Gangavati-Vijaypur New Railway, Nilda for Upgrading: Thanks to MPs.
ಗಂಗಾವತಿ:ಕೊಪ್ಪಳ ಲೋಕಸಭಾ ಕ್ಷೇತ್ರದ ಸದಸ್ಯರಾದ ಸಂಗಣ್ಣ ಕರಡಿಯವರು ಗಂಗಾವತಿ ಮತ್ತು ಭಾನಾಪೂರ ರೇಲ್ವೆ ನಿಲ್ದಾಣ ಮೇಲ್ದರ್ಜೆಗೆ ಏರಿಸಲು ಮತ್ತು ಜಿಲ್ಲೆಯ ವಿವಿಧ ರೇಲ್ವೆ ಸೌಲಭ್ಯ ಒದಗಿಸಲು ಒತ್ತಾಯಿಸಿ, ಹುಬ್ಬಳ್ಳಿಯ ನೈರುತ್ಯ ರೇಲ್ವೆ ವಿಭಾಗದ ಜನರ ಮ್ಯಾನೇಜರ್ ಅವರನ್ನು ಭೇಟಿಯಾಗಿ,ಒತ್ತಾಯಿಸಿದ್ದಾರೆ.
ಗಂಗಾವತಿ ರೇಲ್ವೆ ಸ್ಟೇಷನ್ ನಲ್ಲಿ ಎಕ್ಸಿಲೇಟರ್,ಲಿಫ಼್ಟ ಅಳವಡಿಸಲು ಮತ್ತು ಅಧಿಕೃತ ರೇಲ್ವೆ ಸಿಬ್ಬಂದಿ ಹೊಂದಿರುವ ಟಿಕೆಟ್ ಕೌ೦ಟರ್ ಆರಂಭಿಸಲು ಸಂಸದರು ಆಗ್ರಹಿಸಿದ್ದು,ಅದಕ್ಕೆ ರೇಲ್ವೆ ಇಲಾಖೆ ಒಪ್ಪಿಗೆ ನೀಡಿದೆ ಎಂದು ಮೂಲಗಳು ತಿಳಿಸಿವೆ.
ಸಂಸದರ ಕೋರಿಕೆಯ ಪ್ರಕಾರ ಗಂಗಾವತಿ-ವಿಜಯಪುರ ನೂತನ ರೇಲ್ವೆ ಆರಂಭವಾಗಲಿದೆ ಮತ್ತು ಅಯೋಧ್ಯೆ-ಗಂಗಾವತಿ ನಡುವೆ ರಾಮಾಂಜನೇಯ ಎಕ್ಸ್ಪ್ರೆಸ್ ರೇಲ್ವೆ ಆರಂಭಿಸಲು ಆಗ್ರಹಿಸಿ ಪತ್ರ ಬರೆದಿದ್ದಾರೆ.
ಗಾಂಧೀಜಿಯವರು ಇಳಿದಿದ್ದ ಭಾನಾಪೂರ ರೇಲ್ವೆ ಸ್ಟೇಷನ್ ಅಭಿವೃದ್ಧಿ ಪಡಿಸಲು ಸಂಸದರು ಈ ಸಂಧರ್ಬದಲ್ಲಿ ಒತ್ತಾಯಿಸಿದ್ದಾರೆ.
ಗಿಣಿಗೇರಾ ರೇಲ್ವೆ ನಿಲ್ದಾಣದ ನಾಲ್ಕನೇ ಪ್ಲಾಟ್ ಫಾರಂ ಎತ್ತರಿಸಲು ಸಂಗಣ್ಣ ಕರಡಿ ಒತ್ತಾಯಿಸಿದ್ದಾರೆ.ಈ ಬಗ್ಗೆ ಮಾಹಿತಿ ಪಡೆದ ಕರ್ನಾಟಕ ರಾಜ್ಯ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆಯ ನಿರ್ಧೇಶಕ ಹಾಗೂ ಕೊಪ್ಪಳ ಜಿಲ್ಲೆಯ ಅಧ್ಯಕ್ಷ ಅಶೋಕಸ್ವಾಮಿ ಹೇರೂರ ಸಂಸದರಿಗೆ ಕೃತಜ್ಞತೆಗಳನ್ನು ತಿಳಿಸಿದ್ದಾರೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…