ಕಲ್ಯಾಣಸಿರಿ ವಿಶೇಷ

371 ಜೆ ಕಲಂ ಸೌಲಭ್ಯ ಸದುಪಯೋಗ ಪಡೆಯಿರಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲಕ್ಷ್ಮೀದೇವಿ ಸಲಹೆ

Take advantage of the 371 J column facility suggested by Tamam Executive Officers Lakshmidevi

ಗಂಗಾವತಿ : ತಾಲೂಕು ಪಂಚಾಯತ್ ಆವರಣದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ತಾಪಂ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲಕ್ಷ್ಮೀದೇವಿ ಅವರು ಭಾನುವಾರ ಧ್ವಜಾರೋಹಣ ನೆರವೇರಿಸಿದರು.

ಮಹನೀಯರಾದ ಮಹಾತ್ಮ ಗಾಂಧೀಜಿ, ಡಾ.ಬಿ.ಆರ್ ಅಂಬೇಡ್ಕರ್, ಸರ್ಧಾರ್ ವಲ್ಲಭಬಾಯ್ ಪಟೇಲ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.

ನಂತರ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲಕ್ಷ್ಮೀದೇವಿ ಅವರು ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗ ಸ್ವಾತಂತ್ರ್ಯದಿಂದ ವಂಚಿತಗೊಂಡಿತ್ತು. ನಿಜಾಮರ ಆಳ್ವಿಕೆಯಲ್ಲಿತ್ತು. ಅವರ ಕಪಿಮುಷ್ಟಿಯಿಂದ ಹೊರಬರಲು ಶ್ರಮಿಸಿದ ಎಲ್ಲ ಹೋರಾಟಗಾರರು ಹಾಗೂ ಮಹನೀಯರನ್ನು ಎಲ್ಲರೂ ಸ್ಮರಿಸಬೇಕು.

ಕಲ್ಯಾಣ ಕರ್ನಾಟಕ ಭಾಗ ಇತರೆ ಪ್ರದೇಶಗಳಿಗೆ ಹೋಲಿಸಿದರೆ ಅಭಿವೃದ್ಧಿಯಲ್ಲಿ ಹಿಂದುಳಿದಿದೆ. ಪ್ರಾದೇಶಿಕ ಅಸಮತೋಲನ ಹೋಗಲಾಡಿಸಲು ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಇದ್ದು, ಇದಕ್ಕೆ ವಿಶೇಷ ಅನುದಾನ ನೀಡಲಾಗುತ್ತಿದೆ. 371 ಜೆ ಕಲಂ ಸೌಲಭ್ಯ ಇದೆ. ಎಲ್ಲರೂ ಈ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ತಾಪಂ ವ್ಯವಸ್ಥಾಪಕರಾದ ಶಿವಶಾಂತವೀರಯ್ಯ, ತಾಪಂ ಸಿಬ್ಬಂದಿಗಳಾದ ರಮೇಶ, ಸಂತೋಷ, ಶರಣಪ್ಪ, ಶ್ರೀನಿವಾಸ, ರಾಘವೇಂದ್ರ, ಸುಮಂಗಳಾ, ಗಂಗಮ್ಮ, ವೀರನಗೌಡ ಪಾಟೀಲ್, ಶ್ರೀಕಾಂತ್ ಅರ್ಲೂರು, ಬಾಳಪ್ಪ ತಾಳಕೇರಿ, ಶ್ಯಾಮಸುಂದರ್, ಮಲ್ಲಿಕಾರ್ಜುನ, ಹನುಮೇಶ, ಶ್ವೇತಾ ಗೃಹರಕ್ಷಕ ದಳ ಸಿಬ್ಬಂದಿಗಳು ಇದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

13 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

13 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

13 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

13 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

13 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

13 hours ago