Demand for Solapur Railway, letter to MP.
ಗಂಗಾವತಿ: ಸೊಲ್ಲಾಪುರ-ಗದಗ ರೇಲ್ವೆ ಸಂಚಾರವನ್ನು ಗಂಗಾವತಿ ನಗರದವರೆಗೂ ವಿಸ್ತರಿಸುವಂತೆ ಕೊಪ್ಪಳದ ಸಂಸದರಿಗೆ ಜಿಲ್ಲಾ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆ ಪತ್ರ ಬರೆದು ಒತ್ತಾಯಿಸಿದೆ.
2019 ರಲ್ಲಿಯೇ ರೇಲ್ವೆ ಸಚಿವರಿಗೆ ಮತ್ತು ರೇಲ್ವೆ ಅಧಿಕಾರಿಗಳಿಗೆ ಪತ್ರ ಬರೆದು,ಸೊಲ್ಲಾಪುರ-ಗದಗ ಮತ್ತು ಮುಂಬೈ-ಗದಗ ಎರಡೂ ರೈಲುಗಳನ್ನೂ ಗಂಗಾವತಿ ನಗರದವರೆಗೂ ವಿಸ್ತರಿಸುವಂತೆ ಪತ್ರ ಬರೆಯಲಾಗಿತ್ತು , ಆದರೂ ಎರಡು ರೈಲುಗಳಲ್ಲಿ ಒಂದನ್ನೂ ಸಹ ಗಂಗಾವತಿಯವರೆಗೂ ವಿಸ್ತರಿಸಲಾಗಿಲ್ಲ ಎಂದು ಸಂಸ್ಥೆಯ ಅಧ್ಯಕ್ಷ ಅಶೋಕಸ್ವಾಮಿ ಹೇರೂರ ಅಸಮಧಾನ ವ್ಯಕ್ತ ಪಡಿಸಿದ್ದರು.
ಈ ವಿಷಯವಾಗಿ ಸಂಸದರಿಗೆ ಪುನಃ ಪತ್ರ ಬರೆದಿರುವ ಹೇರೂರ,ಸೊಲ್ಲಾಪುರ ರೇಲ್ವೆಯನ್ನು ಗಂಗಾವತಿ ನಗರದವರೆಗೂ ವಿಸ್ತರಿಸುವಂತೆ ಕೋರಿದ್ದಾರೆ.
ಕಾರಟಗಿ-ಹುಬ್ಬಳ್ಳಿ ರೈಲ್ವೇಯನ್ನು ಧಾರವಾಡ ನಗರದವರೆಗೂ ವಿಸ್ತರಿಸುವಂತೆ ಪತ್ರ ಬರೆದು ಕೋರಿದ್ದ ಅವರು,ಇದೇ ರೀತಿ ಕಾರಟಗಿ- ಗೋವಾ ರೇಲ್ವೆ ಆರಂಭಿಸಬೇಕೆಂದು ಆಗ್ರಹಿಸಿದ್ದಾರೆ.
ಈ ಪತ್ರದ ಪ್ರತಿಗಳನ್ನು ನೈರುತ್ಯ ವಲಯದ ರೇಲ್ವೆ ಜನರಲ್ ಮ್ಯಾನೇಜರ್, ಡಿವಿಜಿನಲ್ ಮ್ಯಾನೇಜರ್ ಮತ್ತು ಡೆಪ್ಯೂಟಿ ಡಿವಿಜಿನಲ್ ಮ್ಯಾನೇಜರ್ ಸೇರಿದಂತೆ ರಾಜ್ಯದ ಮುಖ್ಯ ಮಂತ್ರಿಗಳಿಗೂ ಕಳುಹಿಸಿದ್ದಾರೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…