Breaking News

ಕರ್ನಾಟಕ ಈಶಾನ್ಯ ಪದವೀಧರರ ಮತಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೊಳಿಸಲು ವೇಳಾಪಟ್ಟಿ ಪ್ರಕಟ

Schedule announced for inclusion of name in voter list of Karnataka North East Graduate Constituency

ಜಾಹೀರಾತು
Screenshot 2023 10 16 17 10 03 52 680d03679600f7af0b4c700c6b270fe7 300x168

ಕೊಪ್ಪಳ ಅಕ್ಟೋಬರ್ 16 (ಕರ್ನಾಟಕ ವಾರ್ತೆ): ಭಾರತ ಚುನಾವಣಾ ಆಯೋಗದ ದಿನಾಂಕ: 09.08.2023 ರ ಪತ್ರದನ್ವಯ, ಕರ್ನಾಟಕ ಈಶಾನ್ಯ ಪದವೀಧರರ ಮತಕ್ಷೇತ್ರದ ಮತದಾರರ ಪಟ್ಟಿಯನ್ನು ಹೊಸದಾಗಿ ಸಿದ್ಧಪಡಿಸಲಾಗುತ್ತಿರುವುದರಿಂದ, ಈ ಹಿಂದಿನ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಮತದಾರರು ಸಹ ನಮೂನೆ-18 ರಲ್ಲಿ ಹೊಸದಾಗಿ ಅರ್ಜಿಯನ್ನು ಸಲ್ಲಿಸಲು ನಿರ್ದೇಶನವಿರುವುದರಿಂದ ಅರ್ಹ ಪದವೀಧರರು ಕರ್ನಾಟಕ ಈಶಾನ್ಯ ಪದವೀಧರರ ಮತಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೊಳಿಸಲು ತಿಳಿಸಲಾಗಿದೆ.
ಪ್ರಾದೇಶಿಕ ಆಯುಕ್ತರು ಹಾಗೂ ಮತದಾನ ನೋಂದಣಾಧಿಕಾರಿಗಳು ಸಹ ಈ ನಿಟ್ಟಿನಲ್ಲಿ, ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ಸಿದ್ಧಪಡಿಸುವಲ್ಲಿ ಕಾರ್ಯಪ್ರವೃತ್ತರಾಗಲು ಸೂಚಿಸಿರುತ್ತಾರೆ. ಭಾರತ ಚುನಾವಣಾ ಆಯೋಗದ ನಿಗಧಿತ ವೇಳಾಪಟ್ಟಿಯಂತೆ ಈಶಾನ್ಯ ಪದವೀಧರರ ಮತ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡುವ ಬಗ್ಗೆ ಭಾರತ ಚುನಾವಣಾ ಆಯೋಗವು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರನ್ನು ಕರ್ನಾಟಕ ಈಶಾನ್ಯ ಪದವೀಧರರ ಕ್ಷೇತ್ರದ ಮತದಾರರ ನೋಂದಣಾಧಿಕಾರಿಯನ್ನಾಗಿ ಹಾಗೂ ಈ ಚುನಾವಣಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ವಿಭಾಗದ ಎಲ್ಲಾ ಜಿಲ್ಲಾಧಿಕಾರಿಗಳನ್ನು, ಆಯುಕ್ತರು ಮಹಾನಗರ ಪಾಲಿಕೆ, ಕಲಬುರಗಿ ವಿಭಾಗದ ಆಯಾ ಉಪ ವಿಭಾಗಕ್ಕೆ ಸಂಬAಧಪಟ್ಟ ಎಲ್ಲಾ ಸಹಾಯಕ ಆಯುಕ್ತರು, ವಿಭಾಗದ ಎಲ್ಲಾ ತಹಶೀಲ್ದಾರರನ್ನು ಸಹಾಯಕ ಮತದಾರರ ನೋಂದಣಾಧಿಕಾರಿಯನ್ನಾಗಿ ನೇಮಿಸಿರುತ್ತದೆ. ಅರ್ಹತಾ ದಿನಾಂಕ: 01-11-2023 ಕ್ಕೆ ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಮತದಾರರ ಪಟ್ಟಿಯು ನೂತನವಾಗಿ ಸಿದ್ದಪಡಿಸುವ ಕಾರ್ಯವು ಈಗಾಗಲೇ ಪ್ರಾರಂಭವಾಗಿರುತ್ತದೆ.
ಈಶಾನ್ಯ ಪದವೀಧರರ ಮತ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ಅರ್ಜಿ ನಮೂನೆ-18 ರಲ್ಲಿ ಅರ್ಜಿಯನ್ನು ಸ್ವೀಕರಿಸಲು ನವೆಂಬರ್ 06(ಸೋಮವಾರ) ಕೊನೆಯ ದಿನವಾಗಿದೆ. ಕರಡು ಮತದಾರರ ಪಟ್ಟಿಯನ್ನು ನವೆಂಬರ್ 23 ರಂದು(ಗುರುವಾರ) ಪ್ರಕಟಿಸಲಾಗುವುದು. ನವೆಂಬರ್ 23 ರಿಂದ ಡಿಸೆಂಬರ್ 09 ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳಿಗೆ ಅವಧಿ ನಿಗದಿಪಡಿಸಲಾಗಿದ್ದು, ಅಂತಿಮ ಮತದಾರರ ಪಟ್ಟಿಯನ್ನು ಡಿಸೆಂಬರ್ 30 ರಂದು ಪ್ರಕಟಿಸಲಾಗುವುದು.
ಕರ್ನಾಟಕ ಈಶಾನ್ಯ ಪದವೀಧರರ ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಲು ಮಾರ್ಗಸೂಚಿಗಳನ್ನು ನಿಗದಿಪಡಿಸಲಾಗಿದ್ದು, ಅದರನ್ವಯ ಅರ್ಹತಾ ದಿನಾಂಕ: 01-11-2023 ಕ್ಕಿಂತ 3 ವರ್ಷಗಳ ಪೂರ್ವದಲ್ಲಿ ಅಂದರೆ, ದಿನಾಂಕ: 01-11-2020 ಕ್ಕಿಂತಲೂ ಹಿಂದೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವೀಧರರಾಗಿರಬೇಕು. ದಿನಾಂಕ: 01-11-2020 ಕ್ಕಿಂತಲೂ ಮೊದಲು ಪದವಿ ಪಡೆದಿರುವಂತಹ ಪದವೀಧರರು, ನಿಗಧಿಪಡಿಸಿದ ನಮೂನೆ-18 ರಲ್ಲಿ (ಭಾವ ಚಿತ್ರದೊಂದಿಗೆ) ಭರ್ತಿ ಮಾಡಿದ ಅರ್ಜಿಯೊಂದಿಗೆ ಕಡ್ಡಾಯವಾಗಿ, ತಾವು