Forced to vacate MSIL liquor shops near CBS Ganj Hamalara Quattros.
ಗಂಗಾವತಿ: ನಗರದ ಸಿ.ಬಿ.ಎಸ್ ಗಂಜ್ ಹಮಾಲರ ಕ್ವಾಟ್ರಸ್ ವಸತಿ ಗೃಹಗಳ ಹತ್ತಿರ ಇರುವ ಎಂ.ಎಸ್.ಐ.ಎಲ್ ಅಂಗಡಿಯಿAದ ದಿನನಿತ್ಯ ರಾತ್ರಿ ಸಮಯದಲ್ಲಿ ಮಹಿಳೆಯರು ಮತ್ತು ಮಕ್ಕಳು ಹೊರಗಡೆ ಬರಲಾರದಂತ ಪರಿಸ್ಥಿತಿ ನಿರ್ಮಾಣವಾಗಿದೆ ಮತ್ತು ಕುಡುಕರು ಕುಡಿದ ಮತ್ತಿನಲ್ಲಿ ಗಲಾಟೆ ಮಾಡುತ್ತಿದ್ದು, ವಿನಾಕಾರಣ ಗಲಾಟೆಗಳು ಸಂಭವಿಸುತ್ತಿವೆ ಎಂದು ಸಿ.ಐ.ಟಿ.ಯು ಜಿಲ್ಲಾಧ್ಯಕ್ಷರಾದ ನಿರುಪಾದಿ ಬೆಣಕಲ್ ಪ್ರಕಟಣೆಯಲ್ಲಿ ಆತಂಕ ವ್ಯಕ್ತಪಡಿಸಿದರು.
ಅವರು ಸಿ.ಬಿ.ಎಸ್ ಗಂಜ್ ಹಮಾಲರ ಕ್ವಾಟ್ರಸ್ ಹತ್ತಿರದ ಎಂ.ಎಸ್.ಐ.ಎಲ್ ಮದ್ಯದಂಗಡಿಯನ್ನು ತೆರವುಗೊಳಿಸಲು ಶುಕ್ರವಾರ ಅಬಕಾರಿ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದರು. ಹಮಾಲರ ಕ್ರಾಟ್ರಸ್ನಲ್ಲಿ ಹೆಚ್ಚಾಗಿ ಹಮಾಲರ ಕುಟುಂಬಗಳು ವಾಸಿಸುತ್ತಿದ್ದು, ದುಡಿದ ಹಣವನ್ನು ಮದ್ಯದ ಅಂಗಡಿಗೆ ವ್ಯಯ ಮಾಡುತ್ತಿದ್ದಾರೆ. ಸುಮರು ೧೫ ವರ್ಷದ ಮಕ್ಕಳು ಕುಡಿತದ ಚಟಕ್ಕೆ ಬಿದ್ದು ಹಾಳಾಗುತ್ತಿದ್ದಾರೆ. ಇದರಿಂದ ಹಮಾಲರ ವಸತಿ ಗೃಹಗಳಲ್ಲಿ ವಾಸ ಮಾಡುವ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿದೆ. ಅಬಕಾರಿ ಇಲಾಖೆ ಅಧಿಕಾರಿಗಳು ತಕ್ಷಣ ಎಚ್ಚೆತ್ತುಕೊಮಡು ಈ ಎಂ.ಎಸ್.ಐ.ಎಲ್ ಅಂಗಡಿಯನ್ನು ತೆರವುಗೊಳಿಸಬೇಕೆಂದು ಸಿ.ಐ.ಟಿ.ಯು ಒತ್ತಾಯಿಸಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಿ.ಐ.ಟಿ.ಯು ಉಪಾಧ್ಯಕ್ಷರಾದ ಮಂಜುನಾಥ ನಾಯಕ, ಕಾರ್ಯದರ್ಶಿಗಳಾದ ಇಬ್ರಾಹಿಂಸಾಬ, ಗಂಗಾವತಿ ತಾಲೂಕ ಅಧ್ಯಕ್ಷರಾದ ಕೃಷ್ಣಪ್ಪ, ಕಾರ್ಯದರ್ಶಿಯಾದ ಟಿ. ನಬಿ, ಹಮಾಲರ ಕ್ರಾಟ್ರಸ್ ಮುಖಂಡರಾದ ರಾಜಾಸಾಬ್, ರಹೀಮ್ಸಾಬ, ಲಕ್ಷö್ಮಣ, ಬಸಪ್ಪ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…