Breaking News

ಗಣೇಶ ಹಬ್ಬ: ಮದ್ಯ ಮಾರಾಟ ನಿಷೇಧಿಸಿ ಆದೇಶ

Ganesha festival: Order to ban sale of liquor

ಕೊಪ್ಪಳ ಸೆಪ್ಟೆಂಬರ್ 19 (ಕರ್ನಾಟಕ ವಾರ್ತೆ): ಗೌರಿ-ಗಣೇಶ ಹಬ್ಬದ ಆಚರಣೆ ಹಿನ್ನೆಲೆ ಶಾಂತಿ ಪಾಲನೆಗಾಗಿ, ಸಾರ್ವಜನಿಕ ಹಿತಾಸಕ್ತಿ ಕಾಪಾಡುವ ಹಿತದೃಷ್ಟಿಯಿಂದ ಸೆಪ್ಟೆಂಬರ್ 20, 21 ಮತ್ತು 23ರಂದು ಜಿಲ್ಲೆಯ ವಿವಿಧೆಡೆ ಮದ್ಯೆ ಮಾರಾಟ ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಾದ್ಯಾಂತ ಆಚರಿಸಲಾಗುವ ಗೌರಿ-ಗಣೇಶ ಹಬ್ಬದ ಅಂಗವಾಗಿ ಕೊಪ್ಪಳ ಜಿಲ್ಲೆಯಾದ್ಯಂತ ಶ್ರೀ ಗೌರಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡುತ್ತಾರೆ ಹಾಗೂ ಗೌರಿ ಗಣೇಶ ಮೂರ್ತಿಗಳನ್ನು 1, 2, 3, 5, 7, 9, 11ನೇ ದಿನಗಳಂದು ಮೂರ್ತಿಗಳನ್ನು ಮೆರವಣಿಗೆಯಲ್ಲಿ ಸಾಗಿ ವಿಸರ್ಜನೆ ಮಾಡುವರು. ಹಬ್ಬದ ಆಚರಣೆ ಸಮಯದಲ್ಲಿ ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಂಡು ಕೆಲವು ದುಷ್ಟ ಶಕ್ತಿಗಳು ಕೋಮು ಸಾಮರಸ್ಯಕ್ಕೆ ಧಕ್ಕೆಯನ್ನುಂಟು ಮಾಡುವ ಸಾಧ್ಯತೆಗಳು ಇರುತ್ತವೆ. ಆದ್ದರಿಂದ ಹಬ್ಬದ ಆಚರಣೆ ಸಮಯದಲ್ಲಿ ಯಾವುದೇ ತರಹದ ಅಹಿತಕರ ಘಟನೆಗಳು ಜರುಗದಂತೆ ನೋಡಿಕೊಳ್ಳಲು ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಜಿಲ್ಲೆಯ ವಿವಿಧ ಠಾಣಾ ವ್ಯಾಪ್ತಿಗೆ ಸೆ. 20, 21 ಮತ್ತು 23ರಂದು ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲು ಜಿಲ್ಲಾ ಪೊಲೀಸ್ ಆಧೀಕ್ಷಕರು, ಕೊಪ್ಪಳ ಅವರು ಕೋರಿರುತ್ತಾರೆ.
ಅದರಂತೆ ಗೌರಿ-ಗಣೇಶ ಹಬ್ಬದ ಆಚರಣೆ ಪ್ರಯುಕ್ತ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಾರ್ವಜನಿಕ ಹಿತಾಶಕ್ತಿ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ ಕಾಯಿದೆ 1965ರ ಕಲಂ 21ರ ಪ್ರಕಾರ ಪ್ರದತ್ತವಾದ ಅಧಿಕಾರ ಚಲಾಯಿಸಿ, 3ನೇ ದಿನದ ಗಣೇಶ ವಿಸರ್ಜನೆಯ ಪ್ರಯುಕ್ತ ಜಿಲ್ಲೆಯ ಯಲಬುರ್ಗಾ, ಬೇವೂರು ಹಾಗೂ ಕುಕನೂರು ಠಾಣಾ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 20ರ ಬೆಳಿಗ್ಗೆ 6ರಿಂದ ರಾತ್ರಿ 11 ಗಂಟೆಯವರೆಗೆ ಮದ್ಯೆ ಮಾರಾಟವನ್ನು ನಿಷೇಧಿಸಿದೆ. ಅದೇ ರೀತಿ 3ನೇ ಮತ್ತು 5ನೇ ದಿನದ ಗಣೇಶ ವಿಸರ್ಜನೆಯ ಪ್ರಯುಕ್ತ ಕೊಪ್ಪಳ ನಗರ, ಮುನಿರಾಬಾದ್, ಕೊಪ್ಪಳ ಗ್ರಾಮೀಣ, ಅಳವಂಡಿ, ಗಂಗಾವತಿ ನಗರ, ಗಂಗಾವತಿ ಗ್ರಾಮೀಣ, ಕನಕಗಿರಿ, ಕುಷ್ಟಗಿ, ತಾವರಗೇರಾ, ಹನಮಸಾಗರ ಮತ್ತು ಕಾರಟಗಿ ಠಾಣಾ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 21ರ ಬೆಳಿಗ್ಗೆ 6ರಿಂದ ರಾತ್ರಿ 11 ಗಂಟೆಯವರೆಗೆ ಮತ್ತು ಸೆ. 23ರ ಬೆಳಿಗ್ಗೆ 6ರಿಂದ ರಾತ್ರಿ 11 ಗಂಟೆಯವರೆಗೆ ಮದ್ಯೆ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಈ ವಿಷಯವಾಗಿ ಅಬಕಾರಿ ಉಪ ಆಯುಕ್ತರ ನೇತೃತ್ವದಲ್ಲಿ ತನಿಖಾ ತಂಡ ರಚಿಸಿ ಅದರಲ್ಲಿ ಆರಕ್ಷಕ ವೃತ್ತ ನಿರೀಕ್ಷಕರು, ಅಬಕಾರಿ ವೃತ್ತ ನಿರೀಕ್ಷಕರು ಕಾರ್ಯನಿರ್ವಹಿಸಲು ಆದೇಶಿಸಿದೆ. ಈ ಆದೇಶವನ್ನು ಜಾರಿ ತರುವಲ್ಲಿ ನಿರ್ಲಕ್ಷ್ಯತನ ತೋರಿದವರ ವಿರುದ್ಧ ಕಾನೂನು ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

About Mallikarjun

Check Also

ಬಿಜೆಪಿ, ಹಿಂದುಪರ ಸಂಘಟನೆಗಳು ಯಾಕೆ ಪ್ರಜ್ವಲ್ ವಿರುದ್ಧ ಪ್ರತಿಭಟನೆ ಮಾಡುತ್ತಿಲ್ಲ : ಜ್ಯೋತಿ ಪ್ರಶ್ನೆ

ಕೊಪ್ಪಳ : ದೇಶ ಕಂಡರಿಯದಂತಹ ಹೊಲಸು ಕೆಲಸ ಮಾಡಿರುವ ಜೆಡಿಎಸ್ ಸಂಸದ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣನ ಕಾಮಕಾಂಡ ರಾಜ್ಯದ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.