Breaking News

ಅ.15 ರಂದು ದಸರಾ ಕಾವ್ಯ ಸಂಭ್ರಮ

Dussehra poetry celebration on A.15

ಕೊಪ್ಪಳ ಅಕ್ಟೋಬರ್ 13 (ಕರ್ನಾಟಕ ವಾರ್ತೆ): ಕೊಪ್ಪಳ ವಿಶ್ವವಿದ್ಯಾಲಯ ವತಿಯಿಂದ ಕೊಪ್ಪಳ ಜಿಲ್ಲಾ ರಜತ ಮಹೋತ್ಸವ ಅಂಗವಾಗಿ ಅಕ್ಟೋಬರ್ 15 ರಂದು ಬೆಳಿಗ್ಗೆ 10.00 ಗಂಟೆಗೆ ಕೊಪ್ಪಳ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದಸರಾ ಕಾವ್ಯ ಸಂಭ್ರಮ-2023 ಕಾರ್ಯಕ್ರಮವನ್ನು ಏರ್ಪಡಿಸಿದೆ.
ಕಾರ್ಯಕ್ರಮವನ್ನು ಹಂಪಿ, ಕನ್ನಡ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಡಿ.ವಿ. ಪರಮಶಿವಮೂರ್ತಿಯವರು ಉದ್ಘಾಟಿಸಲಿದ್ದಾರೆ. ನಂತರದಲ್ಲಿ ಕವಿಗೋಷ್ಠಿಗಳು ನಡೆಯಲಿದ್ದು, ಕವಿಗೋಷ್ಠಿ-1 ರ ಅಧ್ಯಕ್ಷತೆಯನ್ನು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಟಿ.ಎಂ. ಭಾಸ್ಕರ್ ಅವರು ವಹಿಸುವರು. ಕವಿಗೋಷ್ಠಿ-2ರ ಅಧ್ಯಕ್ಷತೆಯನ್ನು ಬೆಂಗಳೂರು ದೂರದರ್ಶನ ಕೇಂದ್ರದ ನಿರ್ದೇಶಕರಾದ ಡಾ. ನಿರ್ಮಲಾ ಎಲಿಗಾರ ಐ.ಬಿ.ಪಿ.ಎಸ್., ಇವರು ವಹಿಸುವರು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕೊಪ್ಪಳ ಜನದನಿ ಪ್ರಕಾಶನದ ಪ್ರಕಾಶಕಿ ಸಾವಿತ್ರಿ ಮುಜಮದಾರ ಹಾಗೂ ಕೊಪ್ಪಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ತಿಮ್ಮಾರೆಡ್ಡಿ ಮೇಟಿ ಇವರುಗಳು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಬಿ.ಕೆ. ರವಿ ಅವರು ವಹಿಸುವರು ಎಂದು ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.

About Mallikarjun

Check Also

ಖೊಟ್ಟಿ ದಾಖಲೆ ಸೃಷ್ಟಿಸಿ, ಬಿಪಿಎಲ್ ಪಡಿತರ ಚೀಟಿ ಪಡೆದಿದ್ದ ಬಿಜೆಪಿ ಮುಖಂಡನ ವಿರುದ್ಧ ದೂರು ದಾಖಲು, ದಂಡವಸೂಲಿ.

ಕಾರಟಗಿ: ತಾಲೂಕಿನ ಸಿದ್ಧಾಪುರ ಗ್ರಾಮದ ಬಿಜೆಪಿ ಮುಖಂಡ ಆಗಿರುವ ಮಹಿಬೂಬ್ ಸಾಬ್ ಮುಲ್ಲಾ (ಎಂ.ಡಿ.ಎಸ್) ತಂದೆ ಮೋದಿನ್ ಸಾಬ್ ಈತನು …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.