ಉತ್ತೀರ್ಣವಾಗಿರುವ ಅಂಕಪಟ್ಟಿ, ಆಧಾರ ಕಾರ್ಡ್, ಚುನಾವಣಾ ಗುರುತಿನ ಚೀಟಿ ಹಾಗೂ ವಾಸಿಸುತ್ತಿರುವ ವಾಸಸ್ಥಳದ ದಾಖಲೆಗಳನ್ನು ಸ್ವಯಂ ದೃಢೀಕರಿಸಿ, ಅಲ್ಲದೇ ಪತ್ರಾಂಕಿತ ಅಧಿಕಾರಿಯಿಂದ ದೃಢೀಕರಿಸಿ, ಅರ್ಜಿಯೊಂದಿಗೆ ದಿನಾಂಕ: 06-11-2023 ರ ಒಳಗಾಗಿ ಮತದಾರರ ನೊಂದಣಾಧಿಕಾರಿಗಳು/ಸಹಾಯಕ ಮತದಾರರ ನೊಂದಣಾಧಿಕಾರಿಗಳ ಕಾರ್ಯಾಲಯದಲ್ಲಿ ಸಲ್ಲಿಸಬಹುದು.
ಸೇವೆಯಲ್ಲಿರುವ ಸರ್ಕಾರಿ ನೌಕರರು, ತಮ್ಮ ಇಲಾಖಾ ಮುಖ್ಯಸ್ಥರ ಮೂಲಕ, ಇಲಾಖಾ ಮುಖ್ಯಸ್ಥರು ತಮ್ಮ ಅಧೀನದಲ್ಲಿ ಬರುವ ಸರ್ಕಾರಿ ನೌಕರರ ಸೇವಾ ದಾಖಲೆಗಳನ್ನು ಪರಿಶೀಲಿಸಿ, ಆಯೋಗವು ನಿಗಧಿಪಡಿಸಿರುವ 3ನೇ ಅನುಸೂಚಿತ ನಮೂನೆಯಲ್ಲಿ ದೃಢೀಕರಣ ಪತ್ರವನ್ನು ನೀಡಿ, ತಮ್ಮ ಕಚೇರಿಯ ಎಲ್ಲಾ ಅರ್ಹ ಸಿಬ್ಬಂದಿಗಳ ಅರ್ಜಿಯನ್ನು ಒಟ್ಟಾಗಿ ಗೊತ್ತುಪಡಿಸಿದ ಅಧಿಕಾರಿಗಳಿಗೆ, ದಿನಾಂಕ: 06-11-2023 ರ ರೊಳಗಾಗಿ ನೀಡಬಹುದು. ವಕೀಲರು, ವೈದ್ಯರು, ಚಾರ್ಟರ್ಡ್ ಅಕೌಂಟೆAಟರು ಹಾಗೂ ನೊಂದಾಯಿತ ಇಂಜಿನಿಯರ್ ಸಂಘದ ಸದಸ್ಯರು, ದೃಢೀಕರಿಸಿದ ಪಟ್ಟಿಯೊಡನೆ ಅರ್ಜಿಗಳನ್ನು ಗೊತ್ತುಪಡಿಸಿದ ಅಧಿಕಾರಿಗಳಿಗೆ ನೀಡಬಹುದು. ಪ್ರಮಾಣ ಪತ್ರದೊಡನೆ, ಅರ್ಜಿದಾರನು ತಾನು ಓದಿದ ಕಾಲೇಜಿನ ಪ್ರಾಂಶುಪಾಲರು ಅಥವಾ ಸಂಬAಧಪಟ್ಟ ವಿಶ್ವವಿದ್ಯಾಲಯದ ರಿಜಿಸ್ಟಾçರಗಳಿಂದ ಪ್ರಮಾಣ ಪತ್ರವನ್ನು ಪಡೆದು ಅರ್ಜಿಯನ್ನು ಸಲ್ಲಿಸಬಹುದು. ನಮೂನೆ-18 ಈಗಾಗಲೇ ಎಲ್ಲಾ ಗೊತ್ತುಪಡಿಸಿದ ಅಧಿಕಾರಿಗಳ ಕಛೇರಿಯಲ್ಲಿ ಲಭ್ಯವಿದ್ದು, ನಮೂನೆ-18 ನ್ನು ಅರ್ಹ ಮತದಾರರು ಉಚಿತವಾಗಿ ಪಡೆಯಬಹುದಾಗಿದೆ. ಅರ್ಹ ಪದವಿಧರರು, ಸಂಬAಧಪಟ್ಟ ಅಧಿಕಾರಿಗಳಿಗೆ ಚುನಾವಣಾ ಗುರುತಿನ ಚೀಟಿಯ ಎಪಿಕ್ ಸಂಖ್ಯೆಯ ಮಾಹಿತಿಯನ್ನು ಒದಗಿಸತಕ್ಕದ್ದು. ಅರ್ಹ ಪದವಿಧರರು ಮೂಲ ಪದವಿ ಪ್ರಮಾಣ ಪತ್ರ ಮತ್ತು ಅದರ ಪ್ರತಿಯನ್ನು ಸ್ವಯಂ ದೃಢೀಕರಿಸಿಕೊಂಡು, ಗೊತ್ತುಪಡಿಸಿದ ಅಧಿಕಾರಿಯ ಮುಂದೆ ಖುದ್ದು ಹಾಜರಾಗಿ, ಅವರಿಂದ ದೃಢೀಕರಿಸಿಕೊಂಡು ಅವರಲ್ಲಿಯೇ ಅರ್ಜಿಯನ್ನು ಕಡ್ಡಾಯವಾಗಿ ನೀಡಬೇಕು.
