ಕಲ್ಯಾಣಸಿರಿ ವಿಶೇಷ

ಮಾದಪ್ಪ ಭಕ್ತಾದಿಗಳಿಗೆ ಹೆಬ್ಬಾವು ದರ್ಶನ

Hebba darshan for Madappa devotees


ವರದಿ :ಬಂಗಾರಪ್ಪ ಸಿ ಹನೂರು .
ಹನೂರು :ರಾಜ್ಯದ ನಾನಾಕಡೆಯಿಂದ ಕಾಲ್ನೆಡೆಗೆಯಲ್ಲಿ ಪಾದಯಾತ್ರೆ ಮಾಡುವ ಭಕ್ತಾದಿಗಳು ಅರಣ್ಯ ಪ್ರದೇಶದಲ್ಲಿ ಸಂಚರಿಸುವಾಗ ವನ್ಯಜೀವಿಗಳ ಬಗ್ಗೆ ನಿಗಾ ವಹಿಸುವುದು,ಬಹಳ ಮುಖ್ಯ ಮತ್ತು ಸೂಕ್ಷ್ಮತೆಯನ್ನು ಗಮನಿಸಿ ಹಗಲಿನ ವೇಳೆ ಪಾದಯಾತ್ರೆ ಕೈಗೊಳ್ಳುವುದು ಉತ್ತಮ ಎನ್ನಬಹುದು.
ಹನೂರು ತಾಲ್ಲೂಕಿನ ತಾಳಬೆಟ್ಟ – ಮಲೆ ಮಹದೇಶ್ವರ ಬೆಟ್ಟ ಮಾರ್ಗದಲ್ಲಿ ಭಾರಿ ಗಾತ್ರದ ಹೆಬ್ಬಾವು ಕಾಣಿಸಿಕೊಂಡು ಜನರಲ್ಲಿ ಆತಂಕ ಉಂಟುಮಾಡಿದ ಘಟನೆ ಗುರುವಾರ ರಾತ್ರಿ ನಡೆದಿದೆ.
ಪವಿತ್ರ ಜಾತ್ರಾ ಸ್ಥಳ ಮಲೆಮಹದೇಶ್ವರ ಬೆಟ್ಟಕ್ಕೆ ಹೋಗುವ ಮಾರ್ಗ ಮಧ್ಯೆ ತಾಳುಬೆಟ್ಟದಲ್ಲಿ ರಸ್ತೆಗೆ ಅಡ್ಡಲಾಗಿ ಹೆಬ್ಬಾವು ಮಲಗಿದ್ದು ಜನರಲ್ಲಿ ಆತಂಕ ಉಂಟು ಮಾಡಿತ್ತು ಕೆಲವರು ಆತಂಕಗೊಂಡರೆ ಇನ್ನು ಕೆಲವರು ವಿಡಿಯೋ ಚಿತ್ರಣ ಮಾಡಿದರು.
ಕೆಲಕಾಲ ಸಂಚಾರದ ದಟ್ಟಣೆಯಾಗಿತ್ತು . ಹೆಬ್ಬಾವು ರಸ್ತೆಗೆ ಅಡ್ಡಲಾಗಿ ಮಲಗಿದ್ದ ಕಾರಣ ಸುಮಾರು 20 ನಿಮಿಷಗಳ ಕಾಲ ರಸ್ತೆಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಜೊತೆಗೆ ಹೆಬ್ಬಾವನ್ನು ನೋಡಲು ಜನರು ಮುಗಿ ಬೀಳುತ್ತಿದ್ದ ದೃಶ್ಯ ಕಂಡುಬಂದಿತ್ತು. ಬಳಿಕ ನಿಧಾನವಾಗಿ ಹೆಬ್ಬಾವು ರಸ್ತೆ ಬದಿಗೆ ಹೊರಟ ನಂತರ ವಾಹನಗಳು ಮುಂದೆ ಸಾಗಿದವು.
ಮಹದೇಶ್ವರ ಬೆಟ್ಟಕ್ಕೆ ಅಮಾವಾಸ್ಯೆ ದೀಪಾವಳಿ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಹಗಲು- ರಾತ್ರಿ ಲೆಕ್ಕಿಸದೆ ಮಹಿಳೆಯರು, ಗಂಡಸರು ವೃದ್ಧರು ಮಕ್ಕಳು ಎಲ್ಲರೂ ಪಾದಯಾತ್ರೆ ಮಾಡುತ್ತಾರೆ. ಇಂತಹ ಸಂದರ್ಭದಲ್ಲಿ ರಾತ್ರಿ ವೇಳೆ ಮರದ ಕೆಳಗೆ ವಿಶ್ರಾಂತಿ ಪಡೆಯುವಾಗ ಪಾದಯಾತ್ರೆಗಳು ಎಚ್ಚರಿಕೆ ವಹಿಸಬೇಕೆಂದು ಸ್ಥಳದಲ್ಲಿದ್ದ ಭಕ್ತಾದಿಗಳು ತಿಳಿಸಿದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

14 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

15 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

15 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

15 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

15 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

15 hours ago