Honors to MP Secretary Srinivasa Joshi.
MP Secretary Srinivasa Joshi was felicitated.
ಸಂಸದ ಕಾರ್ಯದರ್ಶಿ ಶ್ರೀನಿವಾಸ ಜೋಶಿ ಅವರನ್ನು ಸನ್ಮಾನಿಸಲಾಯಿತು.
ಗಂಗಾವತಿ: ಹೃದಯ ಆರೋಗ್ಯ ದಿನವಾದ ಶುಕ್ರವಾರದಂದು ನಗರದ ಔಷಧೀಯ ಭವನದಲ್ಲಿ ಹಮ್ಮಿ ಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ವಯೋ ನಿವೃತ್ತಿ ಹೊಂದಿದ ಸಂಸದ ಕರಡಿ ಸಂಗಣ್ಣ ಅವರ ಸರಕಾರಿ ಕಾರ್ಯದರ್ಶಿ ಶ್ರೀನಿವಾಸ ಜೋಶಿಯವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಸರಳ-ಸಜ್ಜನ,ಮೃದು ಭಾಷಿ,ಸಾತ್ವಿಕ ವ್ಯಕ್ತಿತ್ವದ ಶ್ರೀನಿವಾಸ ಜೋಶಿಯವರು ಸರಕಾರಿ ಸೇವೆಯಿಂದ ನಿವೃತ್ತರಾಗಿದ್ದರೂ,ಸಾರ್ವಜನಿಕ ಸೇವೆಯಿಂದ ದೂರ ಇರಬಾರದೆಂದು ಜಿಲ್ಲಾ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಅಶೋಕಸ್ವಾಮಿ ಹೇರೂರ ಜೋಶಿಯವರಲ್ಲಿ ವಿನಂತಿಸಿದರು.ಸಕಾರಾತ್ಮಕವಾಗಿ ಸ್ಪಂದಿಸಿದ ಜೋಶಿಯವರು ಅಭಿವೃದ್ಧಿ ಕೆಲಸಗಳಿಗಾಗಿ ಸಂಸದರೊಂದಿಗೆ ಸಹಕರಿಸುವುದಾಗಿ ತಿಳಿಸಿದರು.
ಈ ಸಂಧರ್ಭದಲ್ಲಿ ಫ಼ಾರ್ಮಸಿ ಕಾಲೇಜ್ ಪ್ರಿನ್ಸಿಪಾಲ್ ಮಂಜುನಾಥ ಬೂದಗುಂಪಾ,ಔಷಧ ವ್ಯಾಪಾರಿಗಳಾದ ಚಂದ್ರಶೇಖರ ಹೇರೂರ, ಹನುಮ ರೆಡ್ಡಿ, ಪಾಂಡುರಂಗ ಜನಾದ್ರಿ, ಪಿಕಾರ್ಡ ಬ್ಯಾಂಕ್ ಅಧ್ಯಕ್ಷ ದೊಡ್ಡಪ್ಪ ದೇಸಾಯಿ, ನಿರ್ದೇಶಕ ಶರಣಗೌಡ ಮಾಲಿ ಪಾಟೀಲ್, ನಗರ ಸಭಾ ಸದಸ್ಯರಾದ ಮನೋಹರ ಹಿರೇಮಠ, ನವೀನ ಕುಮಾರ ಮಾಲಿ ಪಾಟೀಲ್,ವಾಸುದೇವ ನವಲಿ,ಮಾಜಿ ಅಧ್ಯಕ್ಷರಾದ ರಾಘವೇಂದ್ರ ಶ್ರೇಷ್ಟಿ ಮುಂತಾದವರು ಹಾಜರಿದ್ದರು.
ವಿಶ್ವ ಫ಼ಾರ್ಮಸಿಸ್ಟ ಡೇ ಅಂಗವಾಗಿ ನಡೆದ ಅಂದಿನ ಕಾರ್ಯಕ್ರಮದಲ್ಲಿ ನೂರಕ್ಕೂ ಹೆಚ್ಚು ಜನ ಔಷಧ ವ್ಯಾಪಾರಿಗಳು ಪಾಲ್ಗೊಂಡಿದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…