ಕಲ್ಯಾಣಸಿರಿ ವಿಶೇಷ

ಮೈಸೂರಿನಲ್ಲಿಅಶೋಕಸ್ವಾಮಿಹೇರೂರಅವರಿಗೆ ಸನ್ಮಾನ.

Tribute to Ashokaswamy Herura in Mysore.

ಮೈಸೂರು:ಸುವರ್ಣ ಕರ್ನಾಟಕ ಔಷಧ ವ್ಯಾಪಾರಿಗಳ ಸಂಘದ ಕಾನೂನು ಘಟಕದ ಅಧ್ಯಕ್ಷರಾಗಿ ಮತ್ತು ಕರ್ನಾಟಕ ರಾಜ್ಯ ವಾಣಿಜ್ಯೊಧ್ಯಮ ಮಂಡಳಿಯ ನಿರ್ದೇಶಕರಾಗಿ ಆಯ್ಕೆಯಾದ ಅಶೋಕಸ್ವಾಮಿ ಹೇರೂರ ಅವರನ್ನು ಮೈಸೂರು ಜಿಲ್ಲಾ ಔಷಧ ವ್ಯಾಪಾರಿಗಳು ಸನ್ಮಾನಿಸಿದರು.

ಮಂಗಳವಾರ ಸಂಘದ ಕಾರ್ಯಾಲಯದಲ್ಲಿ ಸಭೆ ಸೇರಿದ ಪದಾಧಿಕಾರಿಗಳು,ಹೇರೂರ ಅವರನ್ನು ಗೌರವಿಸಿದರು.

ಇಪ್ಪತ್ತು ವರ್ಷಗಳ ನಂತರ ರಾಜ್ಯದಲ್ಲಿ ಫ಼ಾರ್ಮಸಿ ಕೌನ್ಸಿಲ್ ಚುನಾವಣೆ ನಡೆಯುತ್ತಿದ್ದು,ಸದಸ್ಯತ್ವ ಸ್ಥಾನಕ್ಕೆ ಸ್ಪರ್ಧಿಸಿರುವ ಮೈಸೂರು ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದ ಅಧ್ಯಕ್ಷ ಎಸ್.ಮಂಜುನಾಥ ಅವರ ಆಯ್ಕೆಗೆ ಶ್ರಮಿಸಬೇಕೆಂದು ಕರೆ ಕೊಟ್ಟರು.

ಔಷಧ ಮತ್ತು ಕಾಂತಿ ವರ್ಧಕ ಕಾಯ್ದೆಯಲ್ಲಿ ಕೆಮಿಸ್ಟ ಆಯಿಂಡ್ ಡ್ರಗ್ಗಿಸ್ಟ ಎಂಬ ಪದವನ್ನು ತೆಗೆದು ಹಾಕಿ ಫ಼ಾರ್ಮಸಿ ಎಂದು ಬದಲಾಯಿಸಲಾಗಿದೆ.ಅದರಂತೆ ಅರ್ಹತಾ ವ್ಯಕ್ತಿ ಎಂಬುದನ್ನು ರಿಜಿಸ್ಟರ್ಡ ಫ಼ಾರ್ಮಸಿಸ್ಟ ಎಂದು ಬದಲಾಯಿಸಲಾಗಿದೆ ಎಂದು ಅಶೋಕಸ್ವಾಮಿ ಹೇರೂರ ಮಾಹಿತಿ ನೀಡಿದರು.

ಜನೌಷಧಿ ಕೇಂದ್ರಗಳಿಗೆ ಒಂದು ಕಾನೂನು ಸಾಮಾನ್ಯ ಔಷಧ ವ್ಯಾಪಾರಿಗಳಿಗೊಂದು ಕಾನೂನು ಮಾಡಲಾಗುತ್ತಿದೆ.ಇದನ್ನು ವಿರೋಧಿಸಿ ಪತ್ರ ಬರೆಯಲಾಗಿದೆ,ಈ ದೇಶದಲ್ಲಿ ಕಾನೂನು ಎಲ್ಲರಿಗೂ ‌ ಒಂದೇ ತಾರತಮ್ಯ ಮಾಡಲು ಸಾಧ್ಯವಿಲ್ಲ ಎಂದವರು ಅಭಿಪ್ರಾಯ ಪಟ್ಟರು.

ಅಧಿಕಾರಿಗಳು ಚೈನ್ ಸ್ಟೋರ್ಸ್ ಮತ್ತು ಜನೌಷಧಿ ಕೇಂದ್ರಗಳ ಪರಿವೀಕ್ಷಣೆ ನಡೆಸುವುದೇ ಇಲ್ಲ.ಕೇವಲ ಸಾಮಾನ್ಯ ಔಷಧ ಮಳಿಗೆಗಳ ಪರಿವೀಕ್ಷಣೆ ಮಾಡುತ್ತಾರೆ ಎಂಬ ಅಪಾದನೆ ಇಡೀ ರಾಜ್ಯದಲ್ಲಿಯೇ ಇದ್ದು, ಈ ಬಗ್ಗೆ ಇಲಾಖೆಯ ಗಮನವನ್ನು ಸೆಳೆಯಲಾಗುವುದು ಎಂದು ಹೇರೂರ ತಿಳಿಸಿದರು.

ಮೈಸೂರು ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದ ಅಧ್ಯಕ್ಷ ಎಸ್.ಮಂಜುನಾಥ ಸೇರಿದಂತೆ ಇತರ ಪದಾಧಿಕಾರಿಗಳಾದ ಸುನಿಲ್ ಎಸ್.ಪಿ.ಫ಼ಾರ್ಮಾ, ನಾಗೇಶ್ ನಿಮಿಶಾ ಅಸೋಸಿಯೇಟ್ಸ್,ರಮೇಶ,ಸಿದ್ಧು ನಾಯಕ್ ಲಕ್ಶ್ಮಿ ಫ಼ಾರ್ಮಾ ಮತ್ತು ಸಿದ್ದುರಾಜ್ ಮೆಡಿಲಿಂಕ್ ಫ಼ಾರ್ಮಾ ಮುಂತಾದವರು ಹಾಜರಿದ್ದರು.

Mallikarjun

Share
Published by
Mallikarjun

Recent Posts

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…

46 minutes ago

ಹುಂಡಿಗೆ ಬಿತ್ತು ಭಕ್ತನ iPhone! ಅಯ್ಯೋ ಹುಂಡಿಗೆ ಬಿದ್ಮೇಲೆ ಮುಗೀತು

Devotee's iPhone fell into his pocket! Alas, it ended after falling into his pocket. ಹುಂಡಿಗೆ…

52 minutes ago

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

20 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

20 hours ago