Breaking News

ಬಸಾಪಟ್ಟಣಗ್ರಾಮದ ಇಬ್ಬರು ಶತಾಯುಷಿ ಮಹಿಳೆಯರನ್ನು ತಹಸೀಲ್ದಾರರಾದ ಮಂಜುನಾಥ ಅವರ ಅಧ್ಯಕ್ಷತೆಯಲ್ಲಿ ಸನ್ಮಾನಿಸಲಾಯಿತು.

Two centenarian women of Basapattanagram were felicitated under the chairmanship of Tehsildar Manjunath.


ಗಂಗಾವತಿ ತಾಲೂಕಿನ ಬಸಾಪಟ್ಟಣ ಗ್ರಾಮದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ತಾಲೂಕು ಆಡಳಿತ, ತಾಲೂಕು ಪಂಚಾಯತ ಹಾಗೂ ಗ್ರಾಮ ಪಂಚಾಯತ್ ವತಿಯಿಂದ ಇಬ್ಬರು ಶತಾಯುಷಿ ಮಹಿಳೆಯರನ್ನು ತಹಸೀಲ್ದಾರರಾದ ಶ್ರೀ ಮಂಜುನಾಥ ಅವರ ಅಧ್ಯಕ್ಷತೆಯಲ್ಲಿ ಸನ್ಮಾನಿಸಲಾಯಿತು.

ಬಸಾಪಟ್ಟಣ ಗ್ರಾಮದ ಗಂಗಮ್ಮ (106), ಮಾರೆಮ್ಮ ((103) ಅವರಿಂದ ಕೇಕ್ ಕತ್ತರಿಸಿ ವಿಶ್ವ ಹಿರಿಯರ ದಿನ ಆಚರಿಸಲಾಯಿತು. ನಂತರ ಜಿಲ್ಲಾಡಳಿತದಿಂದ ನೀಡಿದ್ದ ಪ್ರಶಂಸನಾ ಪತ್ರವನ್ನು ವಿತರಿಸಲಾಯಿತು.

ಖುಷಿಗೊಂಡ ಗ್ರಾಮಸ್ಥರು : ತಾಲೂಕು ಆಡಳಿತದ ಅಧಿಕಾರಿಗಳು ಮನೆಗೆ ಬಂದು ಶತಾಯುಷಿ ಅವರನ್ನು ಸನ್ಮಾನಿಸಿದ್ದಕ್ಕೆ ಶತಾಯುಷಿ ಅಜ್ಜಿ ಅವರ ಕುಟುಂಬಸ್ಥರು ಖುಷಿಗೊಂಡರು.

ಈ ವೇಳೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀಮತಿ ಲಕ್ಷ್ಮೀದೇವಿ, ಉಪ ತಹಸೀಲ್ದಾರರು,
ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಾದ ಶ್ರೀಮತಿ ವಿದ್ಯಾವತಿ, ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತ ಅಧಿಕಾರಿಗಳು, ಗ್ರಾಪಂ, ತಾಪಂ ಸಿಬ್ಬಂದಿಗಳು, ಎನ್ ಆರ್ ಎಲ್ ಎಂ, ಆಶಾ, ಅಂಗನವಾಡಿ ಕಾರ್ಯಕರ್ತರು, ಸ್ನೇಹ ಸಂಸ್ಥೆ ಸದಸ್ಯರು ಇದ್ದರು.

About Mallikarjun

Check Also

ಖೊಟ್ಟಿ ದಾಖಲೆ ಸೃಷ್ಟಿಸಿ, ಬಿಪಿಎಲ್ ಪಡಿತರ ಚೀಟಿ ಪಡೆದಿದ್ದ ಬಿಜೆಪಿ ಮುಖಂಡನ ವಿರುದ್ಧ ದೂರು ದಾಖಲು, ದಂಡವಸೂಲಿ.

ಕಾರಟಗಿ: ತಾಲೂಕಿನ ಸಿದ್ಧಾಪುರ ಗ್ರಾಮದ ಬಿಜೆಪಿ ಮುಖಂಡ ಆಗಿರುವ ಮಹಿಬೂಬ್ ಸಾಬ್ ಮುಲ್ಲಾ (ಎಂ.ಡಿ.ಎಸ್) ತಂದೆ ಮೋದಿನ್ ಸಾಬ್ ಈತನು …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.