ಕಲ್ಯಾಣಸಿರಿ ವಿಶೇಷ

22ನೇ ಕಲ್ಯಾಣ ಪರ್ವಕ್ಕೆ ಬಸವ ಧರ್ಮ ಪೀಠ ಸಂಪೂರ್ಣವಾಗಿ ಸಜ್ಜು

Basava Dharma Peetha is fully equipped for 22nd Kalyana Parva

ಹುಮನಾಬಾದ: ಮನುಕುಲದ ಉದ್ಧಾರಕ ಅಣ್ಣ ಬಸವಣ್ಣನವರು ಮೆಟ್ಟಿದ ಧರೆ ಪಾವನ ಭೂಮಿ ಬಸವಕಲ್ಯಾಣದ ಬಸವ ಪೀಠದ ಮಹಾಮನೆಯ ಆವರಣದಲ್ಲಿ 22ನೇ ಕಲ್ಯಾಣ ಪರ್ವ ಕಾರ್ಯಕ್ರಮ ಆಚರಣೆಗೆ ಬಸವ ಧರ್ಮ ಪೀಠ ಸಂಪೂರ್ಣವಾಗಿ ಸಜ್ಜಾಗಿದೆ ಎಂದು ಬಸವಕುಮಾರ ಸ್ವಾಮಿಜಿ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಶ್ರೀಗಳು ಪೂಜ್ಯ ಗಂಗಾ ಮಾತಾಜಿಯವರ ಅಧ್ಯಕ್ಷತೆಯಲ್ಲಿ ಹಾಗೂ ಪರಮ ಪೂಜ್ಯ ಶ್ರೀ ಸಿದ್ದರಾಮೇಶ್ವರ ಸ್ವಾಮೀಜಿಗಳವರ
ನೇತೃತ್ವದಲ್ಲಿ ಇದೆ ತಿಂಗಳು 28,29,30ರ ಈ ಮೂರು ದಿವಸಗಳ ಕಾಲ ಅತ್ಯಂತ ಶಿಸ್ತು ಬದ್ಧವಾಗಿ, ಅರ್ಥಪೂರ್ಣವಾಗಿ ಕಾರ್ಯಕ್ರಮವು
ಸಾಗಲಿದೆ ಎಂದರು.

ಪರಮ ಪೂಜ್ಯ ಅನಿಮಿಷಾನಂದ ಸ್ವಾಮಿಜಿಗಳು ಮಾತನಾಡಿ ಕಲ್ಯಾಣ ಪರ್ವಕ್ಕೆ ಕರ್ನಾಟಕ, ತೆಲಂಗಾಣ ಮಹಾರಾಷ್ಟ್ರ, ತಮಿಳುನಾಡು, ಗೋವಾ ಸೇರಿದಂತೆ ಮೊದಲಾದ ರಾಜ್ಯಗಳಿಂದ ಸಾವಿರಾರು ಶರಣ ಬಂಧುಗಳು ಭಾಗವಹಿಸಲಿದ್ದಾರೆ. ವರ್ಷಕ್ಕೆ ಒಮ್ಮೆಯಾದರೂ ಕಲ್ಯಾಣ ಪರ್ವಕ್ಕೆ ಬಂದು ಧನ್ಯರಾಗಬೇಕು. ಅಂದಾಗಲೇ ಮಾತ್ರ ನಮ್ಮ ಜೀವನ ಪಾವನವಾಗುತ್ತದೆ ಎಂದರು.

ಈ ಪವಿತ್ರ ಕಲ್ಯಾಣ ಪರ್ವ ಸಮಾವೇಶಕ್ಕೆ ಜಾತಿ,ಮತ ಪಂಥಗಳ ಭೇದವಿಲ್ಲದೆ, ಸರ್ವರಿಗೂ ಆದರದ ಸ್ವಾಗತವಿದೆ.ಬಸವಾಭಿಮಾನಿಗಳ ದೇಹದಲ್ಲಿ ಜೀವ ಇರುವವರೆಗೂ ಒಮ್ಮೆಯಾದರೂ ಕಲ್ಯಾಣ ಪರ್ವದಲ್ಲಿ ಭಾಗಿಯಾಗಿ ಪಾವನರಾಗಬೇಕು.

ಪರಮ ಪೂಜ್ಯ ಬಸವಪ್ರಕಾಶ ಸ್ವಾಮಿಜಿ ಮಾತನಾಡಿ ಮೂರು ದಿವಸಗಳ ಕಾಲ ಯೋಗ , ಇಷ್ಟಲಿಂಗ ಪೂಜೆ, ಪ್ರಾರ್ಥನೆ,ಶರಣ ಸ್ಮರಣೆ, ಧರ್ಮಚಿಂತನೆ,ವಿಚಾರಗೋಷ್ಟಿ, ವಚನ ಸಂಗೀತ, ವಚನ ನೃತ್ಯ ,ಪೀಠಾರೋಹಣ,ಪಥ ಸಂಚಲನ, ಪ್ರಶಸ್ತಿ ಪ್ರದಾನ ಸೇರಿದಂತೆ ಇತ್ಯಾದಿ ಕಾರ್ಯಕ್ರಮಗಳು ನೆರವೇರಲಿವೆ ಎಂದರು.

  • ಸಂಗಮೇಶ ಎನ್ ಜವಾದಿ.
    ಸಾಹಿತಿ,ಪತ್ರಕರ್ತರು, ಪರಿಸರ ಸಂರಕ್ಷಕರು.
Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

15 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

16 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

16 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

16 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

16 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

16 hours ago