Breaking News

ಅ.15 ರಂದು ದಸರಾ ಕಾವ್ಯ ಸಂಭ್ರಮ

Dussehra poetry celebration on A.15

ಕೊಪ್ಪಳ ಅಕ್ಟೋಬರ್ 13 (ಕರ್ನಾಟಕ ವಾರ್ತೆ): ಕೊಪ್ಪಳ ವಿಶ್ವವಿದ್ಯಾಲಯ ವತಿಯಿಂದ ಕೊಪ್ಪಳ ಜಿಲ್ಲಾ ರಜತ ಮಹೋತ್ಸವ ಅಂಗವಾಗಿ ಅಕ್ಟೋಬರ್ 15 ರಂದು ಬೆಳಿಗ್ಗೆ 10.00 ಗಂಟೆಗೆ ಕೊಪ್ಪಳ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದಸರಾ ಕಾವ್ಯ ಸಂಭ್ರಮ-2023 ಕಾರ್ಯಕ್ರಮವನ್ನು ಏರ್ಪಡಿಸಿದೆ.
ಕಾರ್ಯಕ್ರಮವನ್ನು ಹಂಪಿ, ಕನ್ನಡ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಡಿ.ವಿ. ಪರಮಶಿವಮೂರ್ತಿಯವರು ಉದ್ಘಾಟಿಸಲಿದ್ದಾರೆ. ನಂತರದಲ್ಲಿ ಕವಿಗೋಷ್ಠಿಗಳು ನಡೆಯಲಿದ್ದು, ಕವಿಗೋಷ್ಠಿ-1 ರ ಅಧ್ಯಕ್ಷತೆಯನ್ನು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಟಿ.ಎಂ. ಭಾಸ್ಕರ್ ಅವರು ವಹಿಸುವರು. ಕವಿಗೋಷ್ಠಿ-2ರ ಅಧ್ಯಕ್ಷತೆಯನ್ನು ಬೆಂಗಳೂರು ದೂರದರ್ಶನ ಕೇಂದ್ರದ ನಿರ್ದೇಶಕರಾದ ಡಾ. ನಿರ್ಮಲಾ ಎಲಿಗಾರ ಐ.ಬಿ.ಪಿ.ಎಸ್., ಇವರು ವಹಿಸುವರು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕೊಪ್ಪಳ ಜನದನಿ ಪ್ರಕಾಶನದ ಪ್ರಕಾಶಕಿ ಸಾವಿತ್ರಿ ಮುಜಮದಾರ ಹಾಗೂ ಕೊಪ್ಪಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ತಿಮ್ಮಾರೆಡ್ಡಿ ಮೇಟಿ ಇವರುಗಳು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಬಿ.ಕೆ. ರವಿ ಅವರು ವಹಿಸುವರು ಎಂದು ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.

About Mallikarjun

Check Also

screenshot 2025 12 08 17 40 00 68 680d03679600f7af0b4c700c6b270fe7.jpg

ಭಾಗ್ಯನಗರ: ಪ್ರಾಣಿ ಆರೈಕೆ ಕೇಂದ್ರದಲ್ಲಿನ ನಾಯಿಗಳನ್ನು ದತ್ತು ಪಡೆಯಲು ಅವಕಾಶ

ಭಾಗ್ಯನಗರ: ಪ್ರಾಣಿ ಆರೈಕೆ ಕೇಂದ್ರದಲ್ಲಿನ ನಾಯಿಗಳನ್ನು ದತ್ತು ಪಡೆಯಲು ಅವಕಾಶ Bhagyanagar: Dogs at animal care center available …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.