬೇಕು: ಬಳ್ಳಾರಿ ರಾಮಣ್ಣ ನಾಯಕ

Kamal Haasan’s films should be banned in the state until he apologizes: Ballari Ramanna Nayak …

Leave a Reply

Your email address will not be published. Required fields are marked *