ಯಾವುದೇ ವ್ಯಕ್ತಿ ಅಂಚೆ ಮೂಲಕ ಮತದಾರರ ನೊಂದಣಾಧಿಕಾರಿಗಳು, ಸಹಾಯಕ ಮತದಾರರ ನೊಂದಣಾಧಿಕಾರಿಗಳಿಗೆ ಅರ್ಜಿಯನ್ನು ಸಲ್ಲಿಸಿದಲ್ಲಿ, ಅಂತಹ ಅರ್ಜಿದಾರರಿಗೆ ಗೊತ್ತುಪಡಿಸಿದ ಅಧಿಕಾರಿಯು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಬಹುದು. ಒಂದು ವೇಳೆ ಅರ್ಜಿದಾರರು ವಿಚಾರಣೆಗೆ ಹಾಜರಾಗದೇ ಇದ್ದಲ್ಲಿ ಅಥವಾ ದಾಖಲೆಗಳನ್ನು ಹಾಜರುಪಡಿಸದಿದ್ದಲ್ಲಿ ಅರ್ಜಿಯನ್ನು ತಿರಸ್ಕರಿಸಬಹುದಾಗಿರುತ್ತದೆ. ಬಲ್ಕ (ಗುಚ್ಚಗಳಲ್ಲಿ) ಅರ್ಜಿಗಳನ್ನು ಸ್ವೀಕರಿಸುವುದಿಲ್ಲ. ಆಯೋಗವು ಮುಂಬರುವ ದಿನಗಳಲ್ಲಿ ಸದರಿ ನಮೂನೆ-18 ರ ಅರ್ಜಿಗಳನ್ನು ಇಆರ್‌ಎಮ್‌ಎಸ್ ತಂತ್ರಾAಶದಲ್ಲಿ ಅಳವಡಿಸಲು ಉದ್ದೇಶಿಸಿರುತ್ತಾರೆ. ಅರ್ಹ ಪದವಿಧರರು ಹೆಚ್ಚಿನ ಆಸಕ್ತಿ ವಹಿಸಿ, ಈ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊAಡು, ಸುಭದ್ರ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವಲ್ಲಿ, ಸಕ್ರಿಯವಾಗಿ ಪಾಲ್ಗೊಳಬೇಕೆಂದು ಸಹಾಯಕ ಮತದಾರರ ನೋಂದಣಾಧಿಕಾರಿಗಳು ಹಾಗೂ ಕೊಪ್ಪಳ ತಹಶೀಲ್ದಾರರು ಪ್ರಕಟಣೆ ಮೂಲಕ ವಿನಂತಿಸಿದ್ದಾರೆ.

About Mallikarjun

Check Also

20251015 201304 collage.jpg

ರೈತರು ಕೃಷಿ ಸಂಸ್ಕರಣಾ ಘಟಕ ತರಬೇತಿಯಸದುಪಯೋಗ ಪಡೆದುಕೊಳ್ಳಬೇಕು- ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

Farmers should take advantage of agro-processing unit training - Union Minister Nirmala Sitharaman ಕೊಪ್ಪಳ ಅಕ್ಟೋಬರ್ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.