Breaking News

ನಗರಕ್ಕೆ ಇಂದು ವಾಲ್ಮೀಕಿ ಶ್ರೀಗಳು ಜಿಲ್ಲಾ ಮಟ್ಟದ ಸಭೆ

District level meeting of Mr. Valmiki for the city today

ಕೊಪ್ಪಳ: ನಗರದ ಹಳೆ ಜಿಲ್ಲಾ ಆಸ್ಪತ್ರೆ ಹಿಂದುಗಡೆ ಇರುವ ವಾಲ್ಮೀಕಿ ಭವನದಲ್ಲಿ ರಾಜನಹಳ್ಳಿಯ ಶ್ರೀ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಮಹಾಸ್ವಾಮಿಗಳು ಆಗಮಿಸಿ ಜಿಲ್ಲಾಮಟ್ಟದ ಸಮುದಾಯದ ವಿಶೇಷ ಸಭೆಯನ್ನು ಅಕ್ಡೋಬರ್ 18 ಬೆಳಿಗ್ಗೆ 10.30 ಕ್ಕೆ ನಡೆಸುವರು ಎಂದು ಸಮಾಜದ ಯುವ ಮುಖಂಡ ಮಂಜುನಾಥ ಜಿ. ಗೊಂಡಬಾಳ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು ಸಭೆಯ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ವಾಲ್ಮೀಕಿ ನಾಯಕ ಮಹಾಸಭಾದ ಜಿಲ್ಲಾಧ್ಯಕ್ಷ ಟಿ. ರತ್ನಾಕರ ಅವರು ವಹಿಸಲಿದ್ದಾರೆ, ಸಭೆಯಲ್ಲಿ ಗುರುಪೀಠದ ಜಿಲ್ಲಾ ಧರ್ಮದರ್ಶಿ ರಾಮಣ್ಣ ಕಲ್ಲನವರ್, ತಾಲೂಕ ಅಧ್ಯಕ್ಷ ಶರಣಪ್ಪ ನಾಯಕ, ರಾಜ್ಯ ಕಾರ್ಯದರ್ಶಿ ಸುರೇಶ್ ಡೊಣ್ಣಿ ಸೇರಿದಂತೆ ಜಿಲ್ಲೆಯ ಅನೇಕ ಮುಖಂಡರು ಪಾಲ್ಗೊಳ್ಳುವರು. ಸದರಿ ಸಭೆಯು ಅತ್ಯಂತ ಮಹತ್ವದ್ದಾಗಿದ್ದು, ಇತ್ತೀಚೆಗೆ ಸಮಾಜದಲ್ಲಿ ಬಿರುಕು ಮೂಡಿಸುವ ಹಾಗೆ ಮಠದ ಬಗ್ಗೆ ಮತ್ತು ಶ್ರೀಗಳ ಬಗ್ಗೆ ಅಪಸ್ವರದ ಮಾತುಗಳು ಬರುತ್ತಿದ್ದು, ಈಚೆಗೆ ರಾಜ್ಯಮಟ್ಟದ ಸಭೆಯಲ್ಲಿ ಅದರ ಕುರಿತು ಮನವರಿಕೆ‌ ಮಾಡಲಾಗಿದ್ದು, ಜಿಲ್ಲಾ ಹಂತದಲ್ಲೂ ಅಂತಹ ಕೆಲಸ ಮಾಡಲಾಗುತ್ತಿದೆ. ಸಮಾಜದವರಿಗೆ ಇರುವ ಎಲ್ಲಾ ರೀತಿಯ ಅನುಮಾನಗಳಿಗೆ ಉತ್ತರಿಸುವ ಜೊತೆಗೆ ಜಿಲ್ಲೆಯಲ್ಲಿ ಸಮಾಜದ ಸಂಘಟನೆ ಕುರಿತಾದ ಹಾಗೂ ಸಮುದಾಯದ ಜನಗಳಿಗೆ ಆಗುತ್ತಿರುವ ತೊಂದರೆ ಸರಿಪಡಿಸುವ ನಿಟ್ಟಿನಲ್ಲಿ ಸಭೆಯಲ್ಲಿ ಸುಧೀರ್ಘ ಚರ್ಚೆ ಮಾಡುವರು. ಸಭೆಯ ನಂತರ ಜಿಲ್ಲಾ ಕೇಂದ್ರದಲ್ಲಿ ಇರುವ ಪರಿಶಿಷ್ಡ ಪಂಗಡದ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ. ನಾಗೇಂದ್ರರವರಿಗೆ ವರದಿ ಮಾಡುವ ಉದ್ದೇಶ ಇದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About Mallikarjun

Check Also

ಮತದಾನ ಮಾಡದವರ ಪೌರತ್ವ ನಿಷೇಧಿಸಿ: ಸಗ್ರೀವಾ

ಗಂಗಾವತಿ.ಮೇ.06: ಲೋಕಸಭಾ ಚುನಾವಣೆ ನಿಮಿತ್ತ ಮೇ.07ರಂದು ನಡೆಯುವ ಮತದಾನದಲ್ಲಿ ಎಲ್ಲರೂ ಉತ್ಸಾಹದಿಂದ ಪಾಲ್ಗೊಂಡು ಮತ ಚಲಾಯಿಸಬೇಕು. ಮತದಾನ ಮಾಡದೆ ಹೊರ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.